ಲಾಲು ಪ್ರಸಾದ್ ಯಾದವ್ ಅವರ VIP ಸವಲತ್ತಿಗೆ ಕತ್ತರಿ!
ಬಿಹಾರದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್ ಯಾದವ್ ಗೆ ನೀಡಿದ್ದ ಸವಲತ್ತಿಗೆ ಕೇಂದ್ರ ಸರ್ಕಾರ ತಡೆ. ಪಾಟ್ನಾ ವಿಮಾನ ನಿಲ್ದಾಣದಲ್ಲಿ ರನ್ ವೇ ವರೆಗೆ ನೇರವಾಗಿ ತಮ್ಮ ವಾಹನದಲ್ಲಿ ಸಾಗಬಹುದಾಗಿದ್ದ ಲಾಲು ಹಾಗೂ ಅವರ ಪತ್ನಿ ರಾಬ್ಡಿ.
ನವದೆಹಲಿ, ಜುಲೈ 22: ರಾಷ್ಟ್ರೀಯ ಜನತಾ ದಳದ (ಆರ್ ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರಿಗೆ ನೀಡಲಾಗಿದ್ದ ವಿಶೇಷ ವಿಐಪಿ ಸವಲತ್ತೊಂದನ್ನು ಕೇಂದ್ರ ಸರ್ಕಾರ ಮೊಟಕುಗೊಳಿಸಿದೆ.
ಪಾಟ್ನಾದಿಂದ ದೆಹಲಿ ಮತ್ತಿತರ ಕಡೆಗೆ ವಿಮಾನ ಪ್ರಯಾಣ ಬೆಳೆಸುವಾಗ ಪಾಟ್ನಾದಲ್ಲಿರುವ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಯಾವುದೇ ತಪಾಸಣೆಯಿಲ್ಲದೆ ಲಾಲು ಹಾಗೂ ಅವರ ಪತ್ನಿ ರಾಬ್ಡಿ ದೇವಿ ಪ್ರವೇಶಿಸಬಹುದಾಗಿತ್ತು. ಈ ಸೌಲಭ್ಯದಿಂದಾಗಿ, ಈ ಇಬ್ಬರೂ ತಮ್ಮ ವಾಹನಗಳಲ್ಲಿ ನೇರವಾಗಿ ರನ್ ವೇವರೆಗೆ ಸಾಗಿ ಅಲ್ಲಿಂದಲೇ ವಿಮಾನ ಹತ್ತಿಕೊಂಡು ಹೋಗಬಹುದಾಗಿತ್ತು.

ಈ ಇಬ್ಬರೂ ವಿವಿಧ ಕಾಲಘಟ್ಟಗಳಲ್ಲಿ ಬಿಹಾರದ ಮುಖ್ಯಮಂತ್ರಿಯಾಗಿದ್ದಾಗ ಈ ಸವಲತ್ತನ್ನು ಪಡೆದಿದ್ದರು. ಈವರೆಗೂ ಅದು ಹಾಗೆಯೇ ಮುಂದುವರಿದಿತ್ತು. ಇದೀಗ, ಆ ಇಬ್ಬರಿಗೂ ಯಾವುದೇ ಸಾಂವಿಧಾನಿಕ ಹುದ್ದೆ ಇಲ್ಲವಾದ್ದರಿಂದ ಅವರಿಗೆ ನೀಡಲಾಗಿರುವ ಸವಲತ್ತನ್ನು ಹಿಂಪಡೆಯಲಾಗಿದೆ ಎಂದು ಕೇಂದ್ರ ನಾಗರಿಕ ವಿಮಾನ ಯಾನ ಸಚಿವ ಅಶೋಕ್ ಗಜಪತಿ ರಾಜು ಅವರು ಟ್ವಿಟರ್ ನಲ್ಲಿ ಹೇಳಿಕೊಂಡಿದ್ದಾರೆ.
ಲಾಲು ಹಾಗೂ ಅವರ ಕುಟುಂಬದ ಮೇಲೆ ಹಲವಾರು ಭ್ರಷ್ಟಾಚಾರಗಳ ಆರೋಪ ಕೇಳಿಬಂದಿದ್ದು, ಲಾಲು, ಅವರ ಪತ್ನಿ ರಾಬ್ಡಿ ದೇವಿ, ಪುತ್ರಿ ಮಿಸಾ ಭಾರತಿ ಅವರು ತನಿಖೆಗೆ ಒಳಪಟ್ಟಿರುವ ಬೆನ್ನಲ್ಲೇ ಈ ಸೌಲಭ್ಯಗಳನ್ನು ಹಿಂಪಡೆದಿರುವುದು ಲಾಲು ಅವರಿಗೆ ಮುಜುಗರ ತಂದಿದೆ ಎಂದು ಹೇಳಲಾಗಿದೆ.
Big set back for @RJDforIndia chief #Lalu & #Rabri no more access in #PatnaAirport Tarmac, #BCAS issued notification. Details is here 👇 pic.twitter.com/bEkhCEJ47v
— Ashoke Raj (@ashokeraj007) July 22, 2017
-
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ












Click it and Unblock the Notifications