ಕಾಂಗ್ರೆಸ್ ಅಸ್ತಿತ್ವ ಉಳಿಸಿಕೊಳ್ಳಲು ಸಿಬಿಐ ಬಳಕೆ : ಮೋದಿ
ಬಹರೈಚ್ (ಉತ್ತರ ಪ್ರದೇಶ), ನ.8 : "ಬಿಜೆಪಿ ಮತ್ತು ನರೇಂದ್ರ ಮೋದಿಯನ್ನು ಪ್ರಜಾಪ್ರಭುತ್ವ ಮಾದರಿಯಲ್ಲಿ ಸೋಲಿಸಲು ಸಾಧ್ಯವಿಲ್ಲ ಎಂದು ಅರಿತಿರುವ ಕಾಂಗ್ರೆಸ್ ಸಿಬಿಐ ಸೇರಿದಂತೆ ಇತರ ತಂತ್ರಗಳನ್ನು ಅನುಸರಿಸುತ್ತಿದೆ" ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಶುಕ್ರವಾರ ಉತ್ತರ ಪ್ರದೇಶದ ಬಹರೈಚ್ ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಿದರು.
ಉತ್ತರ ಪ್ರದೇಶದಲ್ಲಿ ಆಡಳಿತ ನಡೆಸುತ್ತಿರುವ ಸಮಾಜವಾದಿ ಪಕ್ಷ, ಕಾಂಗ್ರೆಸ್, ಬಿಎಸ್ಪಿ ಪಕ್ಷದ ವಿರುದ್ಧವೂ ಆರೋಪಗಳ ಸುರಿಮಳೆ ಸುರಿಸಿದ ಮೋದಿ, ಮೂರು ಪಕ್ಷಗಳಲ್ಲಿ ಯಾವುದೇ ಬದಲಾವಣೆ ಇಲ್ಲ. ಹೆಸರೊಂದನ್ನು ಬಿಟ್ಟು ಎಂದು ವ್ಯಂಗ್ಯವಾಡಿದರು. ಮೂರು ಪಕ್ಷಗಳಿಗೂ ಜನರ ಸಂಕಷ್ಟಕ್ಕೆ ಸ್ಪಂದಿಸುವುದಿಲ್ಲ ಎಂದು ದೂರಿದರು.

ಕಾಂಗ್ರೆಸ್ ಯುವ ನೇತಾರ ದಿನವೊಂದಕ್ಕೆ ಕುಡಿಯುವ ನೀರಿಗೆ ವ್ಯಯಿಸುವ ಮೊತ್ತ 100 ರಿಂದ 200 ರೂಪಾಯಿಯಾಗಿದ್ದರೆ, ಅದೇ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ನಿಗದಿಗೊಳಿಸಿರುವ ಬಡಪಾಯಿಯೊಬ್ಬನ ಖರ್ಚಿನ ವೆಚ್ಚ ಕೇವಲ 26 ರೂಪಾಯಿ ಎಂದು ನರೇಂದ್ರ ಮೋದಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ನರೇಂದ್ರ ಮೋದಿ ಭಾಷಣದ ಮುಖ್ಯಾಂಶಗಳು












Click it and Unblock the Notifications