ಅನಿವಾಸಿ ಭಾರತೀಯರನ್ನು ಉದ್ದೇಶಿಸಿ ಮೋದಿ ಭಾಷಣ
ಅಹಮದಾಬಾದ್, ಸೆ.22 : ಬಿಜೆಪಿ ಪ್ರಧಾನಿ ಅಭ್ಯರ್ಥಿ ಮತ್ತು ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಭಾನುವಾರ ಅಮೆರಿಕಾದಲ್ಲಿರುವ ಭಾರತೀಯರನ್ನು ಉದ್ದೇಶಿಸಿ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾತನಾಡಿದರು. ಭಯೋತ್ಪಾದನೆ ವಿರುದ್ಧ ಜಾಗತಿಕ ಹೋರಾಟದ ಅಗತ್ಯವಿದೆ ಎಂದು ಮೋದಿ ಕರೆ ನೀಡಿದರು.
ತಂಪ ಫ್ಲೊರಿಡಾದಲ್ಲಿರುವ ಬಿಜೆಪಿಯ ರಾಷ್ಟ್ರೀಯ ಘಟಕದಲ್ಲಿ ಈ ಭಾಷಣದ ನೇರಪ್ರಸಾರ ಏರ್ಪಡಿಸಲಾಗಿತ್ತು. ತಮ್ಮ ಭಾಷಣವನ್ನು ನೈರೋಬಿಯ ಶಾಪಿಂಗ್ ಮಾಲ್ ನ ಗುಂಡಿನ ದಾಳಿಯಲ್ಲಿ ಮೃತಪಟ್ಟರಿಗೆ ಶ್ರದ್ಧಾಂಜಲಿ ಅರ್ಪಿಸುವ ಮೂಲಕ ಮೋದಿ ಪ್ರಾರಂಭಿಸಿ, ಭಯೋತ್ಪಾದನೆ ವಿರುದ್ಧ ವಿಶ್ವದ ಎಲ್ಲಾ ರಾಷ್ಟ್ರಗಳು ಒಗ್ಗಟ್ಟಾಗಿ ಹೋರಾಡಬೇಕು ಎಂದು ಕರೆ ನೀಡಿದರು.

ಅಟಲ್ ಜಿ ಹೊಗಳಿದ ಮೋದಿ : ಅಟಲ್ ಬಿಹಾರಿ ವಾಜಪೇಯಿ ಅವರ ಆಡಳಿತವನ್ನು ನೆನಪಿಸಿಕೊಂಡ ನರೇಂದ್ರ ಮೋದಿ, ಎನ್ ಡಿಎ ಸರ್ಕಾರ ಅನಿವಾಸಿ ಭಾರತೀಯರಿಗೆ ಅನುಕೂಲವಾಗಲು ಜಾರಿಗೆ ತಂದ ಯೋಜನೆಗಳ ಕುರಿತು ಮಾತನಾಡಿದರು.
ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರವಿದ್ದಾಗ ಶೇ.8.4 ರಷ್ಟಿದ್ದ ದೇಶದ ಜಿಡಿಪಿಯನ್ನು ಶೇ.4.8ಕ್ಕೆ ಇಳಿಸಿದ ಖ್ಯಾತಿ ಯುಪಿಎ ಸರ್ಕಾರ ಪಡೆದಿದೆ, ದೇಶವನ್ನು ಚಿಂತಾಜನ ಸ್ಥಿತಿಗೆ ತಳ್ಳಿರುವ ಕಾಂಗ್ರೆಸ್ ಪಟ್ಟಭದ್ರ ಹಿತಾಸಕ್ತಿಗಳನ್ನು ನಾವು ಚುನಾವಣೆ ಮೂಲಕವೇ ಕೆಳಗಿಸಬೇಕಾಗಿದೆ ಎಂದು ಮೋದಿ ಹೇಳಿದರು.
ಮತದಾನ ಮಾಡಿ, ಬಿಜೆಪಿಗೆ ಬೆಂಬಲ ನೀಡಿ : ಸಂವಾದ ಕಾರ್ಯಕ್ರಮ ಏರ್ಪಡಿಸಿದ್ದಕ್ಕೆ ಯುಎಸ್ಎ ಬಿಜೆಪಿಗೆ ಅಭಿನಂದನೆ ಸಲ್ಲಿಸಿದ ನರೇಂದ್ರ ಮೋದಿ, ಅನಿವಾಸಿ ಭಾರತೀಯರು ದೇಶಕ್ಕೆ ನೀಡುತ್ತಿರುವ ವಿವಿಧ ರೀತಿಯ ಕೊಡುಗೆಗಳಿಗಾಗಿ ಅವರಿಗೆ ಅಭಿನಂದನೆ ಸಲ್ಲಿಸಿದರು.
ಭಾರತೀಯ ಪಾಸ್ ಪೋರ್ಟ್ ಹೊಂದಿರುವ ಪ್ರತಿಯೊಬ್ಬರು ಅನಿವಾಸಿ ಭಾರತೀಯರು ಮತದಾನ ಮಾಡಬೇಕು. ನಿಮ್ಮ ಪ್ರತಿಯೊಂದು ಮತ ಸಹ ದೇಶವನ್ನು ಕಟ್ಟುವ ಕೆಲಸ ಮಾಡುತ್ತದೆ ಎಂದು ಮೋದಿ ತಮ್ಮ ಭಾಷಣದಲ್ಲಿ ಹೇಳಿದರು.
Urged all NRIs holding Indian passport to register themselves to vote. Every voter is a Bhagya Vidhata of Bharat! http://t.co/g3vSCt6OiC
— Narendra Modi (@narendramodi) September 22, 2013
ಬಿಜೆಪಿ ನೇತೃತ್ವದ ಎನ್ ಡಿಎಯನ್ನು ಅಧಿಕಾರಕ್ಕೆ ತಂದು ಕಾಂಗ್ರೆಸ್ ಪಕ್ಷವನ್ನು ಅಧಿಕಾರದಿಂದ ಕೆಳಗಿಸಲು ಬೆಂಬಲ ನೀಡಬೇಕೆಂದು ಮನವಿ ಮಾಡಿದರು. ಕಾಂಗ್ರೆಸ್ ನೇತೃತ್ವದ ಯುಪಿಯಿಂದ ಉಂಟಾಗಿರುವ ರಾಜಕೀಯ ಅಸ್ತಿರತೆ ಬಗ್ಗೆ ಮಾತನಾಡಿದರು.
ಕಾಂಗ್ರೆಸ್ ಜನರನ್ನು ನಿರ್ಲಕ್ಷಿಸಿ ಆಡಳಿತ ಮಾಡುತ್ತಿದೆ. ಬಿಜೆಪಿ 2014ರ ಲೋಕಸಭೆ ಚುನಾವಣೆಯನ್ನು ವಿವಿಧ ರಾಜ್ಯಗಳಲ್ಲಿ ಬಿಜೆಪಿ ಮಾಡಿರುವ ಸಾಧನೆಯನ್ನು ಮುಂದಿಟ್ಟುಕೊಂಡು ಎದುರಿಸುತ್ತದೆ ಎಂದು ನರೇಂದ್ರ ಮೋದಿ ಹೇಳಿದರು. ಯುಪಿಎ ಸರ್ಕಾರ 9 ವರ್ಷದಲ್ಲಿ ಮಾಡಿರುವ ಸಾಧನೆಯನ್ನು ಜನರ ಮುಂದೆ ಇಡುವಂತೆ ಮೋದಿ ಸವಾಲು ಹಾಕಿದರು.
Addressed Indian Diaspora via video conf at OFBJP-USA Convention in Tampa. Appreciate OFBJP for organizing this. http://t.co/g3vSCt6OiC
— Narendra Modi (@narendramodi) September 22, 2013
ನರೇಂದ್ರ ಮೋದಿ ಭಾಷಣದ ಪೂರ್ಣಪಾಠ English ನಲ್ಲಿ
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications