ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಜೆಗಳ ಪ್ರತಿನಿಧಿಯಾಗುವೆ: ರಜನಿಕಾಂತ್ ಘೋಷಣೆ

By Mahesh
|
Google Oneindia Kannada News

Recommended Video

ರಜಿನಿಕಾಂತ್ ತಮ್ಮ ರಾಜಕೀಯ ಪ್ರವೇಶವನ್ನ ಖಚಿತಪಡಿಸಿದ್ದಾರೆ | Oneindia Kannada

ಚೆನ್ನೈ, ಡಿಸೆಂಬರ್ 31: ಸೂಪರ್ ಸ್ಟಾರ್ ರಜನಿಕಾಂತ್ ಅವರು ತಮ್ಮ ರಾಜಕೀಯ ಪ್ರವೇಶವನ್ನು ಖಚಿತಪಡಿಸಿದ್ದಾರೆ.ಕಳೆದ ಮೇ ತಿಂಗಳಿನಲ್ಲಿ ರಾಜಕೀಯ ಪ್ರವೇಶದ ಬಗ್ಗೆ ಮಾತನಾಡಿದ್ದ ರಜನಿಕಾಂತ್ ಅವರು ನಂತರ ಈ ಬಗ್ಗೆ ಮೌನ ವಹಿಸಿದ್ದರು.

ಬಿಜೆಪಿ ಸೇರಿದ್ರೆ ರಜನಿಕಾಂತ್ ಅವರೇ ಸಿಎಂ ಅಭ್ಯರ್ಥಿ!ಬಿಜೆಪಿ ಸೇರಿದ್ರೆ ರಜನಿಕಾಂತ್ ಅವರೇ ಸಿಎಂ ಅಭ್ಯರ್ಥಿ!

ಹುಟ್ಟುಹಬ್ಬದ ದಿನದಂದು ಏನಾದರೂ ಶುಭ ಸುದ್ದಿ ಘೋಷಿಸುವರೇ ಎಂದು ಅಭಿಮಾನಿಗಳು ಎಂದಿನಂತೆ ಕಾದಿದ್ದರು. ಆದರೆ, ಹುಟ್ಟುಹಬ್ಬ ಆಚರಣೆ ಹಾಗೂ ರಜನಿ ದೂರ ಉಳಿದಿದ್ದರು.

ರಜನಿ ಕಾಂತ್ ರಾಜಕೀಯಕ್ಕೆ ಬಿಗ್ ಬಿ ಸಲಹೆಯೇನು?ರಜನಿ ಕಾಂತ್ ರಾಜಕೀಯಕ್ಕೆ ಬಿಗ್ ಬಿ ಸಲಹೆಯೇನು?

ಆದರೆ, ಚೆನ್ನೈನ ರಾಘವೇಂದ್ರ ಹಾಲ್ ನಲ್ಲಿ ಅಭಿಮಾನಿಗಳ ಜತೆಗಿನ ಸಮ್ಮಿಲನ ಕಾರ್ಯಕ್ರಮದಲ್ಲಿ ಭಾನುವಾರ(ಡಿಸೆಂಬರ್ 31)ದಂದು ತಮ್ಮ ರಾಜಕೀಯ ಪ್ರವೇಶದ ಬಗ್ಗೆ ಘೋಷಣೆ ಮಾಡಿದ್ದಾರೆ.

Rajinikanth

ಸೂಪರ್ ಸ್ಟಾರ್ ರಜನಿ ಅವರ ಭಾಷಣದ ಮುಖ್ಯಾಂಶಗಳು:

* ಮುಂದಿನ ಲೋಕಸಭೆ ಚುನಾವಣೆ ವೇಳೆಗೆ ಹೊಸ ಪಕ್ಷವನ್ನು ಘೋಷಿಸಲಾಗುತ್ತದೆ.

 'ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ' 'ರಾಜಕೀಯಕ್ಕೆ ರಜನಿಕಾಂತ್ ಬರುವುದು ಬೇಡ'

* ನಾನು ಆಧಾತ್ಮ ನೆಲೆಯಿಂದ ಎಲ್ಲವನ್ನು ನೋಡುತ್ತೇನೆ ಹಾಗಾಗಿ ಹಣ ಮಾಡಲು ರಾಜಕೀಯ ಪ್ರವೇಶಿಸುತ್ತಿಲ್ಲ.

* ದೇವರ ಆಶೀರ್ವಾದ ಸಿಗುತ್ತದೆ ಎಂಬ ನಂಬಿಕೆ ನನಗಿದೆ. ದೇವರ ಅಭಯ, ಅಭಿಮಾನಿಗಳ ಬೆಂಬಲ ಇದ್ದರೆ ಏನ್ನನ್ನೂ ಬೇಕಾದರೂ ಸಾಧಿಸಬಹುದು.

* ಈಗಿನ ಭ್ರಷ್ಟ ವ್ಯವಸ್ಥೆಯನ್ನು ಬದಲಾಯಿಸಬೇಕಿದೆ.

ರಜನಿಕಾಂತ್ ರಾಜಕೀಯಕ್ಕೆ ಏಕೆ ಧುಮುಕಬೇಕು : 5 ಕಾರಣರಜನಿಕಾಂತ್ ರಾಜಕೀಯಕ್ಕೆ ಏಕೆ ಧುಮುಕಬೇಕು : 5 ಕಾರಣ

* ತಮಿಳುನಾಡಿನ ಎಲ್ಲಾ ವಿಧಾನಸಭೆ ಕ್ಷೇತ್ರ(234)ಗಳಲ್ಲಿ ನಮ್ಮ ಪಕ್ಷ ಸ್ಪರ್ಧಿಸಲಿದೆ. 40 ಲೋಕಸಭೆ ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ. ಆದರೆ, ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ.

* ನಮ್ಮ ಪಕ್ಷದಲ್ಲಿ ಅಕ್ಷರಸ್ಥರು, ಅನಕ್ಷರಸ್ಥರು ಎಲ್ಲರೂ ಇರುತ್ತಾರೆ.

* ಸತ್ಯ, ಕೆಲಸ ಹಾಗೂ ಪ್ರಗತಿ ನಮ್ಮ ಪಕ್ಷದ ಮುಖ್ಯ ಮಂತ್ರವಾಗಲಿದೆ.

* ಪ್ರಜಾಪ್ರಭುತ್ವದ ಹೆಸರಿನಲ್ಲಿ ರಾಜಕಾರಣಿಗಳು ನಮ್ಮ ಹಣವನ್ನು ದೋಚುತ್ತಿದ್ದಾರೆ. ಈ ವ್ಯವಸ್ಥೆಯನ್ನು ಬದಲಾಯಿಸಬೇಕಿದೆ.

* ನಮ್ಮ(ತಮಿಳುನಾಡು) ರಾಜ್ಯದ ಭ್ರಷ್ಟ ವ್ಯವಸ್ಥೆಯನ್ನು ನೋಡಿ ಬೇರೆ ರಾಜ್ಯದವರು ನಗುವಂತಾಗಿದೆ. ಇದನ್ನು ಬದಲಾಯಿಸುವ ಕಾಲ ಬಂದಿದೆ.

English summary
In a much-anticipated moment for all his fans and well-wishers, superstar Rajinikanth on Sunday(Decemebr 31) confirmed his entry into politics, adding that he will be contesting in the next state assembly elections by forming a new party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X