9 ವರ್ಷಗಳಲ್ಲಿ ಮೋದಿ ಎಲ್ಲ ಕ್ಷೇತ್ರಗಳನ್ನು ನಾಶ ಮಾಡಿದ್ದಾರೆ: ಅರವಿಂದ್‌ ಕೇಜ್ರಿವಾಲ್‌

ನವದೆಹಲಿ, ಜುಲೈ 18: ಕಳೆದ 9 ವರ್ಷಗಳಲ್ಲಿ ಪ್ರಧಾನಿ ಮೋದಿ ಅವರು ಸಾಕಷ್ಟು ಕೆಲಸಗಳನ್ನು ಮಾಡಬಹುದಿತ್ತು. ಆದರೆ ಅವರು ಎಲ್ಲಾ ಕ್ಷೇತ್ರಗಳನ್ನು ನಾಶಪಡಿಸಿದರು. ನಾವು ಇಲ್ಲಿ ನೆರೆದಿರುವುದು ನಮಗಾಗಿ ಅಲ್ಲ, ದ್ವೇಷದಿಂದ ದೇಶವನ್ನು ಉಳಿಸಲು ಎಂದು ಎಎಪಿ ಮುಖ್ಯಸ್ಥ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯ ಬಳಿಕ ಮಾತನಾಡಿದ ಅವರು, ಮೋದಿ ಜನರ ನಡುವೆ ದ್ವೇಷವನ್ನು ಹುಟ್ಟುಹಾಕಿದ್ದಾರೆ, ಆರ್ಥಿಕತೆಯು ಹದಗೆಟ್ಟಿದೆ, ಹಣದುಬ್ಬರವು ಉತ್ತುಂಗದಲ್ಲಿದೆ, ಎಲ್ಲಾ ಕ್ಷೇತ್ರಗಳಲ್ಲಿ ನಿರುದ್ಯೋಗವಿದೆ. ಭಾರತದ ಜನತೆ ಅವರನ್ನು ತೊಲಗಿಸುವ ಸಮಯ ಬಂದಿದೆ, ಹಾಗಾಗಿ ಸಮಾನ ಮನಸ್ಕ ಪಕ್ಷಗಳೆಲ್ಲ ಒಟ್ಟಿಗೆ ಸೇರಬೇಕಾಗಿದೆ ಎಂದು ಅವರು ಹೇಳಿದರು.

Delhi CM Arvind Kejriwal

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಮಾತನಾಡಿ, ಈ ಹೋರಾಟವು 2 ರಾಜಕೀಯ ರಚನೆಗಳ ನಡುವಿನ ಹೋರಾಟವಲ್ಲ. ಬದಲಾಗಿ ಭಾರತದ ಕಲ್ಪನೆಯನ್ನು ರಕ್ಷಿಸುವ ಹೋರಾಟವಾಗಿದೆ. ನೀವು ಇತಿಹಾಸವನ್ನು ನೋಡಿದರೆ ಭಾರತದ ಕಲ್ಪನೆಯನ್ನು ಯಾರೂ ನಾಶಗೊಳಿಸಲು ಸಾಧ್ಯವಾಗಿಲ್ಲ ಎಂಬುದು ನಿಮಗೆ ಗೊತ್ತಾಗುತ್ತದೆ. ಇದು ಭಾರತದ ಕಲ್ಪನೆ ಮತ್ತು ನರೇಂದ್ರ ಮೋದಿ ನಡುವಿನ ಹೋರಾಟವಾಗಿದೆ ಎಂದು ಅವರು ತಿಳಿಸಿದರು.

ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ನಡೆದ 26 ವಿರೋಧ ಪಕ್ಷಗಳ ಮೈತ್ರಿಕೂಟದ ಹೊಸ ಹೆಸರು ಇಂಡಿಯಾ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್ ಅಥವಾ ಐಎನ್‌ಡಿಐಎ ಎಂದಾಗಿದೆ. ಸೀಟು ಹಂಚಿಕೆ ಮತ್ತು ಪ್ರಚಾರ ನಿರ್ವಹಣೆಯ ವಿವರಗಳನ್ನು ಚರ್ಚಿಸಲು ನಾವು ಮತ್ತೆ ಮುಂಬೈನಲ್ಲಿ ಸಭೆ ಸೇರಲಿದ್ದೇವೆ. ಜಂಟಿ ಹೇಳಿಕೆಯನ್ನು ಶೀಘ್ರದಲ್ಲೇ ಪ್ರಸಾರ ಮಾಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಂಗಳವಾರ ಘೋಷಿಸಿದ್ದಾರೆ.

ದೇಶದ ಈ ಗಂಭೀರ ಪರಿಸ್ಥಿತಿಯನ್ನು ಉಳಿಸಲು ನಾವು ಒಟ್ಟಾಗಿ ಬಂದಿದ್ದೇವೆ. 2024 ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ಬಿಜೆಪಿಯನ್ನು ಎದುರಿಸಲು ಒಗ್ಗಟ್ಟಿನ ಮುಂಭಾಗವನ್ನು ಹಾಕಲು ತಂತ್ರವನ್ನು ರೂಪಿಸಲು ವಿರೋಧ ಪಕ್ಷಗಳು ಸಭೆ ಸೇರಿದ್ದವು. ಖರ್ಗೆಯವರ ಘೋಷಣೆಗೂ ಮುನ್ನ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಕಾಂಗ್ರೆಸ್ ಲೋಕಸಭಾ ಸಂಸದ ಮಾಣಿಕ್ಕಂ ಠಾಗೋರ್ ಅವರು ಟ್ವಿಟ್ಟರ್‌ನಲ್ಲಿ ಭಾರತ ಗೆಲ್ಲಲಿದೆ ಎಂದರೆ, ಚಕ್ ದೇ! ಭಾರತ ಎಂದು ತೃಣಮೂಲ ಕಾಂಗ್ರೆಸ್ ಸಂಸದ ಡೆರೆಕ್ ಒ'ಬ್ರಿಯಾನ್ ಟ್ವೀಟ್ ಮಾಡಿದ್ದಾರೆ. ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಮೈತ್ರಿಯನ್ನು ಯುನೈಟೆಡ್ ಪ್ರೊಗ್ರೆಸ್ಸಿವ್ ಅಲೈಯನ್ಸ್ (ಯುಪಿಎ) ಎಂದು ಕರೆಯಲಾಗುತ್ತದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮಂಗಳವಾರ ಇಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ರಾಜ್ಯ ಮಟ್ಟದಲ್ಲಿ ನಮ್ಮಲ್ಲಿ ಕೆಲವರ ನಡುವೆ ಭಿನ್ನಾಭಿಪ್ರಾಯಗಳಿವೆ. ಆದರೆ ಅವು ಸೈದ್ಧಾಂತಿಕವಲ್ಲ ಮತ್ತು ಜನರ ಪರವಾಗಿ ಅವರನ್ನು ಹಿಂದೆ ಹಾಕಲು ಸಾಧ್ಯವಿಲ್ಲ. ಬಿಜೆಪಿ ನೇತೃತ್ವದ ಸರ್ಕಾರದ ನೀತಿಗಳಿಂದಾಗಿ ಅವರು ನೊಂದಿದ್ದಾರೆ ಎಂದು ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+