Get Updates
Get notified of breaking news, exclusive insights, and must-see stories!

ಸಾರಿ ಕೇಳಕ್ಕೆ ನನ್ನ ಹೆಸರು ಸಾವರ್ಕರ್ ಅಲ್ಲ: ರಾಹುಲ್ ಗಾಂಧಿ ಗುಡುಗು

ನವದೆಹಲಿ, ಮಾರ್ಚ್ 25: ಸಂಸತ್‌ ಸ್ಥಾನದಿಂದ ಅನರ್ಹಗೊಳಿಸಿದ ಒಂದು ದಿನದ ನಂತರ ಪತ್ರಿಕಾಗೋಷ್ಟಿ ನಡೆಸಿದ ರಾಹುಲ್ ಗಾಂಧಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು.

2019ರಲ್ಲಿ ಮೋದಿ ಉಪನಾಮ ಹೇಳಿಕೆಗಾಗಿ ಮಾನನಷ್ಟ ಮೊಕದ್ದಮೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸೂರತ್ ನ್ಯಾಯಾಲಯವು ರಾಹುಲ್‌ ಗಾಂಧಿ ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಪ್ರಧಾನಮಂತ್ರಿಯವರು ನನ್ನ ಮುಂದಿನ ಭಾಷಣದ ಬಗ್ಗೆ ಭಯಭೀತರಾಗಿದ್ದಾರೆ. ಲಂಡನ್‌ನಲ್ಲಿ ತಾವು ಮಾಡಿದ್ದ ಭಾಷಣಕ್ಕೆ ಮತ್ತು ಮಾನನಷ್ಟ ಮೊಕದ್ದಮೆಯ ವಿಚಾರಣೆಯ ಸಂದರ್ಭದಲ್ಲಿ ರಾಹುಲ್‌ ಅವರು ತಮ್ಮ ಹೇಳಿಕೆಗಳಿಗೆ ಏಕೆ ಕ್ಷಮೆಯಾಚಿಸಲಿಲ್ಲ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು ಸಾರಿ ಕೇಳಲು ನನ್ನ ಹೆಸರು ಸಾವರ್ಕರ್ ಅಲ್ಲ ಎಂದು ಹೇಳಿದರು.

my name is not Savarkar i am not asking Sorry: Rahul Gandhi

ಪ್ರಧಾನಿ ನನ್ನ ಮುಂದಿನ ಭಾಷಣಕ್ಕೆ ಹೆದರಿದ್ದರಿಂದ ನನ್ನನ್ನು ಸಂಸತ್‌ ಸದಸ್ಯ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ನಾನು ಅವರ ಕಣ್ಣುಗಳಲ್ಲಿ ಭಯವನ್ನು ಕಂಡಿದ್ದೇನೆ. ಅದಕ್ಕಾಗಿಯೇ ನಾನು ಸಂಸತ್ತಿನಲ್ಲಿ ಮಾತನಾಡಲು ಅವರು ಬಯಸುವುದಿಲ್ಲ ಎಂದರು. ತಾವು ಬಿಜೆಪಿ ಕ್ಷಮೆಯಾಚನೆ ಮಾಡಬೇಕು ಎಂಬ ಕರೆಗೆ ಪ್ರತಿಕ್ರಿಯಿಸಿದ ಅವರು ನನ್ನ ಹೆಸರು ಸಾವರ್ಕರ್ ಅಲ್ಲ, ನಾನು ಗಾಂಧಿ, ನಾನು ಕ್ಷಮೆ ಕೇಳುವುದಿಲ್ಲ ಎಂದರು.

ದೇಶದ ಆಂತರಿಕ ವ್ಯವಹಾರಗಳಲ್ಲಿ ಅಂತರಾಷ್ಟ್ರೀಯ ಶಕ್ತಿಗಳ ಹಸ್ತಕ್ಷೇಪವನ್ನು ರಾಹುಲ್‌ ಗಾಂಧಿ ಬಯಸಿದ್ದರು ಎಂಬ ಬಿಜೆಪಿಯ ಆರೋಪಗಳನ್ನು ಅವರು ನಿರಾಕರಿಸಿದರು. ತಮ್ಮ ಲಂಡನ್ ಹೇಳಿಕೆಗಳ ಮೇಲಿನ ಆರೋಪಗಳಿಗೆ ಸದನದಲ್ಲಿ ಪ್ರತಿಕ್ರಿಯಿಸಲು ಅವಕಾಶ ನೀಡುವಂತೆ ಸ್ಪೀಕರ್ ಅವರನ್ನು ಕೇಳಿದ್ದೇನೆ ಎಂದು ಅವರು ಹೇಳಿದರು.

ನಾನು ಭಾರತ ವಿರೋಧಿ ಶಕ್ತಿಗಳಿಗೆ ಸಹಾಯ ಮಾಡುತ್ತಿದ್ದೇನೆ ಎಂದು ಬಿಜೆಪಿ ನಾಯಕರು ಹೇಳಿಕೊಂಡಿದ್ದಾರೆ. ಈ ಆರೋಪಗಳಿಗೆ ಪ್ರತಿಕ್ರಿಯಿಸುವುದು ನನ್ನ ಹಕ್ಕು ಎಂದು ನಾನು ಸ್ಪೀಕರ್‌ಗೆ ಹೇಳಿದೆ. ಆದರೆ ಅವರು ನನಗೆ ಅವಕಾಶ ನೀಡಲಿಲ್ಲ. ನನಗೆ ಒಂದೇ ಒಂದು ಹೆಜ್ಜೆ ಇದೆ ಮತ್ತು ಅದು ಸತ್ಯಕ್ಕಾಗಿ ಹೋರಾಡುವುದು ಮತ್ತು ಈ ದೇಶದ ಪ್ರಜಾಸತ್ತಾತ್ಮಕ ಸ್ವರೂಪವನ್ನು ರಕ್ಷಿಸುವುದು. ನನ್ನನ್ನು ಜೀವಮಾನದವರೆಗೂ ಅನರ್ಹಗೊಳಿಸಿ, ಜೀವಿತಾವಧಿಯವರೆಗೆ ಜೈಲಿನಲ್ಲಿರಿಸಿದರೂ ನಾನು ಕರ್ತವ್ಯ ಮುಂದುವರಿಯುತ್ತೇನೆ ಎಂದರು.

my name is not Savarkar i am not asking Sorry: Rahul Gandhi

ಪತ್ರಿಕಾಗೋಷ್ಟಿಯಲ್ಲಿ ಪತ್ರಕರ್ತರಿಗೆ ನಾನು ನಿಮಗೆ ಚಿಂತಿತನಾಗಿ ಕಾಣುತ್ತಿದ್ದೇನೆಯೇ? ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದರು. ಮೋದಿ ಉಪನಾಮದ ಮೇಲಿನ ತಮ್ಮ ಹೇಳಿಕೆಯಿಂದ ರಾಹುಲ್‌ ಗಾಂಧಿ ಇತರ ಹಿಂದುಳಿದ ಸಮುದಾಯಗಳನ್ನು (ಒಬಿಸಿ) ಅವಮಾನಿಸಿದ್ದಾರೆ ಎಂದು ಬಿಜೆಪಿ ತನ್ನ ಹೇಳಿಕೆಯನ್ನು ಪುನರುಚ್ಚರಿಸಿದೆ.

ರಾಹುಲ್‌ ಗಾಂಧಿ ಅವರೊಬ್ಬರೇ ಅಲ್ಲ, ಬಿಜೆಪಿಯ ಆರು ಮಂದಿ ಸೇರಿದಂತೆ ದೇಶಾದ್ಯಂತ 32 ನಾಯಕರನ್ನು ಅನರ್ಹಗೊಳಿಸಲಾಗಿದೆ. ಕರ್ನಾಟಕದಲ್ಲಿ ಚುನಾವಣಾ ಲಾಭಕ್ಕಾಗಿ ರಾಹುಲ್ ಗಾಂಧಿಯನ್ನು ಬಲಿಪಶು ಎಂದು ಬಿಂಬಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಕೇಂದ್ರದ ಮಾಜಿ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.

ಪ್ರಧಾನಿ ಮೋದಿಯವರ ತವರು ರಾಜ್ಯವಾದ ಗುಜರಾತ್‌ನ ನ್ಯಾಯಾಲಯವು ಗುರುವಾರ ರಾಹುಲ್‌ ಗಾಂಧಿ ಅವರಿಗೆ ಮಾನನಷ್ಟ ಮೊಕದ್ದಮೆಯಲ್ಲಿ ದೋಷಿ ಎಂದು ಘೋಷಿಸಿದ್ದು, ಅವರಿಗೆ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಅದರ ಪರಿಣಾಮವಾಗಿ, ಮರುದಿನ ಅವರನ್ನು ಸಂಸದರಾಗಿ ಅನರ್ಹಗೊಳಿಸಲಾಯಿತು. ಈ ತೀರ್ಪಿನ ವಿರುದ್ಧ ಅವರು ಇನ್ನೂ ಉನ್ನತ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಬೇಕಾಗಿದೆ.

2019 ರ ಚುನಾವಣಾ ರ್‍ಯಾಲಿಯಲ್ಲಿ ಪ್ರಧಾನಿ ಮೋದಿ ಒಬ್ಬ ಕ್ರಿಮಿನಲ್ ಎಂದು ರಾಹುಲ್‌ ಗಾಂಧಿಯವರ ಹೇಳಿಕೆಯಿಂದ ಈ ವಿವಾದ ಉದ್ಭವಿಸಿದೆ. ಎಲ್ಲಾ ಕಳ್ಳರಿಗೂ ಮೋದಿ ಎಂಬ ಸಾಮಾನ್ಯ ಉಪನಾಮ ಇದೆ ಹೇಗೆ ಎಂದು ಅವರು ಕರ್ನಾಟಕದ ಕೋಲಾರದಲ್ಲಿ ಹೇಳಿದ್ದರು. ಇದು ಅವರ ವಿರುದ್ಧ ವಿವಿಧ ರಾಜ್ಯಗಳಲ್ಲಿ ಅನೇಕ ಮಾನನಷ್ಟ ಮೊಕದ್ದಮೆಗಳನ್ನು ದಾಖಲಿಸಲು ಕಾರಣವಾಯಿತು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+