Get Updates
Get notified of breaking news, exclusive insights, and must-see stories!

Rape Case: ಸಾವಿರಾರು ಜನರಿಂದ ದೀದಿ ನಿವಾಸಕ್ಕೆ ಮುತ್ತಿಗೆ- ಬ್ಯಾರಿಕೇಡ್ ಕಿತ್ತೆಸೆದು ಪ್ರತಿಭಟನಾಕಾರರ ಆಕ್ರೋಶ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜೀನಾಮೆಗೆ ಆಗ್ರಹಿಸಿ ಕೋಲ್ಕತ್ತಾದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಈ ವೇಳೆ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ವಿದ್ಯಾರ್ಥಿಗಳು ಸಿಎಂ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು. ಪೊಲೀಸ್ ಬ್ಯಾರಿಕೇಡ್‌ಗಳನ್ನು ತಳ್ಳಿ ನುಗ್ಗಲು ಪ್ರಯತ್ನಿಸಿದರು. ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗಿಳಿದು ವಿದ್ಯಾರ್ಥಿಗಳು ಪ್ರತಿಭಟಿಸಿದರು.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಈ ಪ್ರತಿಭಟನೆಗೆ ನಬಣ್ಣ ಅಭಿಯಾನ (Nabanna Protest) ಎಂದು ಹೆಸರಿಡಲಾಗಿದೆ. ಹೌರಾದಲ್ಲಿರುವ ನಬಣ್ಣ ಭವನ ರಾಜ್ಯ ಸಚಿವಾಲಯವಾಗಿದ್ದು, ಈ ಸ್ಥಳದಲ್ಲಿ ಪ್ರತಿಭಟನಾಕಾರರು ಹೆಚ್ಚಿನ ಸಂಖ್ಯೆಯಲ್ಲಿ ನರೆದಿದ್ದರು. ಹೀಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಬಿಗಿ ಭದ್ರತೆಯನ್ನು ಈ ಸ್ಥಳದಲ್ಲಿ ಒದಗಿಸಲಾಗಿದೆ.

Nabanna protest Thousands of protestors besiege Mamata Banerjee s residence

ಹೌದು... ಕೋಲ್ಕತ್ತಾದಲ್ಲಿ ಪ್ರತಿಭಟನೆಯ ನಿಮಿತ್ತ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸ್ ಪಡೆಗಳನ್ನು ನಿಯೋಜಿಸಲಾಗಿತ್ತು. ಹೌರಾ ಸೇತುವೆಯನ್ನು ಮುಚ್ಚಿ, ಸೇತುವೆಯ ಮೇಲೆ ಪೊಲೀಸರು ಕಬ್ಬಿಣದ ತಡೆ ಗೋಡೆಯನ್ನು ನಿರ್ಮಿಸಿದ್ದರು. ಜೊತೆಗೆ ಸಿಎಂ ನಿವಾಸಕ್ಕೂ ಬಿಗಿ ಭದ್ರತೆ ನೀಡಲಾಗಿತ್ತು. ಅಲ್ಲದೆ ಕೋಲ್ಕತ್ತಾದ ಹೇಸ್ಟಿಂಗ್ಸ್‌ನಲ್ಲಿರುವ ಫೋರ್ಟ್ ವಿಲಿಯಂ ಹಿಂಭಾಗದ ಚೆಕ್ ಗೇಟ್‌ಗಳ ಮೇಲೆ ತೈಲವನ್ನು ಲೇಪಿಸಿರುವುದು ಕಂಡುಬಂದಿದೆ. ಹೀಗೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ಹತ್ತುವುದನ್ನು ತಡೆಯಲಾಯಿತು.

ಪ್ರತಿಭಟನಾಕಾರರನ್ನು ಹತ್ತಿಕ್ಕಲು ಮೊದಲು ಹೇಸ್ಟಿಂಗ್ಸ್‌ನಲ್ಲಿ ಪೊಲೀಸರು ನೀರಿನ ಫಿರಂಗಿಗಳನ್ನು ಬಳಸಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಅಲ್ಲದೆ ಡ್ರೋನ್‌ಗಳ ಮೂಲಕವೂ ನಿಗಾ ಇಡಲಾಗಿತ್ತು. ಹೌರಾ ಕಮಿಷನರೇಟ್‌ನ ಸುಮಾರು ಎರಡು ಸಾವಿರ ಪೊಲೀಸರನ್ನು ನಬಣ್ಣ ಸುತ್ತಮುತ್ತ ನಿಯೋಜಿಸಲಾಗಿತ್ತು.

Nabanna protest Thousands of protestors besiege Mamata Banerjee s residence

6,000 ಹೆಚ್ಚುವರಿ ಪೊಲೀಸರ ನಿಯೋಜನೆ

ನಗರದಲ್ಲಿ ಯಾವುದೇ ಅಶಾಂತಿ ಉಂಟಾಗದಂತೆ ಸುಮಾರು 6,000 ಹೆಚ್ಚುವರಿ ಪೊಲೀಸರನ್ನು ರಸ್ತೆಗಳಲ್ಲಿ ನಿಯೋಜಿಸಲಾಗಿದೆ. 19 ಕಡೆ ಬ್ಯಾರಿಕೇಡ್‌ ಹಾಕಲಾಗಿದೆ. ಹೆಚ್ಚುವರಿ ಪೊಲೀಸ್ ಕಮಿಷನರ್ ಮಟ್ಟದ ಅಧಿಕಾರಿಗಳು ಸಹ ರಸ್ತೆಗಳಲ್ಲಿ ನಿಂತು ಭದ್ರತಾ ವ್ಯವಸ್ಥೆಗಳ ಮೇಲೆ ಕಣ್ಣಿಟ್ಟಿರುವುದು ಕಂಡುಬಂದಿದೆ.

ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆಸುತ್ತಿರುವವರು ಯಾರು?

ವಿದ್ಯಾರ್ಥಿ ಸಂಘಟನೆಗಳಾದ 'ಪಶ್ಚಿಮ ಬಂಗಾ ಛತ್ರ ಸಮಾಜ' ಮತ್ತು 'ಸಂಗ್ರಾಮಿ ಜೌತ ಮಂಚ್' ತಮ್ಮ 'ನಬಣ್ಣ ಅಭಿಜನ್' ರ್ಯಾಲಿಯನ್ನು ಆಯೋಜಿಸಿವೆ. ಪಶ್ಚಿಮ ಬಂಗಾ ಛತ್ರ ಸಮಾಜವು ನೋಂದಾಯಿಸದ ವಿದ್ಯಾರ್ಥಿ ಸಮೂಹವಾಗಿದೆ, ಆದರೆ ಸಂಗ್ರಾಮಿ ಜೌತಾ ಮಂಚ್ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುತ್ತದೆ.

ಮಮತಾ ಬ್ಯಾನರ್ಜಿ ವಿರುದ್ಧ ಪ್ರತಿಭಟನೆ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ-ಕೊಲೆ ಪ್ರಕರಣದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಹೀಗಾಗಿ ಅವರು ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಆಡಳಿತ ಪಕ್ಷದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕೂಡಲೆ ಮಮತಾ ಬ್ಯಾನರ್ಜಿ ರಾಜೀನಾಮೆ ನೀಡಬೇಕು ಎಂದು ಘೋಷಣೆಗಳನ್ನು ಕೂಗಿದರು. ಈ ವೇಳೆ ಮುತ್ತಿಗೆ ಹಾಕಲು ಮುಂದಾದ ವಿದ್ಯಾರ್ಥಿಗಳನ್ನು ಪೊಲೀಸರು ತಡೆಯಲು ಜಲಫಿರಂಗಿ ಬಳಕೆ ಮಾಡಿ ವಿದ್ಯಾರ್ಥಿಗಳನ್ನು ಚದುರಿಸುವ ಪ್ರಯತ್ನ ಮಾಡಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+