ನಾರಾಯಣ ಮೂರ್ತಿ ಅಳಿಯನಿಗೆ ಹೀನಾಯ ಸೋಲು ಕರುಣಿಸಿದ ಬ್ರಿಟಿಷರು!
ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯನಿಗೆ ಇಂದು ತೀವ್ರ ಆಘಾತವಾಗಿದೆ. ಇಡೀ ಜಗತ್ತು ಕಳೆದ 1 ವಾರದಿಂದ ನಾರಾಯಣ ಮೂರ್ತಿ ಅಳಿಯನ ಮೇಲೆ ಗಮನ ಇಟ್ಟು ಕೂತ್ತಿತ್ತು. ಈ ನಡುವೆ ಮತ್ತೊಮ್ಮೆ ಬ್ರಿಟನ್ ಪ್ರಧಾನಿ ಪಟ್ಟಕ್ಕೆ ಇನ್ಫೋಸಿಸ್ ನಾರಾಯಣ ಮೂರ್ತಿ ಅಳಿಯ ಆಯ್ಕೆ ಆಗಲಿದ್ದಾರೆ ಎಂಬ ನಿರೀಕ್ಷೆ ಇತ್ತು. ಆದರೆ ಆಗಿದ್ದು ಏನು ಗೊತ್ತೆ? ಬನ್ನಿ ತಿಳಿಯೋಣ.
ಅಷ್ಟಕ್ಕೂ ಭಾರತ ಮೂಲದ ನಂಟು ಹೊಂದಿರುವ ರಿಷಿ ಸುನಕ್ ಅವರು 2022ರಲ್ಲಿ ಬ್ರಿಟನ್ ದೇಶದ ಪ್ರಧಾನಿ ಹುದ್ದೆ ಅಲಂಕರಿಸಿದ್ದರು. ಇನ್ಫೋಸಿಸ್ ಸಂಸ್ಥೆಯ ಸಂಸ್ಥಾಪಕ ನಾರಾಯಣ ಮೂರ್ತಿಯ ಮಗಳ ಗಂಡ ಕೂಡ ಆಗಿರುವ ರಿಷಿ ಸುನಕ್ ಹೊಸ ಇತಿಹಾಸ ಸೃಷ್ಟಿ ಮಾಡಿದ್ರು. ಭಾರತ ಮೂಲದ ರಿಷಿ ಸುನಕ್ ಬ್ರಿಟನ್ಗೆ ಪ್ರಧಾನಿ ಆಗಿದ್ದು ದಾಖಲೆ ಸೃಷ್ಟಿ ಮಾಡಿತ್ತು, ಇದುವರೆಗೂ ಯಾವುದೇ ಭಾರತೀಯ ಮಾಡದ ಸಾಧನೆ ಅದಾಗಿತ್ತು. ಹೀಗಿದ್ದಾಗ ಮತ್ತೊಮ್ಮೆ ಆಯ್ಕೆ ಆಗುವ ಬಗ್ಗೆ ನಿರೀಕ್ಷೆ ಇಟ್ಟುಕೊಂಡಿದ್ದ ರಿಷಿ ಸುನಕ್ ಇದೀಗ ಹೀನಾಯ ಸೋಲು ಕಂಡಿದ್ದಾರೆ. ಹಾಗಾದ್ರೆ ರಿಷಿ ಸೋಲಿಗೆ ಕಾರಣ ಏನು? ಬನ್ನಿ ತಿಳಿಯೋಣ.

650 ಸ್ಥಾನದಲ್ಲಿ 326 ಸ್ಥಾನ!
ಹೌದು, ಬ್ರಿಟನ್ ಸಂಸತ್ತಿಗೆ ನಡೆದ ಚುನಾವಣೆಯಲ್ಲಿ ಕೀರ್ ಸ್ಟಾರ್ಮರ್ ನೇತೃತ್ವದಲ್ಲಿ ಲೇಬರ್ ಪಕ್ಷ ಭರ್ಜರಿ ಗೆಲುವು ಸಾಧಿಸಿದ್ದು. ಭಾರತ ಮೂಲದ ಪ್ರಧಾನಿ ಹಾಗೂ ಕನ್ಸರ್ವೇಟಿವ್ ಪಕ್ಷದ ಅಭ್ಯರ್ಥಿ ರಿಷಿ ಸುನಕ್ ಅವರು ಹೀನಾಯ ಸೋಲು ಕಂಡಿದ್ದಾರೆ. ಬ್ರಿಟನ್ ಸಂಸತ್ತಿನ ಒಟ್ಟಾರೆ 650 ಕ್ಷೇತ್ರಗಳಲ್ಲಿ ಸರಳ ಬಹುಮತಕ್ಕೆ ಬೇಕಾದ 326 ಸ್ಥಾನ ಈಗಾಗಲೇ ಲೇಬರ್ ಪಕ್ಷದ ಪಾಲಾಗಿದೆ. ಈ ಮೂಲಕವೇ ಇನ್ಫೋಸಿಸ್ ನಾರಾಯಣ ಮೂರ್ತಿ ಅವರ ಅಳಿಯನಿಗೆ ಭೀಕರ ಸೋಲು ಎದುರಾಗಿದೆ. ಅಲ್ಲದೆ ಈ ವಿಚಾರ ಈಗ ಜಾಗತಿಕವಾಗಿ ದೊಡ್ಡ ಮಟ್ಟಿಗೆ ಚರ್ಚೆಗೆ ವೇದಿಕೆ ಒದಗಿಸಿದೆ.
ಸೋಲಿನ ಹೊಣೆ ಹೊತ್ತ ಸುನಕ್!
ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪ್ರಸಕ್ತ ಚುನಾವಣೆಯ ಹೀನಾಯ ಸೋಲಿನ ಹೊಣೆ ಹೊತ್ತುಕೊಂಡು ಪ್ರತಿಕ್ರಿಯೆ ನೀಡಿ, ಬ್ರಿಟನ್ ಸಾರ್ವತ್ರಿಕ ಚುನಾವಣೆಯಲ್ಲಿ ಲೇಬರ್ ಪಕ್ಷ ಜಯಗಳಿಸಿದೆ. ಸ್ಟಾರ್ಮರ್ ಕೀರ್ ಅವರನ್ನ ಈಗಾಗಲೇ ಅಭಿನಂದಿಸಿದ್ದೇನೆ. ಅವರ ಪಕ್ಷಕ್ಕೆ ಗೆಲುವಾಗಿದೆ ನನ್ನ ಪಕ್ಷದ ಸೋಲಿನ ಹೊಣೆ ನಾನೇ ಹೊತ್ತುಕೊಳ್ಳುತ್ತೇನೆ ಎಂದು ಕೂಡ ಹೇಳಿದ್ದಾರೆ. ಅಲ್ಲದೆ ಅಧಿಕಾರ ಇಲ್ಲದಿದ್ದರೂ ನನ್ನ ಸೇವೆ ಮಾತ್ರ ನಿರಂತರ ಎಂದಿದ್ದಾರೆ ನಾರಾಯಣ ಮೂರ್ತಿ ಅಳಿಯ ರಿಷಿ ಸುನಕ್.
ಹಾಗೇ ಈ ಚುನಾವಣೆಯಲ್ಲಿ ಮತ್ತೊಂದು ಪ್ರಮುಖವಾದ ಸಂಗತಿ ಏನು ಅಂದ್ರೆ ಗ್ರ್ಯಾಂಟ್ ಶಾಪ್ಸ್, ಪೆನ್ನಿ ಮೊರ್ಡೌಂಟ್, ಜೇಕಪ್ ರೀಸ್ ಸೇರಿ ರಿಷಿ ಸುನಕ್ ಸಂಪುಟದಲ್ಲಿ ದೊಡ್ಡ ಹೆಸರು ಮಾಡಿದ್ದ ಸಚಿವರು & ಸಂಸದರು ಕೂಡ ಹೀನಾಯ ಸೋಲು ಕಂಡಿದ್ದಾರೆ. ಈ ಮೂಲಕ ರಿಷಿ ಸುನಕ್ ಅವರ ಆಡಳಿತದ ಬಗ್ಗೆ ಬ್ರಿಟನ್ ಜನರಲ್ಲಿ ತೀವ್ರ ಅಸಮಾಧಾನ ಇತ್ತು ಎಂದು ವಿಶ್ಲೇಷಣೆ ಮಾಡ್ತಿದ್ದಾರೆ ತಜ್ಞರು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications