ನಾಗಾಲ್ಯಾಂಡ್ : ಎನ್ ಡಿಪಿಪಿ-ಬಿಜೆಪಿ ಸಿಎಂ ಅಭ್ಯರ್ಥಿ ನೈಫಿಯು ರಿಯೋ
ಕೋಹಿಮಾ, ಮಾರ್ಚ್ 03: ನಾಗಾಲ್ಯಾಂಡ್ ನಲ್ಲಿ ಮತದಾನಕ್ಕೂ ಮುನ್ನವೇ ಜಯಶಾಲಿ ಎಂದು ಘೋಷಿತರಾದ ನೈಫಿಯು ರಿಯೋ ಅವರು ಎನ್ ಡಿಪಿಪಿ(ನ್ಯಾಶ್ನಲ್ ಡೆಮಾಕ್ರೆಟಿಕ್ ಪ್ರೋಗ್ರೆಸ್ಸಿವ್ ಪಾರ್ಟಿ) ಮತ್ತು ಬಿಜೆಪಿ (ಭಾರತೀಯ ಜನತಾ ಪಾರ್ಟಿ) ಮೈತ್ರಿಕೂಟದ ಮುಖ್ಯಮಂತ್ರಿ ಅಭ್ಯರ್ಥಿಯಾಗುವುದು ಬಹುತೇಕ ಖಚಿತವಾಗಿದೆ.
ನಾಗಾಲ್ಯಾಂಡ್ ನಲ್ಲಿ ಎನ್ ಡಿಪಿಪಿ ಮತ್ತು ಬಿಜೆಪಿ ಮೈತ್ರಿಕೂಟ ಸರ್ಕಾರದ ರಚಿಸುವುದು ಸಹ ಬಹುತೇಕ ಖಚಿತವಾದ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ರಿಯೋ ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಮೈತ್ರಿಕೂಟ ಒಪ್ಪಿಕೊಳ್ಳಲಿದೆ.
ಈಗಾಗಲೇ 11 ವರ್ಷಗಳ ಕಾಲ ನಾಗಾಲ್ಯಾಂಡ್ ನಲ್ಲಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ ಅನುಭವವೂ ರಿಯೋ ಅವರಿಗಿದ್ದು, ಈ ಭಾಗದಲ್ಲಿ ಶಾಂತಿ-ಸುವ್ಯವಸ್ಥೆಯನ್ನು ಕಾಪಾಡಿದ ಮಹಾನ್ ನಾಯಕ ಎಂದೇ ಇವರನ್ನು ಇಲ್ಲಿನ ಜನರು ಗೌರವಿಸುತ್ತಾರೆ.

ನಾಗಾಲ್ಯಾಂಡ್ ನಿಂದ ಏಕೈಕ ಲೋಕಸಭಾ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದ ರಿಯೋ, ಎನ್ ಪಿಎಫ್ ಪಕ್ಷ(ನಾಗಾ ಪೀಪಲ್ಸ್ ಫ್ರಂಟ್) ಪ್ರತಿನಿಧಿಸುತ್ತಿದ್ದರು. ಆದರೆ ಕಳೆದ ಜನವರಿಯಲ್ಲಿ ಎನ್ ಪಿಎಫ್ ಪಕ್ಷ ಬಿಜೆಪಿಯೊಂದಿಗಿನ ಮೈತ್ರಿ ಮುರಿದುಕೊಳ್ಳಲು ನಿರ್ಧರಿಸಿದ ಕಾರಣ ಪಕ್ಷ ತೊರೆದಿದ್ದರು. ಆಗಷ್ಟೇ ಸ್ಥಾಪನೆಯಾಗಿದ್ದ ಎನ್ ಡಿಪಿಪಿ ಪಕ್ಷ ಸೇರಿದ್ದರು. ಇದೀಗ ಈ ಪಕ್ಶಶ ಬಿಜೆಪಿಯೊಂದಿಗೆ ಮೈತ್ರಿ ಸಾಧಿಸಿದ್ದು, ಅವರನ್ನೇ ಮುಖ್ಯಮಂತ್ರಿ ಅಭ್ಯರ್ಥಿಯನ್ನಾಗಿ ಒಮ್ಮತದಿಂದ ಒಪ್ಪಿಕೊಳ್ಳಲಿದೆ.
ಚುನಾವಣೆಗೂ ಮುನ್ನವೇ ಬಿಜೆಪಿಯಿಂದ 20 ಮತ್ತು ಎನ್ ಡಿಪಿಪಿ ಯಿಂದ 40 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳನ್ನು ಸೂಚಿಸಲು ಒಪ್ಪಂದವಾಗಿತ್ತು.
ಉತ್ತರ ಅಂಗಾಮಿ 2 ಕ್ಷೇತ್ರದಲ್ಲಿ ರಿಯೋ ಅವರ ವಿರುದ್ಧ ಸ್ಪರ್ಧಿಸಿಸದ್ದ ಎನ್ ಪಿಎಫ್ ಚುಫ್ವೋ ಅಂಗಾಮಿ ಅವರು ಮತದಾನಕ್ಕೂ ಮುನ್ನ ನಾಮಪತ್ರ ಹಿಮಪಡೆದಿದ್ದರಿಂದ ಈ ಕ್ಷೇತ್ರದಿಂದ ರಿಯೋ ಅವರು ಅವಿರೋಧವಾಗಿ ಆಯ್ಕೆಯಾಗಿದ್ದರು.
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications