ತಾಯಿ-ಮಗುವಿನ ಆರೋಗ್ಯ ಕಾಪಾಡಲು ಕೇಂದ್ರದ ದಿಟ್ಟ ಹೆಜ್ಜೆ
ನವದೆಹಲಿ, ಆಗಸ್ಟ್, 01: ತಾಯಿ ಹಾಗೂ ಮಗುವಿನ ಮರಣ ತಡೆಯಲು ಕೇಂದ್ರ ಸರ್ಕಾರ ದಿಟ್ಟ ಹೆಜ್ಜೆಯೊಂದನ್ನು ಇರಿಸಿದೆ. ಇನ್ನು ಮುಂದೆ ಪ್ರತಿ ತಿಂಗಳು 9ನೇ ತಾರಿಕಿನಂದು ದೇಶಾದ್ಯಂತ ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ಉಚಿತ ಆರೋಗ್ಯ ತಪಾಸಣೆ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಮನ್ ಕಿ ಬಾತ್ನ 22ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ ಹಲವಾರು ವಿಚಾರಗಳನ್ನು ದೇಶದ ಮುಂದೆ ಇಟ್ಟರು. ಅದರಲ್ಲಿ ಪ್ರಮುಖವಾಗಿ ಗರ್ಭಿಣಿಯರ ಆರೋಗ್ಯ ಸಮಸ್ಯೆ ಮತ್ತು ಹೆರಿಗೆ ಸಮಯದಲ್ಲಿ ಸಾವನ್ನಪ್ಪುತ್ತಿರುವ ಪ್ರಕರಣಗಳನ್ನು ಉಲ್ಲೇಖ ಮಾಡಿದರು.[ಸ್ವಾತಂತ್ರ್ಯ ದಿನಾಚರಣೆ ದಿನ ಮೋದಿ ಜೀವಕ್ಕೆ ಕಂಟಕ]
ಕೇಂದ್ರ ಸರ್ಕಾರ ಗರ್ಭಿಣಿಯರಿಗಾಗಿ 'ಸುರಕ್ಷಿತ ಮಾತೃತ್ವ ಅಭಿಯಾನ' ಆರಂಭಿಸಿದೆ. ಪ್ರತಿ ತಿಂಗಳ 9ನೇ ತಾರೀಕು ಸರ್ಕಾರಿ ಆಸ್ಪತ್ರೆಗಳಲ್ಲಿ ಗರ್ಭಿಣಿಯರಿಗೆ ಉಚಿತ ತಪಾಸಣೆ ನಡೆಯಲಿದ್ದು ಸಲಹೆ ಮತ್ತು ಆರೋಗ್ಯ ಮಾಹಿತಿ ನೀಡಲಾಗುತ್ತದೆ ಎಂದು ತಿಳಿಸಿದರು.

ಕ್ರೀಡಾಪಟುಗಳಿಗೆ ಶುಭಾಶಯ
ರಿಯೋ ಒಲಿಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಕ್ರೀಡಾಪಟುಗಳಿಗೆ ಶುಭ ಕೋರಿದ ಪ್ರಧಾನಿ ದೇಶದ ಹಿರಿಮೆಯನ್ನು ಮತ್ತಷ್ಟು ಎತ್ತರಕ್ಕೆ ಏರಿಸಿ ಎಂದು ಹಾರೈಸಿದರು.

ರೋಗಗಳ ಬಗ್ಗೆ ಎಚ್ಚರ
ಮಳೆಗಾಲದಲ್ಲಿ ಅಂಟಿಕೊಳ್ಳಬಹುದಾದ ರೋಗಗಳ ಬಗ್ಗೆ ಜಾಗೃತರಾಗಿರಬೇಕು. ಸರ್ಕಾರಿ ಇಲಾಖೆಗಳು ತಿಳುಸುವ ಸೂಚನೆಗಳ ಜತೆ ಸ್ವಯಂ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು.

ನಿಮ್ಮ ಸಲಹೆ ಬೇಕಿದೆ
ಸ್ವಾತಂತ್ರ್ಯ ದಿನಾಚರಣೆಯಂದು ನಾನು ಮಾಡಲಿರುವ ಭಾಷಣಕ್ಕೆ ನಿಮ್ಮ ಸಲಹೆ ಬೇಕು. ಸಾಮಾಜಿಕ ತಾಣ ಮತ್ತು ಪತ್ರದ ಮೂಲಕ ನನ್ನಗೆ ನಿಮ್ಮ ಇಂಗಿತವನ್ನು ತಿಳಿಸಿ.

ಅಟಲ್-ಕಲಾಂ
ಎಪಿಜೆ ಅಬ್ದುಲ್ ಕಲಾಂ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಕನಸುಗಳನ್ನು ಮೋದಿ ಮತ್ತೆ ಸ್ಮರಿಸಿದರು. ಅವುಗಳನ್ನು ಸಾಕಾರ ಮಾಡಲು ಎಲ್ಲರ ಸಹಕಾರ ಕೋರಿದರು.

ಸಂಶೋಧನೆಗೆ ಮುಂದಾಗಿ
ಭಾರತ ಹಲವು ಸಮಸ್ಯೆಗಳನ್ನು ಎದುರಿಸುತ್ತಿದೆ. ಅವಕ್ಕೆ ತಾಂತ್ರಿಕ ಪರಿಹಾರ ಹುಡುಕಬೇಕಾಗಿದೆ. ಹೀಗಾಗಿ ಯುವಕರು ಸಂಶೋಧನೆಗೆ ಮಂದಾಗಬೇಕು ಎಂದು ಪ್ರಧಾನಿ ಕರೆ ನೀಡಿದರು.

ಅಟಲ್ ಟಿಂಕರಿಂಗ್ ಲ್ಯಾಬ್
ಯಾವುದೇ ಶಾಲೆ 'ಅಟಲ್ ಟಿಂಕರಿಂಗ್ ಲ್ಯಾಬ್' ತೆರೆದರೆ ಅದಕ್ಕೆ 10 ಲಕ್ಷ ರೂ. ನೀಡಲಾಗುತ್ತದೆ. ಐದು ವರ್ಷಗಳ ಕಾಲ ನಿರ್ವಹಣೆಗೆ ಅಷ್ಟೇ ಮೊತ್ತ ಒದಗಿಸಲಾಗುತ್ತದೆ ಎಂದು ಮೋದಿ ತಿಳಿಸಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ












Click it and Unblock the Notifications