ತಮಿಳುನಾಡಿನಲ್ಲಿ ಸ್ಟಾಲಿನ್ ಭದ್ರಕೋಟೆ ಭೇದಿಸಿದ ವಿಜಯ್ಗೆ ಪ್ರಧಾನಿ ಮೋದಿ ವಿಶೇಷ ಅಭಿನಂದನೆ
ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶವು ಭಾರತೀಯ ರಾಜಕಾರಣದ ಇತಿಹಾಸದಲ್ಲೇ ಹೊಸ ದಾಖಲೆ ಬರೆದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಟ್ವೀಟ್ ಮೂಲಕ ತಮಿಳುನಾಡು ಜನತೆಗೆ ಧನ್ಯವಾದ ಅರ್ಪಿಸಿ, ಗೆದ್ದು ಬೀಗಿದ ದಳಪತಿ ವಿಜಯ್ ಅವರ ಟಿವಿಕೆ (ಟಿವಿಕೆ) ಪಕ್ಷಕ್ಕೆ ಅಭಿನಂದನೆ ತಿಳಿಸಿದ್ದಾರೆ. ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು ಎಂದು ಬರೆದುಕೊಂಡಿದ್ದಾರೆ.
ಟಿವಿಕೆ ಪಕ್ಷಕ್ಕೆ ಅಭಿನಂದನೆಗಳು
ಜನರ ಸಮಸ್ಯೆಗಳನ್ನು ಆಲಿಸಲು ಮತ್ತು ಅವರ ಜೀವನಮಟ್ಟ ಸುಧಾರಿಸಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ. ಚುನಾವಣೆಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಟಿವಿಕೆ ಪಕ್ಷಕ್ಕೆ ಅಭಿನಂದನೆಗಳು. ತಮಿಳುನಾಡಿನ ಪ್ರಗತಿ ಮತ್ತು ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಸದಾ ಶ್ರಮಿಸಲಿದೆ ಎಂದಿದ್ದಾರೆ. ತಮಿಳುನಾಡು ಚುನಾವಣೆಯಲ್ಲಿ ಎನ್ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಮತ್ತು ಅವರ ಜೀವನಮಟ್ಟ ಸುಧಾರಿಸಲು ನಾವು ಸದಾ ಮುಂಚೂಣಿಯಲ್ಲಿರುತ್ತೇವೆ ಎಂದು ಅವರು ಭರವಸೆ ನೀಡಿದ್ದಾರೆ.

ಇದೇ ವೇಳೆ ಮೊದಲ ಚುನಾವಣೆಯಲ್ಲೇ ಅದ್ಭುತ ಪ್ರದರ್ಶನ ನೀಡಿದ ದಳಪತಿ ವಿಜಯ್ ಅವರ ಟಿವಿಕೆ ಪಕ್ಷಕ್ಕೆ ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ. ತಮಿಳುನಾಡಿನ ಪ್ರಗತಿ ಮತ್ತು ಜನರ ಕಲ್ಯಾಣಕ್ಕಾಗಿ ಕೇಂದ್ರ ಸರ್ಕಾರವು ಸದಾ ಶ್ರಮಿಸಲಿದೆ ಎಂದು ಮೋದಿ ತಿಳಿಸಿದ್ದಾರೆ. ದಶಕಗಳಿಂದ ತಮಿಳುನಾಡನ್ನು ಆಳುತ್ತಿದ್ದ ಡಿಎಂಕೆ ಮತ್ತು ಎಐಎಡಿಎಂಕೆ ಪಕ್ಷಗಳಿಗೆ ಈ ಬಾರಿ ಭಾರಿ ಮುಖಭಂಗವಾಗಿದೆ. ವಿಜಯ್ ಅವರು ಯುವ ಮತದಾರರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದ್ದು, ಅದರಲ್ಲೂ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಸೋಲು ಈ ಚುನಾವಣೆಯ ಅತ್ಯಂತ ದೊಡ್ಡ ಸುದ್ದಿಯಾಗಿದೆ.
ರಾಹುಲ್ ಗಾಂಧಿ ಅಭಿನಂದನೆ
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೂಡ ದಳಪತಿ ವಿಜಯ್ ಅವರಿಗೆ ಫೋನ್ ಕರೆ ಮಾಡಿ, ಅವರ ಪಕ್ಷವಾದ 'ತಮಿಳಗ ವೆಟ್ರಿ ಕಳಗಂ' (TVK) ಸಾಧಿಸಿರುವ ಅದ್ಭುತ ಯಶಸ್ಸಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, "ಇದು ತಮಿಳುನಾಡಿನ ಯುವಜನತೆಯ ದನಿಯಾಗಿದೆ. ಈ ಜನಾದೇಶವನ್ನು ಯಾರೂ ನಿರ್ಲಕ್ಷಿಸಲು ಸಾಧ್ಯವಿಲ್ಲ" ಎಂದಿದ್ದಾರೆ. ಅಲ್ಲದೆ ತಮಿಳುನಾಡು ಮತ್ತು ಪುದುಚೇರಿಯಲ್ಲಿ ಪಕ್ಷಕ್ಕಾಗಿ ಶ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿರುವ ಅವರು, ರಾಜ್ಯದ ಜನರ ಹಿತರಕ್ಷಣೆಗಾಗಿ ಕಾಂಗ್ರೆಸ್ ಸದಾ ಬದ್ಧವಾಗಿದೆ ಎಂದಿದ್ದಾರೆ.
ಟಿವಿಕೆ ಮತ್ತು ಕಾಂಗ್ರೆಸ್ ಮೈತ್ರಿ ಸಂಭವ?
ಚುನಾವಣಾ ಫಲಿತಾಂಶದ ಟ್ರೆಂಡ್ಗಳ ಪ್ರಕಾರ ವಿಜಯ್ ಅವರ ಟಿವಿಕೆ ಪಕ್ಷವು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಮ್ಯಾಜಿಕ್ ನಂಬರ್ (118) ತಲುಪಲು ಅಲ್ಪ ಸಂಖ್ಯೆಯ ಸ್ಥಾನಗಳ ಕೊರತೆಯುಂಟಾದರೆ, ಕಾಂಗ್ರೆಸ್ ಪಕ್ಷವು ವಿಜಯ್ ಅವರಿಗೆ ಬೆಂಬಲ ನೀಡುವ ಸಾಧ್ಯತೆಯಿದೆ ಎಂದು ರಾಜಕೀಯ ವಲಯದಲ್ಲಿ ಚರ್ಚೆಗಳು ನಡೆಯುತ್ತಿವೆ. ರಾಹುಲ್ ಗಾಂಧಿ ಅವರ ಅಭಿನಂದನಾ ಸಂದೇಶವು ಈ ಮೈತ್ರಿಯ ಸುಳಿವು ನೀಡುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ತಮಿಳುನಾಡಿನಲ್ಲಿ ಐದು ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ ನಡುವಿನ ನೇರ ಹಣಾಹಣಿಗೆ ಈಗ ಅಂತ್ಯ ಬಿದ್ದಿದ್ದು, ದಳಪತಿ ವಿಜಯ್ ನೇತೃತ್ವದಲ್ಲಿ ಹೊಸ ರಾಜಕೀಯ ಪರ್ವ ಆರಂಭಗೊಂಡಿದೆ. ರಾಷ್ಟ್ರೀಯ ಪಕ್ಷಗಳಾದ ಬಿಜೆಪಿ ಮತ್ತು ಕಾಂಗ್ರೆಸ್ ಎರಡೂ ಕೂಡ ಈ ಹೊಸ ಶಕ್ತಿಯನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಮುಂದಾಗಿರುವುದು ಕುತೂಹಲ ಮೂಡಿಸಿದೆ. ವಿಜಯ್ ಅವರ ಪಕ್ಷವು 110ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ದ್ರಾವಿಡ ಪಕ್ಷಗಳಾದ ಡಿಎಂಕೆ ಮತ್ತು ಎಐಎಡಿಎಂಕೆಗೆ ಭಾರಿ ಆಘಾತ ನೀಡಿದೆ.
Gratitude to the voters of Tamil Nadu who supported the NDA in the Tamil Nadu Assembly Elections. We will always remain at the forefront in addressing people’s issues and improving their lives.
— Narendra Modi (@narendramodi) May 4, 2026
Congratulations to TVK on their impressive performance.
The Centre will leave no…












Click it and Unblock the Notifications