ಮೈಸೂರು - ಚೆನ್ನೈ ಬುಲೆಟ್ ಟ್ರೈನ್: ಶೀಘ್ರದಲ್ಲೇ ವೈಮಾನಿಕ ಸಮೀಕ್ಷೆ
ಮೈಸೂರು ಚೆನ್ನೈ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಬಹುನಿರೀಕ್ಷಿತ ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ ಕಾರ್ಯ ನಡೆಯಲಿದೆ.
ಹೌದು... ರೈಲ್ವೆ ಇಲಾಖೆ ಚೆನ್ನೈ ಮೈಸೂರು ಮಾರ್ಗದಲ್ಲಿ ಬಹುನಿರೀಕ್ಷಿತ ಹೈಸ್ಪೀಡ್ ರೈಲು ಕಾರಿಡಾರ್ನ್ನು ನಿರ್ಮಿಸುವ ಸಿದ್ಧತೆಗಳನ್ನು ನಡೆಸಿದೆ. ಹೀಗಾಗಿ ಮೈಸೂರು-ಚೆನ್ನೈ ನಡುವಿನ ಬುಲೆಟ್ ಟ್ರೈನ್ ಮಾರ್ಗ ನಿರ್ಮಾಣಕ್ಕಾಗಿ ಶೀಘ್ರದಲ್ಲೇ ವೈಮಾನಿಕ ಸಮೀಕ್ಷೆ ನಡೆಯಲಿದೆ. ಬಳಿಕ ಸಂಪೂರ್ಣ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಲಾಗುತ್ತದೆ.

ಹೈಸ್ಪೀಡ್ ರೈಲುಗಳು ಗಂಟೆಗೆ 300 ಕಿ.ಮೀ ವೇಗದಲ್ಲಿ ಚಲಿಸಬಲ್ಲವು. ಸೆಮಿ ಹೈಸ್ಪೀಡ್ ರೈಲು ಮಾರ್ಗದಲ್ಲಿ ಗರಿಷ್ಠ 160 ಕಿ.ಮೀ ವರೆಗೆ ಸಂಚರಿಸಬಲ್ಲವು. ಪ್ರಯಾಣಿಕರು ತಮ್ಮ ಗಮ್ಯ ಸ್ಥಾನವನ್ನು ಶೀಘ್ರದಲ್ಲಿ ತಲುಪಲು ಹಾಗೂ ಸುಖಕರ ಪ್ರಯಾಣವನ್ನು ಒದಗಿಸುವ ಸಲುವಾಗಿ ಈ ಯೋಜನೆಯನ್ನು ಕೈಗೆತ್ತಿಗೊಳ್ಳಲಾಗಿದೆ. ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಈ ಕಾಮಗಾರಿ ಶರವೇಗದಲ್ಲಿ ನಡೆದಿದೆ. ಇದರ ಅಡಿಯಲ್ಲಿ ಶೀಘ್ರದಲ್ಲೇ ಮೈಸೂರು - ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯದ ಸಮೀಕ್ಷೆ ಕೂಡ ನಡೆಯಲಿದೆ.
ಮೈಸೂರು-ಬೆಂಗಳೂರು-ಚೆನ್ನೈ ಹೈಸ್ಪೀಡ್ ಬುಲೆಟ್ ಟ್ರೈನ್ ಯೋಜನೆ ದೇಶದ ಪ್ರಮುಖ ಏಳು ಪ್ರಮುಖ ಹೈಸ್ಪೀಡ್ ಯೋಜನೆಯಲ್ಲಿ ದಕ್ಷಿಣ ಭಾರತದ ಏಕೈಕ ಯೋಜನೆಯಾಗಿದೆ. ಈಗ ಮೈಸೂರಿನಿಂದ ಚೆನ್ನೈಗೆ ಸುಮಾರು 10 ರಿಂದ 11 ಗಂಟೆಯವರೆಗೆ ಪ್ರಯಾಣಿಸಬೇಕಿದೆ. ಒಂದು ವೇಳೆ ಬುಲೆಟ್ ಟ್ರೈನ್ ಸಂಚರಿಸಿದಲ್ಲಿ ಈ ಅವಧಿಯಲ್ಲಿ 7 ಗಂಟೆಗಳ ಉಳಿತಾಯವಾಗಲಿದೆ. ಇನ್ನಿತರ ರೈಲುಗಳಿಗೆ ಹೋಲಿಸಿದರೆ ಪ್ರಯಾಣದ ಅವಧಿ ಸಾಕಷ್ಟು ಕಡಿಮೆಯಾಗಲಿದೆ.
ಇದರಿಂದಾಗಿ ಮೈಸೂರು, ಬೆಂಗಳೂರು ಹಾಗೂ ಚೆನ್ನೈ ನಡುವೆ ಸಂಚರಿಸುವವರಿಗೆ ಇದರಿಂದ ಪ್ರಯೋಜನವಾಗಲಿದೆ. ಮಾತ್ರವಲ್ಲದೆ ಉದ್ಯಮದ ಬೆಳವಣಿಗೆಗೂ ಸಾಕಷ್ಟು ಪ್ರಯೋಜನವಾಗಲಿದೆ. ವಿಮಾನ ನಿಲ್ದಾಣಕ್ಕೆ ತೆರಳುವುದು, ಅಲ್ಲಿನ ಪರಿಶೀಲನೆ ಹಾಗೂ ಇನ್ನಿತರ ಪ್ರಕ್ರಿಯೆಗಳನ್ನು ಮುಗಿಸುವ ವೇಳೆಗೆ ರೈಲಿನಲ್ಲಿ ಚೆನ್ನೈ ಹಾಗೂ ಮೈಸೂರು ನಡುವೆ ಸಂಚರಿಸಬಹುದಾಗಿದೆ. ಟಿಕೆಟ್ ದರ ಪ್ರಥಮ ದರ್ಜೆ ಹವಾನಿಯಂತ್ರಿತ ಪ್ರಯಾಣಕ್ಕಿಂತ ಒಂದೂವರೆ ಪಟ್ಟು ಹೆಚ್ಚಿರಬಹುದು.
ಹೈಸ್ಪೀಡ್ ಬುಲೆಟ್ ಟ್ರೈನ್ನ ಮತ್ತೊಂದು ವಿಶೇಷತೆ ಎಂದರೆ ಭೂಕಂಪದ ಮುನ್ಸೂಚನೆ ನೀಡುವ ತಂತ್ರಜ್ಞಾನ ಅಳವಡಿಸಿದೆ. ಚಲಿಸಲಿರುವ ಮಾರ್ಗದಲ್ಲಿ ಒಂದು ವೇಳೆ ಭೂಕಂಪಿಸುವ ಸಂಭವ ಇದ್ದಲ್ಲಿ ಮುಂಚಿತವಾಗಿ ಎಚ್ಚರಿಕೆ ಸಂದೇಶ ರವಾನಿಸುವುದರೊಂದಿಗೆ ಅಲರಾಂ ಮೊಳಗಲಿದೆ. ಇಂತಹ ತುರ್ತು ಸಂದರ್ಭಗಳಲ್ಲಿ ಅತೀ ವೇಗದ ರೈಲನ್ನು ನಿಲ್ಲಿಸಲು ಅಟೋಮೆಟಿಕ್ ಬ್ರೇಕ್ ಸಿಸ್ಟಮ್ ಕೂಡ ಇರಲಿದೆ.
ಈ ರೈಲು ನಿಲುಗಡೆಯಾಗಲಿರುವ ತಾಣಗಳೆಂದರೆ ಮೈಸೂರು, ಮಂಡ್ಯ, ಚೆನ್ನಪಟ್ಟಣ, ಬೆಂಗಳೂರು, ಬಂಗಾರಪೇಟೆ, ಚಿತ್ತೂರು, ಅರಕೊಣಮ್, ಪೊನ್ನಮಲೈ, ಚೆನ್ನೈ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
ಇರಾನ್ನ ವಾಯುನೆಲೆ, ಶಸ್ತ್ರಾಸ್ತ್ರ ಡಿಪೋ ಮೇಲೆ ಯುಎಸ್ ಜಂಟಿ ದಾಳಿ, ರಷ್ಯಾ ಬೆಂಬಲ? ಇಲ್ಲಿವೆ ಪ್ರಮುಖಾಂಶಗಳು -
SWR: ಪ್ರಶಾಂತಿ ಎಕ್ಸ್ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿ: ರೈಲುಗಳ ನಿಲುಗಡೆಯಲ್ಲಿ ಬದಲಾವಣೆ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
ಕೊಹ್ಲಿ ಭಾಯ್ಗೆ ಮೈದಾನದಲ್ಲಿ ಕೆಣಕ್ಬೇಡಿ, ತುಂಬಾ ಸಮಯ ನಿಲ್ಲಲು ಬಿಡಬೇಡಿ; ಎಸ್ಆರ್ಎಚ್ ಸಹ ಆಟಗಾರರಿಗೆ ಇಶಾನ್ ಎಚ್ಚರಿಕೆ ಸಂದೇಶ -
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್










Click it and Unblock the Notifications