ಈ ದೀಪಾವಳಿಯನ್ನು ಯೋಧರಿಗೆ ಸಮರ್ಪಿಸೋಣ: ಪ್ರಧಾನಿ ಮೋದಿ
ನವದೆಹಲಿ, ಅಕ್ಟೋಬರ್, 30: ಹಗಲಿರುಳು ನಮ್ಮನ್ನು ಕಾಯುವ ಸೇನಾ ಯೋಧರಿಗೆ ಈ ವರ್ಷದ ದೀಪಾವಳಿ ಹಬ್ಬವನ್ನು ಸಮರ್ಪಿಸೋಣ ಎಂದು ಪ್ರಧಾನಿ ನರೇಂದ್ರ ಮೋದಿ ಭಾನುವಾರ ತಿಳಿಸಿದರು.
ರೇಡಿಯೋ ಕಾರ್ಯಕ್ರಮ ಮನ್ ಕಿ ಬಾತ್ ನ 25ನೇ ಸರಣಿಯಲ್ಲಿ ದೇಶದ ಜನತೆಯನ್ನುದ್ದೇಶಿಸಿ ಮಾತನಾಡಿರುವ ಅವರು, ದೇಶದ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದರು.

ಕಾರ್ಯಕ್ರಮದಲ್ಲಿ ಯೋಧರ ತ್ಯಾಗ ಹಾಗೂ ಬಲಿದಾನಗಳ ಕುರಿತು ಶ್ಲಾಘಿಸಿದರು. "ಸೈನಿಕರು ಕರ್ತವ್ಯ ನಿರ್ವಹಿಸುತ್ತಿರುವುದರಿಂದ ನಾವು ಸಂತೋಷದಿಂದ ದೀಪಾವಳಿ ಆಚರಿಸುತ್ತಿದ್ದೇವೆ. ಆದ್ದರಿಂದ ನಮ್ಮ ಯೋಧರಿಗೆ ಧನ್ಯವಾದ ಹೇಳಬೇಕು" ಎಂದು ಅವರು ಹೇಳಿದರು.
ಭಾಷಣದ ಮುಖ್ಯಾಂಶಗಳು
ನಮ್ಮ ರಕ್ಷಣೆಯಲ್ಲಿ ಮಗ್ನರಾಗಿರು ಭದ್ರತಾ ಪಡೆ ಸಿಬ್ಬಂದಿ ಮತ್ತು ಯೋಧರಿಗೆ ಪ್ರೀತಿ ತೋರಿಸುತ್ತಿರುವ ನಾಗರಿಕರಿಗೆ ನನ್ನ ಕೃತಜ್ಞತೆಗಳು ಈ ದೀಪಾವಳಿ ಯೋಧರಿಗೆ ಸಮರ್ಪಿಸೋಣ ಎಂದು ತಿಳಿಸಿದರು.
* ದೀಪಾವಳಿಯನ್ನು ಕೇವಲ ಭಾರತದಲ್ಲಿ ಮಾತ್ರವಲ್ಲದೆ ವಿಶ್ವಾದ್ಯಂತ ಆಚರಿಸುತ್ತಾರೆ. ಬೆಳಕಿನ ಹಬ್ಬ ದೀಪಾವಳಿ ವಿವಿಧ ಸಮುದಾಯಗಳ ನಡುವೆ ಬಾಂಧವ್ಯ ಬೆಸೆಯುತ್ತದೆ ಎಂದು ಹೇಳಿದರು.
* ಕತ್ತಲೆಯನ್ನು ಕಳೆದು ಬೆಳಕು ಮೂಡಿಸುವ ಹಬ್ಬವೇ ದೀಪಾವಳಿ. ಈ ಹಬ್ಬ ಸ್ವಚ್ಛತೆಯನ್ನು ಕೂಡ ಸೂಚಿಸುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಗಳನ್ನು ಸ್ವಚ್ಛಗೊಳಿಸುತ್ತಾರೆ. ಅದರ ಜೊತೆಗೆ ನಮ್ಮ ಸುತ್ತಮುತ್ತಲೂ ಕೂಡ ಶುಚಿಯಾಗಿಟ್ಟುಕೊಳ್ಳಬೇಕು.
* ಭಾರತದ ಕಲೆ, ಸಂಸ್ಕೃತಿ, ಹಬ್ಬಗಳು ನಮ್ಮ ಪರಿಸರದ ಬಗ್ಗೆ ಜಾಗೃತಿ ಮೂಡಿಸುವುದಲ್ಲದೆ ಭೂಮಿ, ಪಕ್ಷಿ, ಪ್ರಾಣಿ, ನದಿ, ಗುಡ್ಡ-ಬೆಟ್ಟಗಳ ಬಗ್ಗೆ ನಮ್ಮ ಜವಾಬ್ದಾರಿ ಏನೆಂಬುದನ್ನು ತಿಳಿಸುತ್ತದೆ.
* ನಮ್ಮ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ಯೋಧರ ಹೆಸರಿನಲ್ಲಿ ದೀಪ ಬೆಳಗೋಣ.
* ಐಟಿಬಿಪಿ, ಅಸ್ಸಾಂ ರೈಫಲ್ಸ್, ಸಿಆರ್ ಪಿಎಫ್, ಬಿಎಸ್ಎಫ್, ನೌಕಾಪಡೆ, ಸೇನೆ ಮತ್ತು ಕರಾವಳಿ ಪಡೆಯ ಸೈನಿಕರ ಉತ್ಸಾಹ, ಧೈರ್ಯ, ಮತ್ತು ಯೋಧರ ತ್ಯಾಗಗಳು ಶ್ಲಾಘನೀಯ.
* ಬಯಲು ಶೌಚ ಮುಕ್ತ ರಾಜ್ಯ ಎಂಬ ಕೀರ್ತಿಗೆ ಪಾತ್ರವಾಗಿರುವ ಹಿಮಾಚಲ ಪ್ರದೇಶ ಮತ್ತು ಸಿಕ್ಕಿಂ ರಾಜ್ಯಗಳಿಗೆ ಪ್ರಧಾನಿ ಮೋದಿ ಅಭಿನಂದನೆ ಸಲ್ಲಿಸಿದರು.
* ತಮ್ಮ ರಾಜ್ಯವನ್ನು ಬಯಲು ಶೌಚ ಮುಕ್ತಗೊಳಿಸಲು ಸಕ್ರಿಯವಾಗಿ ಪಾಲ್ಗೊಳ್ಳುತ್ತಿರುವ ಕೇರಳದ ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಧನ್ಯವಾದ ಪ್ರಧಾನಿ ಮೋದಿ ಧನ್ಯವಾದ ಹೇಳಿದರು.
-
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು












Click it and Unblock the Notifications