ಸ್ವಚ್ಛತೆ ಶ್ರೇಯಾಂಕ ಪಟ್ಟಿ: 5 ಸ್ಟಾರ್ ಅಂಕ ಪಡೆದ ಮೈಸೂರು
ನವದೆಹಲಿ, ಮೇ 19: ದೇಶದ ತ್ಯಾಜ್ಯಮುಕ್ತ ನಗರಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಭಾರತದ ನಗರ ಪ್ರದೇಶಗಳ ವಾರ್ಷಿಕ ಸ್ವಚ್ಛ ಸರ್ವೇಕ್ಷಣ ವರದಿಯನ್ನು ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವ ಹರ್ದೀಪ್ ಸಿಂಗ್ ಪುರಿ ಪ್ರಕಟಿಸಿದ್ದಾರೆ. ಈ ಪಟ್ಟಿಯಲ್ಲಿ ಕರ್ನಾಟಕದ ಮೈಸೂರು 5 ಸ್ಟಾರ್ ಅಂಕ ಪಡೆದ ನಗರಗಳ ಸಾಲಿನಲ್ಲಿ ಗುರುತಿಸಿಕೊಂಡಿದೆ.
Recommended Video
ಕರ್ನಾಟಕದ ಮೈಸೂರು ಅಲ್ಲದೆ ಅಂಬಿಕಾಪುರ, ಗುಜರಾತ್ನ ರಾಜ್ಕೋಟ್, ಮಧ್ಯಪ್ರದೇಶದ ಇಂದೋರ್ ಮತ್ತು ಮಹಾರಾಷ್ಟ್ರದ ನವೀ ಮುಂಬಯಿಗೆ 5 ಸ್ಟಾರ್ ರೇಟಿಂಗ್ ನೀಡಲಾಗಿದೆ.
ಇದಲ್ಲದೆ, ಹರಿಯಾಣ, ನವದೆಹಲಿಯ ಕರ್ನಾಲ್, ಆಂಧ್ರಪ್ರದೇಶದ ತಿರುಪತಿ ಮತ್ತು ವಿಜಯವಾಡ, ಚಂಡೀಗಢ ಛತ್ತೀಸ್ಗಡ್ನ ಭಿಲಾಯ್ ನಗರ, ಗುಜರಾತ್ನ ಅಹಮದಾಬಾದ್ ಸೇರಿದಂತೆ 65 ನಗರಗಳು ಮೂರು ಸ್ಟಾರ್ ರೇಟಿಂಗ್ ಪಡೆದಿವೆ. ದೆಹಲಿ ಕ್ಯಾಂಟ್, ವಡೋದರಾ, ರೋಹ್ಟಕ್ ಸೇರಿದಂತೆ 70 ನಗರಗಳು 1 ಸ್ಟಾರ್ ರೇಟಿಂಗ್ ಪಡೆದುಕೊಂಡಿವೆ.

ಕಳೆದ ಐದು ವರ್ಷಗಳಿಂದ ಸ್ಚಚ್ಛ ಸರ್ವೇಕ್ಷಣ ಸಮೀಕ್ಷೆ ನಡೆಸಾಲಗುತ್ತಿದ್ದು, ನಗರ ಪ್ರದೇಶಗಳಲ್ಲಿನ ಸ್ವಚ್ಛತೆಯ ಗುಣಮಟ್ಟ ಅಳೆಯಲು ಮಾನದಂಡವಾಗಿದೆ. ಶ್ರೇಯಾಂಕ ಪಟ್ಟಿಯನ್ನು ಬದಲಿಸಿ ನಗರಗಳಿಗೆ ಸ್ಟಾರ್ ರೇಟಿಂಗ್ ನೀಡಲಾಗುತ್ತಿದೆ. ಘನ ತ್ಯಾಜ್ಯ ನಿರ್ವಹಣೆ ಕುರಿತಂತೆ ಇರುವ ಅಂಶಗಳ ಪೈಕಿ ಪ್ರತಿ ನಗರ ಅನುಸರಿಸಿದ ಮಾರ್ಗ ಹಾಗೂ ಅದರ ಪರಿಣಾಮವನ್ನು ಪರಿಗಣಿಸಿ ಅಂಕ ನೀಡಲಾಗುತ್ತದೆ.
ನಗರ ಸಂಸ್ಥೆಗಳ ಉತ್ತಮ ಕಾರ್ಯಕ್ಕೆ ನೀಡುವ ಮನ್ನಣೆ ಇದಾಗಿದೆ. ಘನ ತ್ಯಾಜ್ಯ ನಿರ್ವಹಣೆಯಲ್ಲದೆ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಕಟ್ಟಡ ನಿರ್ಮಾಣ ತ್ಯಾಜ್ಯ, ಒಳ ಚರಂಡಿ ವ್ಯವಸ್ಥೆ ಹೀಗೆ ವಿವಿಧ ಹಂತದ ಪರೀಕ್ಷೆಗಳಲ್ಲಿ ಪಡೆದ ಅಂಕಗಳ ಸರಾಸರಿಯಂತೆ ಸ್ಟಾರ್ ರೇಟಿಂಗ್ ಸಿಗಲಿದೆ ಎಂದು ಸಚಿವ ಹರ್ದೀಪ್ ಸಿಂಗ್ ಪುರಿ ವಿವರಿಸಿದರು.
-
Rain Alert: ಕರ್ನಾಟಕದ ಈ 9 ಜಿಲ್ಲೆಗಳಿಗೆ ಮುಂದಿನ 2 ದಿನ ವ್ಯಾಪಕ ಆಲಿಕಲ್ಲು ಮಳೆ ಎಚ್ಚರಿಕೆ -
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply












Click it and Unblock the Notifications