'ನಾರದಾ ಸ್ಟಿಂಗ್': 13 ಟಿಎಂಸಿ ನಾಯಕರ ಮೇಲೆ ಸಿಬಿಐನಿಂದ ಎಫ್ಐಆರ್
13 ಟಿಎಂಸಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಸಂಚು)ಮ ಸೆಕ್ಷನ್ 13(2), 13(1ಡಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7ರ ಅಡಿಯಲ್ಲಿ ಸಿಬಿಐ ಎಫ್ಐಆರ್ ಸಲ್ಲಿಸಿದೆ.
ಕೊಲ್ಕೊತ್ತಾ, ಏಪ್ರಿಲ್ 18: 'ನಾರದಾ ಸ್ಟಿಂಗ್' ಪ್ರಕರಣದಲ್ಲಿ 13 ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ದ ಸಿಬಿಐ ಎಫ್ಐಆರ್ ದಾಖಲಿಸಿಕೊಂಡಿದೆ.
13 ಟಿಎಂಸಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ 120 ಬಿ (ಕ್ರಿಮಿನಲ್ ಸಂಚು)ಮ ಸೆಕ್ಷನ್ 13(2), 13(1ಡಿ) ಮತ್ತು ಭ್ರಷ್ಟಾಚಾರ ತಡೆ ಕಾಯ್ದೆ ಸೆಕ್ಷನ್ 7ರ ಅಡಿಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.
ನಾರದ ಸ್ಟಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ 13 ನಾಯಕರ ವಿರುದ್ಧ ಎಫ್ಐಆರ್ ದಾಖಲಾಗುತ್ತಿದ್ದಂತೆ ಟಿಎಂಸಿಯಲ್ಲಿ ತಲ್ಲಣ ಶುರುವಾಗಿದೆ. ಆರಂಭದಲ್ಲಿ ನಾರದಾ ಸ್ಟಿಂಗ್ ವಿಡಿಯೋವನ್ನು ಸಿಬಿಐ ಪ್ರಯೋಗಾಲಯಕ್ಕೆ ಕಳುಹಿಸಿತ್ತು. ವಿಡಿಯೋ ಅಸಲಿ ಎಂದು ತಿಳಿಯುತ್ತಿದ್ದಂತೆ ಕೇಂದ್ರ ತನಿಖಾ ದಳ ಎಫ್ಐಆರ್ ದಾಖಲಿಸಿದೆ.[ಕಾಶ್ಮೀರದಲ್ಲಿನ್ನು ಸೇನೆಯಿಂದ ಪ್ಲಾಸ್ಟಿಕ್ ಗುಂಡುಗಳ ಬಳಕೆ]

ಸಿಬಿಐ ಎಫ್ಐಆರ್ ದಾಖಲಿಸಿದ ನಾಯಕರಲ್ಲಿ ಟಿಎಂಸಿಯ ಮದನ್ ಮಿತ್ರಾ, ಸೌಗಾತಾ ರಾಯ್, ಮುಕುಲ್ ರಾಯ್ ಸೇರಿದಂತೆ ಹಿರಿಯ ನಾಯಕರ ಹೆಸರುಗಳೇ ಇವೆ. ನಾರಾದಾ ಸ್ಟಿಂಗ್ ವಿಡಿಯೋದಲ್ಲಿ ಈ ಎಲ್ಲಾ ಹಿರಿಯ ಟಿಎಂಸಿ ನಾಯಕರು ಹಣ ತೆಗೆದುಕೊಳ್ಳುವ ದೃಶ್ಯಗಳಿವೆ.
ಕೊಲ್ಕೊತ್ತಾ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟಿನ ಆದೇಶದ ಮೇರೆಗೆ ಸಿಬಿಐ ಈ ಪ್ರಕರಣವನ್ನು ಕೈಗೆತ್ತಿಕೊಂಡು ತನಿಖೆ ನಡೆಸುತ್ತಿದೆ.[ಎಐಎಡಿಎಂಕೆ ಚಿನ್ಹೆಗಾಗಿ ಲಂಚ: ಯಾರು ಈ ಚಾಲಾಕಿ ಮಧ್ಯವರ್ತಿ?]
ಏನಿದು 'ನಾರದಾ ಸ್ಟಿಂಗ್'?
ನಾರದಾ ಎನ್ನುವ ಸುದ್ದಿ ವಾಹಿನಿ ಈ ಸ್ಟಿಂಗ್ ಆಪರೇಷನ್ ನಡೆಸಿತ್ತು. 2016 ಪಶ್ಚಿಮ ಬಂಗಾಳ ಚುನಾವಣೆಗೂ ಮುನ್ನ ಈ ಸ್ಟಿಂಗ್ ಆಪರೇಷನ್ ನಡೆಸಿ ಹಲವು ಚಾನಲ್ ಗಳಲ್ಲಿ ಪ್ರಸಾರವಾಗಿತ್ತು.
ಈ ಕುಟುಕು ಕಾರ್ಯಾಚರಣೆಯಲ್ಲಿ 13 ಟಿಎಂಸಿ ನಾಯಕರು ಲಂಚ ತೆಗೆದುಕೊಳ್ಳುವ ದೃಶ್ಯಗಳಿದ್ದವು. ನಾರದಾ ಚಾನಲ್ ಖೊಟ್ಟಿ ಕಂಪೆನಿಯೊಂದನ್ನು ಸೃಷ್ಟಿಸಿ ಈ ನಾಯಕರ ಬಳಿ ಸಹಾಯ ಕೇಳುವ ನೆಪದಲ್ಲಿ ಹೋಗಿದ್ದರು. ನಂತರ ಲಂಚ ನೀಡಿದ್ದರು. ಇವೆಲ್ಲಾ ವಿಡಿಯೋದಲ್ಲಿ ದಾಖಲಾಗಿತ್ತು.
ಕೊಲ್ಕೊತ್ತಾ ಹೈಕೋರ್ಟ್ ಮಾರ್ಚ್ 17, 2017ರಲ್ಲಿ ಈ ಪ್ರಕರಣದ ತನಿಖೆ ನಡೆಸುವಂತೆ ಸಿಬಿಐಗೆ ಸೂಚಿಸಿತ್ತು. ತನಿಖೆಗೆ ತಡೆ ನೀಡುವಂತೆ ಕೋರಿ ಪಶ್ಚಿಮ ಬಂಗಾಳ ಸರಕಾರ ಸುಪ್ರೀಂ ಕೋರ್ಟ್ ಮೊರೆ ಹೋಯಿತಾದರೂ ಅರ್ಜಿ ತಿರಸ್ಕರಿಸಿದ್ದರಿಂದ ತನಿಖೆ ಮುಂದುವರಿದಿದೆ.
-
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
NR Narayana Murthy: ಬೆಂಗಳೂರಿನ ಯುಬಿ ಸಿಟಿಯಲ್ಲಿ ಬರೋಬ್ಬರಿ ಇಷ್ಟು ಕೋಟಿ ಐಷಾರಾಮಿ ಮನೆ ಖರೀದಿ ಮಾಡಿದ ದಂಪತಿ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
ಹೊಸ ಇಂಡಕ್ಷನ್ ಸ್ಟವ್ ಖರೀದಿಸುತ್ತಿದ್ದೀರಾ? ಹಾಗಾದರೆ ಬೆಸ್ಕಾಂ ನೀಡಿರುವ ಈ ಸಲಹೆ ಮರೆಯದಿರಿ












Click it and Unblock the Notifications