Mahua Moitra: ಕೇಂದ್ರ ಸರ್ಕಾರ ಸಂಸದರ 'ಮೊಬೈಲ್-ಇಮೇಲ್ ಹ್ಯಾಕ್' ಮಾಡುತ್ತಿದಿಯೇ?
ನವದೆಹಲಿ, ಅಕ್ಟೋಬರ್ 30: ಕೇಂದ್ರ ಬಿಜೆಪಿ ಸರ್ಕಾರ ತನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ತೃಣಮೂಲ ಕಾಂಗ್ರೆಸ್ (TMC) ಸಂಸದೆ ಮಹುವಾ ಮೊಯಿತ್ರಾ ಅವರು ಆರೋಪ ಮಾಡಿದ್ದಾರೆ. ಈ ಕುರಿತ ಮಾಹಿತಿಯನ್ನು ಅವರು ಮಂಗಳವಾರ ಹಂಚಿಕೊಂಡಿದ್ದಾರೆ.
ತಮ್ ಫೋನ್ ಹ್ಯಾಕ್ ಮಾಡುವ ಪ್ರಯತ್ನ ನಡೆಯುತ್ತಿದೆ. ಆ ಬಗ್ಗೆ ನಾನು ಆಪಲ್ ಐಫೋನ್ನಿಂದ ಎಚ್ಚರಿಕೆ ಸ್ವೀಕರಿಸಿದ್ದೇನೆ ಎಂದು ಎಚ್ಚರಿಕೆ ಸಂದೇಶದ ಸ್ಕ್ರೀನ್ಶಾಟ್ಗಳನ್ನು ಸಂಸದೆ ಮಹುವಾ ಮೊಯಿತ್ರಾ ತಮ್ಮ X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕೇಂದ್ರ ಸರ್ಕಾರ ನನ್ನ ಫೋನ್ ಮತ್ತು ಇಮೇಲ್ ಅನ್ನು ಹ್ಯಾಕ್ ಮಾಡಲು ಪ್ರಯತ್ನಿಸುತ್ತಿದೆ ಎಂದು ನನಗೆ ಎಚ್ಚರಿಕೆ ನೀಡುವ ಸಂದೇಶ ಹಾಗೂ ಇಮೇಲ್ ಅನ್ನು ನಾನು ಸ್ವೀಕರಿಸಿದ್ದೇನೆ. ಅದಾನಿಯಂತವರ ಮತ್ತು ಪ್ರಧಾನಮಂತ್ರಿ ಕಚೇರಿಗಳಿಂದ (ಪಿಎಂಒ) ಭಯಗೊಂಡಿದ್ದು, ನೀವೆ ರಕ್ಷಣೆ ಕರುಣಿಸಬೇಕು ಎಂದು ಅವರು ಗೃಹ ಸಚಿವರಿಗೆ ಮನವಿ ಮಾಡಿದ್ದಾರೆ.
Received text & email from Apple warning me Govt trying to hack into my phone & email. @HMOIndia - get a life. Adani & PMO bullies - your fear makes me pity you. @priyankac19 - you, I , & 3 other INDIAns have got it so far . pic.twitter.com/2dPgv14xC0
— Mahua Moitra (@MahuaMoitra) October 31, 2023
ಸ್ವೀಕೃತ ಸಂದೇಶದಲ್ಲಿ ಏನಿದೆ?
ಐಫೋನ್ ಸಂದೇಶವು 'ಎಚ್ಚರಿಕೆ: ರಾಜ್ಯ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಅನ್ನು ಗುರಿಯಾಗಿಸಬಹುದು'' ಎಂಬ ಸಂದೇಶ ಸ್ವೀಕರಿಸಿದ್ದೇವೆ. ಶಿವಸೇನೆ ಸಂಸದ ಪ್ರಿಯಾಂಕಾ ಚತುರ್ವೇದಿ ಮತ್ತು ಇತರ ಕೆಲವು ಭಾರತೀಯ ಮೈತ್ರಿಕೂಟದ ನಾಯಕರಿಗೂ ಇದೇ ರೀತಿ ಎಚ್ಚರಿಕೆಗಳು ಬಂದಿವೆ. ಅಂದರೆ ಅವರ ಫೋನ್ ಸಹ ಹ್ಯಾಕ್ ಮಾಡಲು ಯತ್ನಿಸಲಾಗುತ್ತಿದೆ ಎಂದಬುದು ಇದರಿಂದ ಅರ್ಥವಾಗುತ್ತದೆ ಎಂದು ಮಹುವಾ ತಿಳಿಸಿದ್ದಾರೆ.

ಕಾಂಗ್ರೆಸ್ ಹಿರಿಯ ಸಂಸದ ಶಶಿ ತರೂರ್ ಅವರು ತಮ್ಮ ಫೋನ್ ಮತ್ತು ಇಮೇಲ್ ಅನ್ನು ಗುರಿಯಾಗಿಸಿಕೊಂಡು ಆಪಲ್ನಿಂದ ಅದೇ ಎಚ್ಚರಿಕೆಯನ್ನು ನಾನು ಸಹ ಸ್ವೀಕರಿಸಿದ್ದೇನೆ ಎಂದು ಅವರು ಸಹ ಸಾಮಾಜಿಕ ಜಾಲತಾಣ X ನಲ್ಲಿ ಖಚಿತಪಡಿಸಿದ್ದಾರೆ.
Received from an Apple ID, [email protected], which I have verified. Authenticity confirmed. Glad to keep underemployed officials busy at the expenses of taxpayers like me! Nothing more important to do?@PMOIndia @INCIndia @kharge @RahulGandhi pic.twitter.com/5zyuoFmaIa
— Shashi Tharoor (@ShashiTharoor) October 31, 2023
ತನಿಖೆ ಎದುರಿಸುತ್ತಿರುವ ಮೊಯಿತ್ರಾ
ತಮ್ಮ ಪೋಸ್ಟ್ ನಲ್ಲಿ ಪಿಎಂಒ ಇಂಡಿಯಾ ಪೇಜ್ಗೆ ಟ್ಯಾಗ್ ಮಾಡಿರುವ ತರೂರ್ ಅವರು, ನನ್ನಂತರವರ ತೆರಿಗೆ ಹಣದಲ್ಲಿ ಅಧಿಕಾರಿಗಳನ್ನು ಕಾರ್ಯನಿರತವಾಗಿಟ್ಟಿದ್ದಕ್ಕೆ ಧನ್ಯವಾದಗಳು, ಇದರ ಹೊರತು ನಿಮಗೆ ಮುಖ್ಯವಾದುದು ಏನೂ ಇಲ್ಲವೇ ಎಂದು ಅವರು ವ್ಯಂಗ್ಯ ಮಾಡಿದ್ದಾರೆ.
ಸದ್ಯ ನಗದು ವಿಚಾರಕ್ಕೆ ಸಂಬಂಧಿಸಿದ ಪ್ರಕರಣವೊಂದರಲ್ಲಿ ಮಹುವಾ ಅವರು ಪ್ರಸ್ತುತ ಸಂಸತ್ತಿನ ನೈತಿಕ ಸಮಿತಿಯಿಂದ ತನಿಖೆ ಎದುರಿಸುತ್ತಿದ್ದಾರೆ. ಉದ್ಯಮಿ ಗೌತಮ್ ಅದಾನಿ ಅವರ ಪರ ಲೋಕಸಭೆಯಲ್ಲಿ ಪ್ರಶ್ನೆ ಮಾಡಿದಕ್ಕಾಗಿ ಉದ್ಯಮಿ ದರ್ಶನ್ ಹಿರಾನಂದಾನಿ ಅವರ ಆಜ್ಞೆಯ ಮೇರೆಗೆ ಟಿಎಂಸಿ ನಾಯಕರು ನಗದು ಸ್ವೀಕರಿಸಿದ್ದಾರೆ ಎಂದು ನಿಶಿಕಾಂತ್ ದುಬೆ ಆರೋಪಿಸಿದ್ದಾರೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications