ಪಿಎಂ ಕೇರ್ಸ್ ನಿಧಿಗೆ ಪ್ರಧಾನಿ ಮೋದಿ ನೀಡಿದ ದೇಣಿಗೆ ಎಷ್ಟು?
ನವದೆಹಲಿ, ಸೆಪ್ಟೆಂಬರ್ 3: ಕೊರೊನಾ ವಿರುದ್ಧದ ಹೋರಾಟದ ಕಾರ್ಯಗಳಿಗೆ ಬಳಸಲು ಆರಂಭಿಸಲಾಗಿರುವ ಪಿಎಂ ಕೇರ್ಸ್ ಫಂಡ್ನ ಮೊದಲ ಲೆಕ್ಕಪತ್ರದ ವರದಿಯನ್ನು ಬುಧವಾರ ಬಹಿರಂಗಪಡಿಸಲಾಗಿತ್ತು. ಈ ನಿಧಿಯನ್ನು ಹುಟ್ಟುಹಾಕುವ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ 2.25 ಲಕ್ಷ ರೂ. ಹಣವನ್ನು ಆರಂಭದಲ್ಲಿ ನೀಡಿದ್ದರು ಎನ್ನುವುದು ಗುರುವಾರ ಬಹಿರಂಗವಾಗಿದೆ.
Recommended Video
ಮಾರ್ಚ್ 27ರಂದು ಸ್ಥಾಪನೆಯಾದ ಪಿಎಂ ಕೇರ್ಸ್ ನಿಧಿಗೆ ಐದೇ ದಿನದಲ್ಲಿ 3,076 ರೂ. ಹಣ ಬಂದಿತ್ತು ಎನ್ನುವುದು ವರದಿಯಾಗಿತ್ತು. ಆದರೆ ಈ ಹಣವು ಪ್ರಧಾನಿ ನರೇಂದ್ರ ಮೋದಿ ಆರಂಭದಲ್ಲಿ ನೀಡಿದ 2.25 ಲಕ್ಷ ರೂ ದೇಣಿಗೆಯನ್ನು ಒಳಗೊಂಡಿಲ್ಲ.
ಪಿಎಂ ಕೇರ್ಸ್ ಫಂಡ್ಗೆ ಸ್ವತಃ ತಾವೇ ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದ ಪ್ರಧಾನಿಯ ನಡೆಯನ್ನು ಬಿಜೆಪಿಯ ಅನೇಕ ನಾಯಕರು ಶ್ಲಾಘಿಸಿದ್ದರು. ಸಾರ್ವಜನಿಕ ಕಾರಣಗಳಿಗಾಗಿ ಪ್ರಧಾನ ಮೋದಿ ತಮ್ಮ ವೈಯಕ್ತಿಕ ಸಂಪತ್ತಿನಿಂದ ದೇಣಿಗೆ ನೀಡಿರುವುದು ಇದು ಮೊದಲ ಸಲವೇನಲ್ಲ. ಹೆಣ್ಣುಮಕ್ಕಳ ಶಿಕ್ಷಣ, ಗಂಗಾ ಸ್ವಚ್ಛತಾ ಯೋಜನೆ ಹಾಗೂ ಸವಲತ್ತುರಹಿತ ಪ್ರಜೆಗಳ ಕಲ್ಯಾಣಕ್ಕೆ ಸೇರಿದಂತೆ ಹಲವು ಸಂದರ್ಭದಲ್ಲಿ ಮೋದಿ ದೇಣಿಗೆ ನೀಡಿದ್ದಾರೆ.

ನರೇಂದ್ರ ಮೋದಿ ಇದುವರೆಗೂ ಇಂತಹ ಯೋಜನೆಗಳು, ಕಾರ್ಯಕ್ರಮಗಳಿಗೆ ನೀಡಿರುವ ಒಟ್ಟು ದೇಣಿಗೆ 103 ಕೋಟಿ ರೂ ದಾಟುತ್ತದೆ ಎಂದು ವರದಿಗಳು ತಿಳಿಸಿವೆ. 2019ರಲ್ಲಿ ಕುಂಭ ಮೇಳದಲ್ಲಿ ಸ್ವಚ್ಛತಾ ಕೆಲಸಗಾರರ ಕಲ್ಯಾಣ ನಿಧಿಯ ಆರಂಭಕ್ಕೆ ತಮ್ಮ ವೈಯಕ್ತಿಕ ಉಳಿತಾಯದಿಂದ 21 ಲಕ್ಷ ರೂ ದೇಣಿಗೆ ನೀಡಿದ್ದರು.
ದಕ್ಷಿಣ ಕೊರಿಯಾದ ಸಿಯೋಲ್ ಪ್ರಶಸ್ತಿಯಿಂದ ಪಡೆದ ಸಂಪೂರ್ಣ 1.3 ಕೋಟಿ ರೂ ಹಣವನ್ನು ಗಂಗಾ ನದಿ ನೀರು ಸ್ವಚ್ಛಗೊಳಿಸುವ ನಮಾಮಿ ಗಂಗಾಕ್ಕೆ ನೀಡಿದ್ದರು. ತಮ್ಮ ಸ್ಮರಣಿಕೆಗಳನ್ನು ಹರಾಜು ಹಾಕುವ ಮೂಲಕ 3.40 ಕೋಟಿ ರೂ ಸಂಗ್ರಹಿಸಿದ್ದರು. ಈ ಸಂಪೂರ್ಣ ಹಣವನ್ನು ಸ್ವಚ್ಚ ಗಂಗಾ ಯೋಜನೆಗೆ ಬಳಸಿದ್ದರು. 2015ರವರೆಗೂ ತಾವು ಪಡೆದ ಕಾಣಿಕೆಗಳ ಹರಾಜಿನಿಂದ ಕೂಡ 8.35 ಕೋಟಿ ಹೆಚ್ಚುವರಿ ಹಣ ಸಂಗ್ರಹ ಮಾಡಿದ್ದರು. ಅದನ್ನು ಸಂಪೂರ್ಣವಾಗಿ ನಮಾಮಿ ಗಂಗೆ ಯೋಜನೆಗೆ ದೇಣಿಗೆಯನ್ನಾಗಿ ನೀಡಿದ್ದರು.
ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್ ಸರ್ಕಾರಿ ನೌಕರರ ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ 21 ಲಕ್ಷ ರೂ ದೇಣಿಗೆ ನೀಡಿದ್ದರು.
-
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ












Click it and Unblock the Notifications