'ಏಕ್ ಭಾರತ್ ಶ್ರೇಷ್ಠ್ ಭಾರತ್' ಯೋಜನೆಗೆ ನಿಮ್ಮ ಸಲಹೆ ಕೊಡಿ
ನವದೆಹಲಿ, ಡಿಸೆಂಬರ್ 23 : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ 'ಏಕ್ ಭಾರತ್ ಶ್ರೇಷ್ಠ್ ಭಾರತ್' ಯೋಜನೆ ಬಗ್ಗೆ ಜನರು ತಮ್ಮ ಸಲಹೆಗಳನ್ನು ನೀಡಬಹುದಾಗಿದೆ. ದೇಶದ ಪ್ರತಿ ರಾಜ್ಯವೂ ತನಗೆ ಬೇಕೆನಿಸಿದ ಇನ್ನೊಂದು ರಾಜ್ಯದ ಜತೆ ಸಂಪರ್ಕ ಬೆಳೆಸಿ, ಪರಸ್ಪರ ಸಂಸ್ಕೃತಿ ವಿನಿಮಯ ಮಾಡಿಕೊಳ್ಳುವ ಯೋಜನೆ ಇದಾಗಿದೆ.
ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 140ನೇ ಜನ್ಮ ದಿನದ ಅಂಗವಾಗಿ ಆಯೋಜಿಸಿದ್ದ 'ರಾಷ್ಟ್ರೀಯ ಏಕತಾ ದಿನ' ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಅವರು ಈ ಯೋಜನೆಯನ್ನು ಘೋಷಣೆ ಮಾಡಿದ್ದಾರೆ. ಉತ್ತಮ ಸಲಹೆಗಳನ್ನು ನೀಡಿದವರಿಗೆ ಪ್ರಧಾನಿ ಮೋದಿ ಅವರು ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರವನ್ನು ನೀಡಲಿದ್ದಾರೆ.

'ಏಕ್ ಭಾರತ್ ಶ್ರೇಷ್ಠ್ ಭಾರತ್' ಯೋಜನೆ ಮೂಲಕ ದೇಶದ ಪ್ರತಿ ರಾಜ್ಯವೂ ಪ್ರತಿವರ್ಷ ತನಗೆ ಬೇಕೆನಿಸಿದ ಇನ್ನೊಂದು ರಾಜ್ಯದ ಜತೆ ಸಂಪರ್ಕ ಬೆಳೆಸಿ ಪರಸ್ಪರ ಸಂಸ್ಕೃತಿ ವಿನಿಮಯ ಮಾಡಿಕೊಳ್ಳಬಹುದಾಗಿದೆ. ರಾಜ್ಯ-ರಾಜ್ಯಗಳ ನಡುವಿನ ಸಾಂಸ್ಕೃತಿಕ ಕಂದಕವನ್ನು ಮುಚ್ಚಲು ಇಂತಹ ಯೋಜನೆಯನ್ನು ಜಾರಿಗೆ ತರಲಾಗುತ್ತಿದೆ. [ಮೋದಿ ಕನಸುಗಳು: ಸ್ವಚ್ಛಭಾರತದಿಂದ ಡಿಜಿಟಲ್ ಇಂಡಿಯಾ ತನಕ]
ಸಲಹೆ ನೀಡುವುದು ಹೇಗೆ? : ಈ ಯೋಜನೆಯ ಸ್ವರೂಪ, ಯೋಜನೆಯಲ್ಲಿ ಜನಸಾಮಾನ್ಯರ ಸಹಭಾಗಿತ್ವ ಹಾಗೂ ಸರ್ಕಾರದ ಪಾತ್ರ ಮುಂತಾದ ವಿಚಾರಗಳ ಕುರಿತು ಮೈ ಗೌರ್ನಮೆಂಟ್ ವೆಬ್ ಸೈಟ್ ನಲ್ಲಿ ಸಾರ್ವಜನಿಕರು ಸಲಹೆ ನೀಡಬಹುದಾಗಿದೆ. ಕೊನೆಯ ದಿನಾಂಕ ಡಿಸೆಂಬರ್ 25, 2015. [ವೆಬ್ ಸೈಟ್ ವಿಳಾಸ]
'EK Bharat Shreshtha Bharat' Contest on MyGov. Certificate by PM himself and attractive cash prizes: https://t.co/r6yo2lX2j5 || #MannKiBaat
— MyGovIndia (@mygovindia) November 29, 2015 ಬಹುಮಾನದ ಮೊತ್ತ : 'ಏಕ್ ಭಾರತ್ ಶ್ರೇಷ್ಠ್ ಭಾರತ್' ಯೋಜನೆಗೆ ಉತ್ತಮ ಸಲಹೆಗಳನ್ನು ನೀಡುವವರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ನಗದು ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಿದ್ದಾರೆ. ಮೊದಲ ಬಹುಮಾನ ಒಂದು ಲಕ್ಷ, ಎರಡನೇ ಬಹುಮಾನ 75 ಸಾವಿರ, ಮೂರನೇ ಬಹುಮಾನ 50 ಸಾವಿರ ರೂ.
ನಿಬಂಧನೆಗಳು : ಸಲಹೆಗಳನ್ನು ನೀಡುವವರು 18 ವರ್ಷ ಮೇಲ್ಪಟ್ಟಿರಬೇಕು, ಇದು ವೈಯಕ್ತಿಕ ಸ್ಪರ್ಧೆಯಾಗಿದ್ದು ಸಂಸ್ಥೆ, ಸಂಘಟನೆ ಹೆಸರಿನಲ್ಲಿ ಸ್ಪರ್ಧಿಸಲು ಅವಕಾಶವಿಲ್ಲ, ಸಲಹೆಗಳನ್ನು ನೀಡುವವರು ಭಾರತದ ನಾಗರೀಕನಾಗಿರಬೇಕು, ಮೈ ಗೌರ್ನಮೆಂಟ್ ವೆಬ್ಸೈಟ್ನಲ್ಲಿ ಹೆಸರು ನೋಂದಾಯಿಸಿರಬೇಕು. ಸಲಹೆಗಳು ಸಾವಿರ ಪದಗಳನ್ನು ಮೀರಬಾರದು.
ಯಾವ ರೀತಿಯ ಸಲಹೆ ನೀಡಬಹುದು? : ಈ ಯೋಜನೆಯ ಅನುಷ್ಠಾನದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಪಾತ್ರ, ಖಾಸಗಿ ಮತ್ತು ಸರ್ಕಾರಿ ಜಂಟಿ ಸಹಭಾಗಿತ್ವದಲ್ಲಿ ಯೋಜನೆ ಅನುಷ್ಠಾನ, ಯೋಜನೆ ಜಾರಿಗೆ ಸಾಮಾಜಿಕ ಜಾಲತಾಣಗಳ ಬಳಕೆ ಮುಂತಾದ ವಿಚಾರಗಳ ಬಗ್ಗೆ ಜನರು ಸಲಹೆ ನೀಡಬಹುದು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು












Click it and Unblock the Notifications