ಡಿಜಿಟಲೀಕರಣ: ಮೋದಿ ಸರ್ಕಾರದ ಬಹುದೊಡ್ಡ ಕೊಡುಗೆ
ನವದೆಹಲಿ, ಅಕ್ಟೋಬರ್ 20: 2014 ರ ಲೋಕಸಭಾ ಚುನಾವಣೆಗೂ ಮುನ್ನ ನೀಡಿದ ಭರವಸೆಗಳನ್ನು ಈಡೇರಿಸಲು ಇದುವರೆಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಹಲವು ಜನೋಪಯೋಗಿ ಯೋಜನೆಗಳನ್ನು ಜಾರಿಗೊಳಿಸಿದೆ.
ಪ್ರಧಾನ ಮಂತ್ರಿ ಜನಧನ ಯೋಜನೆ, ಉಜ್ವಲ ಯೋಜನೆ ಯಾವುದೇ ಇದ್ದಿರಬಹುದು, ಅವನ್ನು ಯಶಸ್ವಿಯಾಗಿ ಜನರಿಗೆ ತಲುಪಿಸಲು ಸೋಶಿಯಲ್ ಮೀಡಿಯಾವನ್ನು ಸರ್ಕಾರ ಸಮಸರ್ಥವಾಗಿ ಬಳಸಿಕೊಂಡಿದೆ.

ರೈಲ್ವೇ ನಿಲ್ದಾಣಗಳಲ್ಲಿ ವೈಫೈಯ ಸೌಲಭ್ಯ, ಹಲವು ಮೊಬೈಲ್ app ಗಳ ಮೂಲಕ ಸರ್ಕಾರದ ಯೋಜನೆ ಜನರಿಗೆ ತಲುಪುವಂತೆ ಮಾಡಿ, ಹೊಸ ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುತ್ತಿದೆ.

ಭಾರತೀಯ ರೈಲ್ವೇಯು 700 ಕ್ಕೂ ಹೆಚ್ಚು ನಿಲ್ದಾಣಗಳಲ್ಲಿ ವೈಫೈ ಸೇವೆಯನ್ನು ನೀಡುತ್ತಿದೆ. ಇದರ ಉಪಯೋಗವನ್ನು ತಿಂಗಳಿಗೆ ಸುಮಾರು 8 ಮಿಲಿಯನ್ ಜನರು ತೆಗೆದುಕೊಳ್ಳುತ್ತಿದ್ದಾರೆ. ಗೂಗಲ್ ಜೊತೆಗಿನ ಸಹಭಾಗಿತ್ವದೊಂದಿಗೆ ಈ ಯೋಜನೆಯನ್ನು ಜಾರಿಗೊಳಿಸಲಾಗಿದೆ.

ದೇಶದಲ್ಲಿ ಕಪ್ಪು ಹಣದ ಹರಿವನ್ನು ತಪ್ಪಿಸುವ ಸಲುವಾಗಿ ಹಣ ಪಾವತಿ ವಿಧಾನದಲ್ಲೇ ಹಲವು ಬದಲಾವಣೆಗಳನ್ನು ತರಲಾಗಿದೆ. ಡಿಜಿಟಲ್ ವ್ಯವಹಾರಕ್ಕೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಸರ್ಕಾರದ ಈ ಎಲ್ಲಾ ಯೋಜನೆಗಳಿಂದ ಆಧುನಿಕ ತಂತ್ರಜ್ಞಾನವನ್ನು ಜನಸಾಮಾನ್ಯರೂ ಬಳಸಿಕೊಳ್ಳುವಂತಾಗಿರುವುದು ಶ್ಲಾಘನೀಯ.

ಜನರು ಅಗತ್ಯ ದಾಖಲೆಗಳ ಪ್ರತಿಯನ್ನು ಕಾಗದದ ಅಥವಾ ಸ್ಮಾರ್ಟ್ ಕಾರ್ಡ್ ಮೂಲಕ ಸಂಗ್ರಹಿಸುವುದಕ್ಕಿಂತ ಹೊಸ ಕಾಲಕ್ಕೆ ತಕ್ಕಂತೆ ಡಿಜಿಟಲ್ ರೂಪದಲ್ಲಿ ಕಾಯ್ದಿರಿಸಲು ಡಿಜಿ ಲಾಕ್ app ಅನ್ನು ಪರಿಚಯಿಸಿದೆ.

ಉಮಾಂಗ್(Unified Mobile Application for New-age Governance) ಎಂಬ ಮೊಬೈಲ್ app ಸರ್ಕಾರದ ಹಲವು ಯೋಜನೆಗಳ ಉಪಯೋಗವನ್ನು ಮೊಬೈಲ್ app ಮೂಲಕ ನೀಡುತ್ತಿದೆ. ಗ್ಯಾಸ್ ಬುಕಿಂಗ್, ಬೆಳೆ ವಿಮೆ, ಇಪಿಎಫ್, ಪಿಂಚಣಿ ಸೇರಿದಂತೆ ಹಲವು ಯೋಜನೆಗಳ ಉಪಯೋಗವನ್ನು ಇಲ್ಲಿ ಪಡೆಯಬಹುದು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications