ಒಬಾಮಾರಿಂದ ನರೇಂದ್ರ ಮೋದಿಗೆ ಅಧಿಕೃತ ಆಹ್ವಾನ
ನವದೆಹಲಿ, ಜು.11 : ಅಮೆರಿಕ ಅಧ್ಯಕ್ಷ ಬರಾಕ್ ಒಬಾಮಾ ಅವರು ದ್ವಿಪಕ್ಷೀಯ ಮಾತುಕ್ತೆ ನಡೆಸಲು ಭಾರತದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಧಿಕೃತ ಆಹ್ವಾನ ಕಳಿಸಿದ್ದಾರೆ. ಸೆಪ್ಟೆಂಬರ್ ನಲ್ಲಿ ಮೋದಿ ಜತೆ ಮಾತುಕತೆಗೆ ಒಬಾಮಾ ಉತ್ಸುಕರಾಗಿದ್ದಾರೆ ಎಂದು ಅಮೆರಿಕದ ಉಪ ಕಾರ್ಯದರ್ಶಿ ವಿಲಿಯಮ್ ಜೆ ಬರ್ನ್ಸ್ ಹೇಳಿದ್ದಾರೆ.
ಭಾರತ ಪ್ರವಾಸದಲ್ಲಿರುವ ವಿಲಿಯಂ ಅವರು ಅಧಿಕೃತ ಆಹ್ವಾನ ಪತ್ರವನ್ನು ಭಾರತ ಸರ್ಕರಕ್ಕೆ ನೀಡಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಖಚಿತಪಡಿಸಿದೆ.ಬರ್ನ್ಸ್ ಅವರು ಗೃಹ ಸಚಿವ ರಾಜನಾಥ್ ಸಿಂಗ್, ವಿತ್ತ ಸಚಿವ ಅರುಣ್ ಜೇಟ್ಲಿ, ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ಸೆಪ್ಟೆಂಬರ್ 26ರಂದು ವಿಶ್ವಸಂಸ್ಥೆಯ ಮಹಾ ಸಭೆಯನ್ನುದ್ದೇಶಿ ಮೋದಿ ಭಾಷಣ ಮಾಡಲಿದ್ದಾರೆ. ಅದಾದ ನಂತರ ಮೋದಿ-ಒಬಾಮಾ ಭೇಟಿ ನಡೆಯುವ ಸಾಧ್ಯತೆಯಿದೆ.

2002ರ ಗುಜರಾತ್ ಗಲಭೆಗಳ ಬಳಿಕ ಮೋದಿಗೆ ವೀಸಾ ನೀಡಬೇಕೇ, ಬೇಡವೇ? ಎಂಬ ಜಿಜ್ಞಾಸೆಯಲ್ಲಿದ್ದ ಅಮೆರಿಕ ಇದೀಗ ಮೋದಿ ಅವರಿಗೆ ಅಮೆರಿಕಕ್ಕೆ ಆಹ್ವಾನ ನೀಡುವ ಕುರಿತು ಸ್ಪಷ್ಟ ನಿರ್ಧಾರ ತೆಗದುಕೊಂಡಿದೆ. ಆದರೆ ಭೇಟಿ ದಿನಾಂಕಗಳಿನ್ನೂ ನಿಗದಿಯಾಗಿಲ್ಲ.
ಬೇಹುಗಾರಿಕೆ ಬಗ್ಗೆ ಮಾತುಕತೆ: ಬಿಜೆಪಿ ಮೇಲೆ ಅಮೆರಿಕದ ಎನ್ಎಸ್ಎ ಬೇಹುಗಾರಿಕೆ ನಡೆಸಿದ್ದರ ಬಗ್ಗೆ ವಿಲಿಯಂ ಬರ್ನ್ಸ್ ಅವರಲ್ಲಿ ಅರುಣ್ ಜೇಟ್ಲಿ ಅವರು ಪ್ರಶ್ನಿಸಿದ್ದಾರೆ ಎಂದು ತಿಳಿದು ಬಂದಿದೆ. ಇದಕ್ಕೆ ಉತ್ತರಿಸಿದ ಬರ್ನ್ಸ್, ವೃತ್ತಿಪರರಾಗಿ ಈ ಬಗ್ಗೆ ಗಮನ ಹರಿಸಿ ಪರಿಹಾರ ಕಂಡುಕೊಳ್ಳಲಾಗುವುದು ಇದರಿಂದ ದ್ವಿಪಕ್ಷೀಯ ಮಾತುಕತೆಗೆ ಅಡ್ಡಿ ಬರುವುದಿಲ್ಲ ಎಂದಿದ್ದಾರೆ.
US Deputy Secretary of State William Burns called on the PM pic.twitter.com/SOjAcK0PV9
— PMO India (@PMOIndia) July 11, 2014 ಬಿಜೆಪಿ ಸೇರಿ ಆರು ವಿದೇಶಿ ರಾಜಕೀಯ ಪಕ್ಷಗಳ ಕುರಿತು ಎನ್ಎಸ್ಎ ಕಣ್ಗಾವಲು ಇಟ್ಟಿತ್ತು. ಭಾರತ ಸೇರಿ 193 ರಾಷ್ಟ್ರಗಳ ಸರ್ಕಾರಗಳ ಕಾರ್ಯವೈಖರಿ ಕುರಿತು ಬೇಹುಗಾರಿಕೆ ನಡೆಸಿತ್ತು ಎಂಬ ಸ್ಫೋಟಕ ಮಾಹಿತಿ ಇತ್ತೀಚೆಗೆ ಹೊರಬಿದ್ದಿತ್ತು. [ವಿವರ ಇಲ್ಲಿ ಓದಿ]
-
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ












Click it and Unblock the Notifications