ಮೈಸೂರು - ಚೆನ್ನೈ ಬುಲೆಟ್ ಟ್ರೈನ್: ಶೀಘ್ರದಲ್ಲೇ ವೈಮಾನಿಕ ಸಮೀಕ್ಷೆ
ಮೈಸೂರು ಚೆನ್ನೈ ಪ್ರಯಾಣಿಕರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ಬಹುನಿರೀಕ್ಷಿತ ಮೈಸೂರು ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯಕ್ಕೆ ಶೀರ್ಘದಲ್ಲೇ ಸರ್ವೆ ಕಾರ್ಯ ನಡೆಯಲಿದೆ.
ಹೌದು... ರೈಲ್ವೆ ಇಲಾಖೆ ಚೆನ್ನೈ ಮೈಸೂರು ಮಾರ್ಗದಲ್ಲಿ ಬಹುನಿರೀಕ್ಷಿತ ಹೈಸ್ಪೀಡ್ ರೈಲು ಕಾರಿಡಾರ್ನ್ನು ನಿರ್ಮಿಸುವ ಸಿದ್ಧತೆಗಳನ್ನು ನಡೆಸಿದೆ. ಹೀಗಾಗಿ ಮೈಸೂರು-ಚೆನ್ನೈ ನಡುವಿನ ಬುಲೆಟ್ ಟ್ರೈನ್ ಮಾರ್ಗ ನಿರ್ಮಾಣಕ್ಕಾಗಿ ಶೀಘ್ರದಲ್ಲೇ ವೈಮಾನಿಕ ಸಮೀಕ್ಷೆ ನಡೆಯಲಿದೆ. ಬಳಿಕ ಸಂಪೂರ್ಣ ಯೋಜನಾ ವರದಿಯನ್ನು (ಡಿಪಿಆರ್) ಸಿದ್ಧಪಡಿಸಲಾಗುತ್ತದೆ.

ಹೈಸ್ಪೀಡ್ ರೈಲುಗಳು ಗಂಟೆಗೆ 300 ಕಿ.ಮೀ ವೇಗದಲ್ಲಿ ಚಲಿಸಬಲ್ಲವು. ಸೆಮಿ ಹೈಸ್ಪೀಡ್ ರೈಲು ಮಾರ್ಗದಲ್ಲಿ ಗರಿಷ್ಠ 160 ಕಿ.ಮೀ ವರೆಗೆ ಸಂಚರಿಸಬಲ್ಲವು. ಪ್ರಯಾಣಿಕರು ತಮ್ಮ ಗಮ್ಯ ಸ್ಥಾನವನ್ನು ಶೀಘ್ರದಲ್ಲಿ ತಲುಪಲು ಹಾಗೂ ಸುಖಕರ ಪ್ರಯಾಣವನ್ನು ಒದಗಿಸುವ ಸಲುವಾಗಿ ಈ ಯೋಜನೆಯನ್ನು ಕೈಗೆತ್ತಿಗೊಳ್ಳಲಾಗಿದೆ. ನ್ಯಾಷನಲ್ ಹೈ ಸ್ಪೀಡ್ ರೈಲ್ ಕಾರ್ಪೋರೇಷನ್ ಲಿಮಿಟೆಡ್ ಸಂಸ್ಥೆಯ ವತಿಯಿಂದ ಈ ಕಾಮಗಾರಿ ಶರವೇಗದಲ್ಲಿ ನಡೆದಿದೆ. ಇದರ ಅಡಿಯಲ್ಲಿ ಶೀಘ್ರದಲ್ಲೇ ಮೈಸೂರು - ಚೆನ್ನೈ ಬುಲೆಟ್ ಟ್ರೈನ್ ಹಳಿ ನಿರ್ಮಾಣ ಕಾರ್ಯದ ಸಮೀಕ್ಷೆ ಕೂಡ ನಡೆಯಲಿದೆ.
ಮೈಸೂರು-ಬೆಂಗಳೂರು-ಚೆನ್ನೈ ಹೈಸ್ಪೀಡ್ ಬುಲೆಟ್ ಟ್ರೈನ್ ಯೋಜನೆ ದೇಶದ ಪ್ರಮುಖ ಏಳು ಪ್ರಮುಖ ಹೈಸ್ಪೀಡ್ ಯೋಜನೆಯಲ್ಲಿ ದಕ್ಷಿಣ ಭಾರತದ ಏಕೈಕ ಯೋಜನೆಯಾಗಿದೆ. ಈಗ ಮೈಸೂರಿನಿಂದ ಚೆನ್ನೈಗೆ ಸುಮಾರು 10 ರಿಂದ 11 ಗಂಟೆಯವರೆಗೆ ಪ್ರಯಾಣಿಸಬೇಕಿದೆ. ಒಂದು ವೇಳೆ ಬುಲೆಟ್ ಟ್ರೈನ್ ಸಂಚರಿಸಿದಲ್ಲಿ ಈ ಅವಧಿಯಲ್ಲಿ 7 ಗಂಟೆಗಳ ಉಳಿತಾಯವಾಗಲಿದೆ. ಇನ್ನಿತರ ರೈಲುಗಳಿಗೆ ಹೋಲಿಸಿದರೆ ಪ್ರಯಾಣದ ಅವಧಿ ಸಾಕಷ್ಟು ಕಡಿಮೆಯಾಗಲಿದೆ.
ಇದರಿಂದಾಗಿ ಮೈಸೂರು, ಬೆಂಗಳೂರು ಹಾಗೂ ಚೆನ್ನೈ ನಡುವೆ ಸಂಚರಿಸುವವರಿಗೆ ಇದರಿಂದ ಪ್ರಯೋಜನವಾಗಲಿದೆ. ಮಾತ್ರವಲ್ಲದೆ ಉದ್ಯಮದ ಬೆಳವಣಿಗೆಗೂ ಸಾಕಷ್ಟು ಪ್ರಯೋಜನವಾಗಲಿದೆ. ವಿಮಾನ ನಿಲ್ದಾಣಕ್ಕೆ ತೆರಳುವುದು, ಅಲ್ಲಿನ ಪರಿಶೀಲನೆ ಹಾಗೂ ಇನ್ನಿತರ ಪ್ರಕ್ರಿಯೆಗಳನ್ನು ಮುಗಿಸುವ ವೇಳೆಗೆ ರೈಲಿನಲ್ಲಿ ಚೆನ್ನೈ ಹಾಗೂ ಮೈಸೂರು ನಡುವೆ ಸಂಚರಿಸಬಹುದಾಗಿದೆ. ಟಿಕೆಟ್ ದರ ಪ್ರಥಮ ದರ್ಜೆ ಹವಾನಿಯಂತ್ರಿತ ಪ್ರಯಾಣಕ್ಕಿಂತ ಒಂದೂವರೆ ಪಟ್ಟು ಹೆಚ್ಚಿರಬಹುದು.
ಹೈಸ್ಪೀಡ್ ಬುಲೆಟ್ ಟ್ರೈನ್ನ ಮತ್ತೊಂದು ವಿಶೇಷತೆ ಎಂದರೆ ಭೂಕಂಪದ ಮುನ್ಸೂಚನೆ ನೀಡುವ ತಂತ್ರಜ್ಞಾನ ಅಳವಡಿಸಿದೆ. ಚಲಿಸಲಿರುವ ಮಾರ್ಗದಲ್ಲಿ ಒಂದು ವೇಳೆ ಭೂಕಂಪಿಸುವ ಸಂಭವ ಇದ್ದಲ್ಲಿ ಮುಂಚಿತವಾಗಿ ಎಚ್ಚರಿಕೆ ಸಂದೇಶ ರವಾನಿಸುವುದರೊಂದಿಗೆ ಅಲರಾಂ ಮೊಳಗಲಿದೆ. ಇಂತಹ ತುರ್ತು ಸಂದರ್ಭಗಳಲ್ಲಿ ಅತೀ ವೇಗದ ರೈಲನ್ನು ನಿಲ್ಲಿಸಲು ಅಟೋಮೆಟಿಕ್ ಬ್ರೇಕ್ ಸಿಸ್ಟಮ್ ಕೂಡ ಇರಲಿದೆ.
ಈ ರೈಲು ನಿಲುಗಡೆಯಾಗಲಿರುವ ತಾಣಗಳೆಂದರೆ ಮೈಸೂರು, ಮಂಡ್ಯ, ಚೆನ್ನಪಟ್ಟಣ, ಬೆಂಗಳೂರು, ಬಂಗಾರಪೇಟೆ, ಚಿತ್ತೂರು, ಅರಕೊಣಮ್, ಪೊನ್ನಮಲೈ, ಚೆನ್ನೈ.
-
ಮುದ್ದೇನಹಳ್ಳಿ ಸತ್ಯಸಾಯಿ ಗ್ರಾಮದಲ್ಲಿ CSR ರಾಷ್ಟ್ರೀಯ ಸಮಾವೇಶ: ವಿಕಸಿತ ಭಾರತ ಚರ್ಚೆ -
Gold Rate: ಬಂಗಾರ ಮತ್ತಷ್ಟು ದುಬಾರಿ: 16,000 ರೂ. ದಾಟಿದ ಚಿನ್ನ, ಬೆಳ್ಳಿ ಬೆಲೆ ಕೂಡ ಏರಿಕೆ, ಇಲ್ಲಿದೆ ಇಂದಿನ ದರ ವಿವರ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ












Click it and Unblock the Notifications