Breaking: ಗಲ್ವಾನ್ ಕಣಿವೆಯಿಂದ ಹಿಂದಕ್ಕೆ ಸರಿದ ಭಾರತ-ಚೀನಾ ಪಡೆ
ಲಡಾಖ್, ಜುಲೈ 6: ಗಲ್ವಾನ್ ಕಣಿವೆ ಪ್ರದೇಶದಿಂದ ಭಾರತ ಹಾಗೂ ಚೀನಾ ಸೇನೆ ಹಿಂದಕ್ಕೆ ಸರಿದಿದೆ.
Recommended Video
ಚೀನಾ ಸೇನಾ ಪಡೆ ಗಡಿ ಭಾಗದಿಂದ ಹಿಂದೆ ಸರಿದಿರುವುದು ಸತ್ಯವೇ ಎಂಬುದರ ಕುರಿತು ಭಾರತೀಯ ಸೇನೆ ಪರಿಶೀಲನೆ ನಡೆಸುತ್ತಿದೆ.
ಜೂನ್ 30 ರಂದು ನಡೆದ ಒಪ್ಪಂದದ ಪ್ರಕಾರ ಎರಡೂ ಸೇನೆಯು ಗಲ್ವಾನ್ ಕಣಿವೆಯಿಂದ ಹಿಂದಕ್ಕೆ ಸರಿಯಬೇಕಿತ್ತು.

ಚೀನಾವು ತನ್ನ ಪಡೆಯನ್ನು ಹಿಂದಕ್ಕೆ ತೆಗೆದುಕೊಳ್ಳಲು ನಿಜವಾಗಿಯೂ ಆಸಕ್ತಿ ಹೊಂದಿದ್ದಾರೆಯೇ ಎಂಬ ಮಾಹಿತಿ ಹೊರಬರಬೇಕಿದೆ.
ಕಳೆದ ವಾರ ಕಮಾಂಡರ್ ಹಂತದ ಸಭೆಯಲ್ಲಿ ಗಲ್ವಾನ್ ಕಣಿವೆ ಪ್ರದೇಶದಲ್ಲಿ ಇಬ್ಬರೂ ಕೂಡ ತನ್ನ ಸೇನೆಯನ್ನು ಹಿಂಪಡೆಯುವ ಕುರಿತು ಒಪ್ಪಂದ ಮಾಡಿಕೊಮಡಿದ್ದರು. ಅವರಿರುವ ಪ್ರದೇಶದಿಂದ 2-3 ಕಿ.ಮೀ ಹಿಂದಕ್ಕೆ ಕರೆದುಕೊಳ್ಳಬೇಕು ಎಂದು ಹೇಳಲಾಗಿತ್ತು. ಜೂನ್ 15 ರಂದು ಗಲ್ವಾನ್ ಕಣಿವೆಯಲ್ಲಿ ನಡೆದ ಸಂಘರ್ಷದಲ್ಲಿ 20 ಮಂದಿ ಭಾರತದ ಸೈನಿಕರು ಹುತಾತ್ಮರಾಗಿದ್ದರು.
ಇಡೀ ಪ್ರದೇಶ ಹೆಪ್ಪುಗಟ್ಟುವ ಚಳಿಯಿಂದ ಮುದುಡಿ ಹೋಗುತ್ತದೆ. ನದಿ ನೀರಿನ ಪ್ರವಾಹ ಚೀನಿ ಸೈನಿಕರ ಟೆಂಟ್ಗಳವರೆಗೆ ಚಾಚಿರುವುದು ಸ್ಯಾಟಲೈಟ್ ಚಿತ್ರಗಳಿಂದ ತಿಳಿದು ಬಂದಿದೆ.
ಪರಿಸ್ಥಿತಿ ಹೀಗೇ ಮುಂದುವರಿದರೆ ಶತ್ರು ಸೈನಿಕರು ಅಲ್ಲಿಂದ ಜಾಗ ಖಾಲಿ ಮಾಡುವುದು ಅನಿವಾರ್ಯವಾಗುತ್ತದೆ ಎಂದು ಭಾರತೀಯ ಸೇನಾಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Explained Story: ದೂರದ ಚೀನಾ ಭಾರತದ ಗಡಿಗೆ ಹೊಂದಿಕೊಂಡಿದ್ದು ಹೇಗೆ?
ಕಣಿವೆ ಭಾಗದ ವಾತಾವರಣದಲ್ಲಿ ತಾಪಮಾನ ದಿಢೀರ್ ಏರಿಕೆಯಾಗಿದ್ದು ಸುತ್ತಲಿನ ಹಿಮ ಶಿಖರಗಳು ಕರಗಿ ನೀರಾಗಿ ಹರಿಯತೊಡಗಿವೆ.ಇದರಿಂದ ಗಲ್ವಾನ್ ನದಿಗೆ ಹಿಮ ಬಂಡೆಗಳೇ ಹರಿದು ಬರುತ್ತಿದ್ದು, ನೀರಿನ ಹರಿವಿನ ಮಟ್ಟ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಳಗೊಂಡಿದೆ.
ಇದರ ಪರಿಣಾಮ ಇಡೀ ಪ್ರದೇಶದಲ್ಲಿ ರಕ್ತ ಹೆಪ್ಪುಗಟ್ಟಿಸುವ ಚಳಿಯ ವಾತಾವರಣವಿದೆ. ಸಂಘರ್ಷ ನಡೆದ ತಾಣದಿಂದ 5 ಕಿ.ಮೀ ದೂರದಲ್ಲಿ ಠಿಕಾಣಿ ಹೂಡಿರುವ ಚೀನಿ ಸೈನಿಕ
ಹಂತ ಹಂತವಾಗಿ ತಮ್ಮ ಸೇನೆಯನ್ನು ಹಿಂದಕ್ಕೆ ಪಡೆಯುವಂತೆ ಮಾತಾಗಿತ್ತು. ಇದಕ್ಕೆ ತಿಂಗಳುಗಳೇ ಹಿಡಿಯಬಹುದು ಎಂದು ಹೇಳಲಾಗಿತ್ತು. ಚೀನಾವು ಎಲ್ಎಸಿಯಲ್ಲಿ 20 ಸಾವಿರ ಸೈನಿಕರನ್ನು ನಿಯೋಜಿಸಿತ್ತು.
-
Transfer: ಕರ್ನಾಟಕ ಶಿಕ್ಷಕರಿಗೆ ಸಿಹಿ ಸುದ್ದಿ: ವರ್ಗಾವಣೆ ನಿಯಮಗಳಲ್ಲಿ ಮಹತ್ವ ಬದಲಾವಣೆ, ಯಾರು ಅರ್ಹರು? -
ವೈಭವ್ ಸೂರ್ಯವಂಶಿ ಕುರಿತು ಬಿಸಿಸಿಐಗೆ ಹೋಯ್ತು ವಿಶೇಷ ಮನವಿ; ಟೀಮ್ ಇಂಡಿಯಾ ಸೇರ್ತಾರಾ ಯುವ ಪ್ರತಿಭೆ? -
ಒಂದು ಬಟನ್ ಒತ್ತಿದರೆ ಬದಲಾಗುತ್ತೆ BMW ಕಾರಿನ ನಂಬರ್ ಪ್ಲೇಟ್, ಹೈಟೆಕ್ ಕಳ್ಳಾಟದ ವಿಡಿಯೋ ಭಾರಿ ವೈರಲ್ -
Asha Bhosle: ಗಾನ ಕೋಗಿಲೆ ಆಶಾ ಭೋಸ್ಲೆ ನಿಧನ: ದೇಶವೇ ಶೋಕದಲ್ಲಿ, ಸಾಮಾಜಿಕ ಜಾಲತಾಣದಲ್ಲಿ ಫ್ಯಾನ್ಸ್ ಕಂಬನಿ -
ಮೈಸೂರು-ಬೆಂಗಳೂರು ರೈಲು ಪ್ರಯಾಣಿಕರಿಗೆ ಗುಡ್ನ್ಯೂಸ್ ಕೊಟ್ಟ ವಿ.ಸೋಮಣ್ಣ -
ವಾಂಖೆಡೆಯಲ್ಲಿ ಆರ್ಸಿಬಿ-ಮುಂಬೈ ಇಂಡಿಯನ್ಸ್ ಪಂದ್ಯಕ್ಕೆ ಮಳೆ ಅಡ್ಡಿಯಾಗಲಿದ್ಯಾ? ಹವಾಮಾನ ಇಲಾಖೆ ವರದಿ ಹೀಗಿದೆ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Duet Songs: ಆಶಾ ಭೋಸ್ಲೆ-ಲತಾ ಮಂಗೇಶ್ಕರ್ ಸಹೋದರಿಯರ ಕಂಠಸಿರಿಯಲ್ಲಿ ಅರಳಿದ ಮಾಧುರ್ಯ: ಒಟ್ಟಿಗೆ ಹಾಡಿದ ಹಿಟ್ ಹಾಡುಗಳಿವು -
Karnataka Rains: ಸಮುದ್ರ ಮಲ್ಮೈ ಸುಳಿಗಾಳಿ, ಏಪ್ರಿಲ್ 14-17ರವರೆಗೆ ಬೆಂಗಳೂರು, ಇತರ ಜಿಲ್ಲೆಗಳಲ್ಲಿ ಮಳೆ -
ಎಪಿಎಂಸಿಯಲ್ಲಿ ಮೂಟೆಗಳು ಮೈಮೇಲೆ ಬಿದ್ದರೂ ಪವಾಡಸದೃಶ್ಯದಂತೆ ಬದುಕಿದ ಮಹಿಳೆ Video Viral -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
BESCOM Mithra: 'ಬೆಸ್ಕಾಂ ಮಿತ್ರ' ಸೇವೆ ತಾತ್ಕಾಲಿಕ ಸ್ಥಗಿತ, ಸುಧಾರಿತ ವ್ಯವಸ್ಥೆ ಶೀಘ್ರವೇ ಲಭ್ಯ












Click it and Unblock the Notifications