video: ರಾಯ್ಪುರದಲ್ಲಿ ಪುರುಷರ ನಗ್ನ ಪ್ರತಿಭಟನೆ, ವಿಡಿಯೋ ವೈರಲ್
ನವದೆಹಲಿ, ಜುಲೈ 18: ಛತ್ತೀಸ್ಗಢ ವಿಧಾನಸಭೆಯ ಅಧಿವೇಶನ ನಡೆಯುತ್ತಿರುವ ದಿನವೇ ರಾಜ್ಯದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ನಕಲಿ ಜಾತಿ ಪ್ರಮಾಣಪತ್ರದ ಹಾವಳಿಯ ವಿಷಯವನ್ನು ಗಮನಕ್ಕೆ ತರಲು ಬಟ್ಟೆ ಇಲ್ಲದೆ ಬೀದಿಗಿಳಿದ ಯುವಕರು ನಗ್ನವಾಗಿ ಪ್ರತಿಭಟನೆ ನಡೆಸಿದರು.
ಯುವಕರ ನಗ್ನ ಪ್ರತಿಭಟನೆಯು ರಾಜ್ಯ ವಿಧಾನಸಭೆ ದಿನಕ್ಕೆ ಕಪ್ಪುಚುಕ್ಕೆಯಾಗಿ ದಾಖಲಾಯಿತು. ನಕಲಿ ಜಾತಿ ಪ್ರಮಾಣ ಪತ್ರದ ಮೇಲೆ ಕ್ರಮಕೈಗೊಳ್ಳಬೇಕು ಎಂಬ ಬೇಡಿಕೆ ಹೊಸದಲ್ಲವಾದರೂ ರಾಜ್ಯದಲ್ಲಿ ಇಂತಹ ಪ್ರತಿಭಟನೆ ನಡೆಯುತ್ತಿರುವುದು ಇದೇ ಮೊದಲ ಬಾರಿಯಾಗಿದೆ.

ಪ್ರತಿಭಟನೆಯಲ್ಲಿ ಮೈಮೇಲೆ ಬಟ್ಟೆಯಿಲ್ಲದ ಯುವಕರು ಕೈಯಲ್ಲಿ ಭಿತ್ತಿಪತ್ರಗಳನ್ನು ಹಿಡಿದುಕೊಂಡು ರಸ್ತೆಯಲ್ಲಿ ನಡೆಯುತ್ತಿದ್ದರು. ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಉದ್ಯೋಗ ಗಿಟ್ಟಿಸಿಕೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರು ಒತ್ತಾಯಿಸಿ ಘೋಷಣೆ ಕೂಗುತ್ತಿದ್ದರು.
ಅಧಿಕಾರದಲ್ಲಿರುವ ಜನರು ತಮ್ಮ ಪ್ರತಿಭಟನೆಯನ್ನು ಗಮನಿಸುತ್ತಾರೆ ಎಂಬ ಭರವಸೆಯೊಂದಿಗೆ ರಸ್ತೆಯಲ್ಲಿ ಬೆತ್ತಲೆಯಾಗಿ ಪ್ರತಿಭಟನೆ ನಡೆಸುತ್ತಿರುವ ಯುವಕರು ಯಾವುದೇ ವಿವಿಐಪಿ ವಾಹನವನ್ನು ಕಂಡಾಗ ಓಡಿಹೋಗುವುದು ಕಂಡುಬಂದರು. ವಾಹನಗಳು ವಿಧಾನಸಭೆಯತ್ತ ಸಾಗಲು ಯತ್ನಿಸುತ್ತಿದ್ದಾಗ ಯುವಕರು ಫಲಕಗಳನ್ನು ಹಿಡಿದುಕೊಂಡು ವಿವಿಐಪಿ ಕಾರುಗಳನ್ನು ಹಿಂಬಾಲಿಸುತ್ತಿರುವುದು ಕಂಡುಬಂದಿತು.
छत्तीसगढ़ में आज विधानसभा सत्र शुरु हुआ है.
— Alok Putul (@thealokputul) July 18, 2023
जब VVIP विधानसभा जा रहे थे, उसी समय दर्जन भर नौजवान पूरी तरह से नग्न हो कर सड़कों पर आ गए.
इन नौजवानों की माँग थी कि फ़र्ज़ी आरक्षण प्रमाण पत्र के आधार पर नौकरी कर रहे लोगों पर कार्रवाई की जाए. pic.twitter.com/e9gr8GuyXI
ಛತ್ತೀಸ್ಗಢದಲ್ಲಿ ಸರ್ಕಾರಿ ನೌಕರಿ ಪಡೆಯಲು ನಕಲಿ ಜಾತಿ ಪ್ರಮಾಣ ಪತ್ರದ ವಿಚಾರವು ಕೆಲ ದಿನಗಳಿಂದ ಸುದ್ದಿಯಲ್ಲಿದೆ. 2021 ರಲ್ಲಿ, ನಕಲಿ ಪರಿಶಿಷ್ಟ ಪಂಗಡ (ST) ಜಾತಿ ಪ್ರಮಾಣಪತ್ರವನ್ನು ಬಳಸಿದ್ದಕ್ಕಾಗಿ PWD ಕಾರ್ಯನಿರ್ವಾಹಕ ಇಂಜಿನಿಯರ್ ಅನ್ನು ಅಮಾನತುಗೊಳಿಸಲಾಗಿದೆ.
ಸರ್ಕಾರಿ ನೌಕರಿ ಪಡೆಯಲು ಅಭ್ಯರ್ಥಿಗಳು ಬಳಸುತ್ತಿರುವ ನಕಲಿ ಜಾತಿ ಪ್ರಮಾಣ ಪತ್ರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ಹಲವು ಬಾರಿ ಬೇಡಿಕೆ ಸಲ್ಲಿಸಿದರೂ ಇಲಾಖೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿದರು. ನಕಲಿ ಜಾತಿ ಪ್ರಮಾಣ ಪತ್ರ ಹೊಂದಿರುವವರು ಅರ್ಹತೆ ಇಲ್ಲದೇ ಉದ್ಯೋಗದ ಎಲ್ಲಾ ಸವಲತ್ತುಗಳನ್ನು ಅನುಭವಿಸುತ್ತಿದ್ದು, ಅಂತಹ ನೌಕರರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ರಾಜ್ಯ ಆಯೋಗ ನಿರಾಕರಿಸಿದೆ ಎಂದು ಪ್ರತಿಭಟನಾಕಾರರು ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications