ಮಣಿಪುರದ ಮುಖ್ಯಮಂತ್ರಿಯಾಗಿ ಬಿರೇನ್ ಸಿಂಗ್ ಪ್ರಮಾಣ ವಚನ ಸ್ವೀಕಾರ
ಇಂಫಾಲ, ಮಾರ್ಚ್ 21: ಮಣಿಪುರ ಬಿಜೆಪಿ ಶಾಸಕಾಂಗ ಪಕ್ಷದ ನಾಯಕ ಎನ್ ಬಿರೇನ್ ಸಿಂಗ್ ಅವರು ಇಂದು ಎರಡನೇ ಅವಧಿಗೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲರಾದ ಗಣೇಶನ್ ಅವರು ಬಿರೇನ್ ಸಿಂಗ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು. ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಸ್ಥಳೀಯ ಬಿಜೆಪಿ ಮುಖಂಡರು ಸರಳ ಸಮಾರಂಭಕ್ಕೆ ಸಾಕ್ಷಿಯಾಗಿದ್ದರು.
''ಎಲ್ಲರೂ ಒಮ್ಮತದಿಂದ ತೆಗೆದುಕೊಂಡ ನಿರ್ಧಾರ ಇದು. ಇದು ಮಣಿಪುರದಲ್ಲಿ ಸ್ಥಿರ ಮತ್ತು ಜವಾಬ್ದಾರಿಯುತ ಸರ್ಕಾರವನ್ನು ಹೊಂದಿದೆ ಎಂದು ಖಚಿತಪಡಿಸುತ್ತದೆ ಏಕೆಂದರೆ ಇಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರವು ಈಶಾನ್ಯ ರಾಜ್ಯಗಳಿಗೆ ವಿಶೇಷ ಗಮನವನ್ನು ನೀಡುತ್ತದೆ,'' ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿರೇನ್ ಸಿಂಗ್ ಆಯ್ಕೆ ಬಗ್ಗೆ ಪ್ರತಿಕ್ರಿಯಿಸಿದ್ದರು.
N Biren Singh takes oath as the Chief Minister of Manipur in Imphal. pic.twitter.com/of0TNRh94p
— ANI (@ANI) March 21, 2022
ಬಿಜೆಪಿಯ ಹಿರಿಯ ನಾಯಕ ತೊಂಗಂ ಬಿಸ್ವಜಿತ್ ಸಿಂಗ್ ಹೆಸರು ಕೇಳಿ ಬಂದಿತು. ಈಗ ಹಾಲಿ ಸ್ಪೀಕರ್ ಯುಮ್ನಮ್ ಖೇಮ್ಚಂದ್ ಸಿಂಗ್ ಹೆಸರು ಮುಂಚೂಣಿಯಲ್ಲಿತ್ತು. ಆದರೆ, ಅಂತಿಮವಾಗಿ ಎನ್ ಬಿರೇನ್ ಸಿಂಗ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಂದು ಅವಧಿಗೆ ಆಯ್ಕೆಯಾಗಿದ್ದಾರೆ.

ರಾಜ್ಯದಲ್ಲಿ ಬಿಜೆಪಿಯ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಯನ್ನು ವೀಕ್ಷಕರಾದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕಾನೂನು ಸಚಿವ ಕಿರಣ್ ರಿಜಿಜು ಅವರು ಪ್ರಕಟಿಸಿದರು.
ಪ್ರಸ್ತುತ ಮಣಿಪುರ ಸರ್ಕಾರದ ಅವಧಿಯು ಮಾರ್ಚ್ 20, 2017 ರಂದು ಪ್ರಾರಂಭವಾಯಿತು ಮತ್ತು ಮಾರ್ಚ್ 19, 2022 ರಂದು ಕೊನೆಗೊಳ್ಳಲಿದೆ.
2022ರ ವಿಧಾನಸಭೆ ಫಲಿತಾಂಶ 60 ಸ್ಥಾನಗಳ ವಿಧಾನಸಭೆಯಲ್ಲಿ ಬಿಜೆಪಿ 32 ಸ್ಥಾನ, ಜನತಾ ದಳ (ಯುನೈಟೆಡ್) 6, ಕಾಂಗ್ರೆಸ್ 5, ಎನ್ ಪಿ ಪಿ 7, ಎನ್ ಪಿಎಫ್ 5, ಕುಕಿ ಪೀಪಲ್ಸ್ ಮೈತ್ರಿಕೂಟ 2 ಸ್ಥಾನ ಗೆದ್ದುಕೊಂಡಿವೆ. ಬಿಜೆಪಿ ಶೇ 37.83, ಕಾಂಗ್ರೆಸ್ 16.83%, ಜೆಡಿಯು 10.77%, ಎನ್ ಪಿ ಇ ಪಿ 17.29%, ಎನ್ ಪಿ ಎಫ್ 8.09 %, ಇತರೆ 7.53 % ಬಂದಿದೆ.
ಈ ನಡುವೆ ಮಣಿಪುರದಲ್ಲಿ ಶೇ 10.77ರಷ್ಟು ಮತ ಗಳಿಕೆ ಮೂಲಕ 6 ಸ್ಥಾನ ಗೆದ್ದಿರುವ ಜನತಾ ದಳ(ಸಂಯುಕ್ತ) ಪಕ್ಷವು ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿರುವ ಭಾರತೀಯ ಜನತಾ ಪಕ್ಷಕ್ಕೆ ಬೆಂಬಲ ವ್ಯಕ್ತಪಡಿಸಿದೆ. ಈಗಾಗಲೇ ಎನ್ ಪಿ ಎಫ್ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಬಿರೇನ್ ಸಿಂಗ್, ಮುಂದಿನ ಸರ್ಕಾರದಲ್ಲಿ ಎನ್ಪಿಪಿ ನಮ್ಮೊಂದಿಗೆ ಇರುತ್ತದೆ ಎಂದು ನಾನು ಭಾವಿಸುವುದಿಲ್ಲ ಎಂದಿದ್ದಾರೆ. ಈ ಮೂಲಕ ಜೆಡಿಯು ಶಾಸಕರಿಗೆ ಸಚಿವರಾಗುವ ಅವಕಾಶ ಲಭ್ಯವಾಗಲಿವೆ. ಎನ್ಪಿಎಫ್ ಹಾಗೂ ಎನ್ಪಿಪಿ ಎರಡೂ ಪಕ್ಷಗಳು ಬಿಜೆಪಿ ನೇತೃತ್ವದ ಪ್ರಸ್ತುತ ಆಡಳಿತ ಮೈತ್ರಿಕೂಟದ ಭಾಗವಾಗಿದೆ. ಆದಾಗ್ಯೂ, ಎರಡೂ ಪಕ್ಷಗಳು ಬಿಜೆಪಿಯೊಂದಿಗೆ ಯಾವುದೇ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಂಡಿಲ್ಲ. ಎಲ್ಲಾ 60 ಸ್ಥಾನಗಳಲ್ಲಿ ಏಕಾಂಗಿಯಾಗಲು ಸ್ಪರ್ಧಿಸಿತ್ತು.
-
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
IPL 2026: ಆರ್ಸಿಬಿ ಫ್ಯಾನ್ಸ್ ಗಮನಿಸಿ; ಮ್ಯಾಚ್ ದಿನ ನಮ್ಮ ಮೆಟ್ರೋ ತಡರಾತ್ರಿವರೆಗೂ ಸಂಚಾರ -
ಮುದ್ದೇನಹಳ್ಳಿಯಲ್ಲಿ ಪೋಷಕರ ಹರ್ಷ: 27 ಮಕ್ಕಳಿಗೆ ಹೊಸ ಬದುಕು ನೀಡಿದ ಉಚಿತ ಹೃದಯ ಚಿಕಿತ್ಸೆ ಶಿಬಿರ -
ಭಾರತದ ಸ್ಪೈಸ್ ಗಾರ್ಡನ್ ಕೇರಳ: ಇತಿಹಾಸ ಮತ್ತು ಪ್ರಕೃತಿಯ ಸುಂದರ ಕಥೆ -
RCB ಮ್ಯಾಚ್ ನೋಡಲು ಬರುವವರ ಗಮನಕ್ಕೆ: 44 ಮೆಟ್ರೋ ನಿಲ್ದಾಣಗಳಲ್ಲಿದೆ ಪಾರ್ಕಿಂಗ್ ವ್ಯವಸ್ಥೆ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
IPL ಟಿಕೆಟ್ ಕೇಳಿದ ಶಾಸಕರಿಗೆ ಸರ್ಕಾರ ಸಿಹಿಸುದ್ದಿ: ಆರ್ಸಿಬಿ ಮೊದಲ ಪಂದ್ಯ ವೀಕ್ಷಣೆಗೆ ಸಿಗಲಿದೆ ತಲಾ 2 ಟಿಕೆಟ್ -
B Khata: ಬಿ ಖಾತಾದಿಂದ ಎ ಖಾತಾ: ಹಳೆಯ ಗೈಡ್ಲೈನ್ ವ್ಯಾಲ್ಯೂ ವಿಧಿಸಲು ವಿಧಾನಸಭೆಯಲ್ಲಿ ಚರ್ಚೆ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ









Click it and Unblock the Notifications