ಮೈಕಲ್ ಮಾಮಾ ಜೊತೆ ಗಾಂಧಿ ಕುಟುಂಬಕ್ಕೆ ಏನು ಸಂಬಂಧ : ಮೋದಿ ವ್ಯಂಗ್ಯ
ಸೊಲ್ಲಾಪುರ, ಜನವರಿ 09 : "ರಫೇಲ್ ಬಗ್ಗೆ ಸದ್ದು ಮಾಡುತ್ತಿರುವ ಕಾಂಗ್ರೆಸ್ ನಾಯಕರೇ ಹೇಳಿ, ರಫೇಲ್ ಸ್ಪರ್ಧಿ ಕಂಪನಿ ಪರ ಲಾಬಿ ಮಾಡಿದ ಮೈಕಲ್ ಮಾಮಾ ಜೊತೆ ಅವರ ಸಂಬಂಧವಾದರೂ ಎಂಥದು? ಅವರಿಗೆ ನಾವು ಉತ್ತರ ನೀಡಬಾರದೆ? ಚೌಕಿದಾರ ಅವರನ್ನು ಈ ಕುರಿತು ಪ್ರಶ್ನೆ ಕೇಳಬಾರದೆ?"
ಹೀಗೆಂದು ಪ್ರಧಾನಿ ನರೇಂದ್ರ ಮೋದಿ ಅವರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ಮೇಲೆ ವಾಗ್ದಾಳಿ ಮಾಡಿದ್ದಾರೆ. ಅಗಸ್ಟಾ ವೆಸ್ಟ್ ಲ್ಯಾಂಡ್ ಹೆಲಿಕಾಪ್ಟರ್ ಹಗರಣದಲ್ಲಿ ಬಂಧಿತನಾಗಿರುವ ಇಂಗ್ಲೆಂಡ್ ಸಂಜಾತ ಕ್ರಿಶ್ಚಿಯನ್ ಮೈಕಲ್, ರಫೇಲ್ ಕಂಪನಿಯ ಸ್ಪರ್ಧಿ ಯೂರೋಫೈಟರ್ ಕಂಪನಿಗಾಗಿ ಲಾಬಿ ನಡೆಸಿದ್ದ ಎಂದು ವರದಿ ಬಂದಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಮೋದಿಯವರು ಬುಧವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಕಮಿಷನ್ ಹೊಡೆಯುವವನ ಸ್ನೇಹಿತರೆಲ್ಲ ಈ ಚೌಕಿದಾರನನ್ನು ಬೆದರಿಸಬಹುದೆಂದು ತಿಳಿದುಕೊಂಡಿದ್ದಾರೆ. ಅವರಿಗೆ ನಿರಾಶೆ ಆಗುವುದು ಖಂಡಿತ. ಏಕೆಂದರೆ, ಈ ಚೌಕಿದಾರ ಯಾವತ್ತೂ ಮೈಮರೆತು ನಿದ್ದೆ ಮಾಡುವುದಿಲ್ಲ ಅಥವಾ ಆತನನ್ನು ಹೆದರಿಸಲು ಸಾಧ್ಯವಿಲ್ಲ. ಅವರು ನನ್ನ ಮೇಲೆ ಬೈಗುಳಗಳ ಮಳೆಗರೆದರು, ಸುಳ್ಳು ಹೇಳಿದರೆ, ಆದರೆ ಸ್ವಚ್ಛ ಮಾಡುವ ನನ್ನ ಅಭಿಯಾನ ಖಂಡಿತ ಮುಂದುವರಿಯುತ್ತದೆ ಎಂದು ಮೋದಿ ಮಾರ್ಮಿಕವಾಗಿ ನುಡಿದರು.

ರಫೇಲ್ ಸ್ಪರ್ಧಿ ಕಂಪನಿಗಾಗಿ ಲಾಬಿ
ಫ್ರಾನ್ಸ್ ನ ಡಸ್ಸಾಲ್ಟ್ ಕಂಪನಿಯ ಜೊತೆ ಭಾರತ 36 ರಫೇಲ್ ಯುದ್ಧ ವಿಮಾನಗಳನ್ನು ಕೊಳ್ಳುವ ಒಪ್ಪಂದ ಮಾಡಿಕೊಳ್ಳುವ ಮೊದಲೇ, ಇನ್ನೊಬ್ಬ ಅಗಸ್ಟಾ ವೆಸ್ಟ್ ಲ್ಯಾಂಡ್ ಮಧ್ಯವರ್ತಿ ಗಿಡೋ ಹಷ್ಕೆ ಮತ್ತು ಕ್ರಿಶ್ಚಿಯನ್ ಮೈಕಲ್ ಜತೆಗೂಡಿ ರಫೇಲ್ ಯುದ್ಧ ವಿಮಾನದ ಸ್ಪರ್ಧಿ ಯೂರೋಫೈಟರ್ ಪರವಾಗಿ ಯೋಜನೆ ರೂಪಿಸಿದ್ದರು. ಇದು ಗಿಡೋ ಹಷ್ಕೆಯಿಂದ ವಶಪಡಿಸಿಕೊಳ್ಳಲಾಗಿರುವ ಪ್ರಮುಖ ದಾಖಲೆಯೊಂದರಲ್ಲಿ ಬಯಲಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿದೆ.

ಮೈಕಲ್ ಮಾಮಾ ಗಾಂಧಿ ಕುಟುಂಬಕ್ಕೂ ನಂಟು
ರಫೇಲ್ ಡೀಲ್ ನಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆರೋಪಿಸುತ್ತಿರುವುದಕ್ಕೂ ಕ್ರಿಶ್ಚಿಯನ್ ಮೈಕಲ್ ಮಾಮಾನ ಜೊತೆ ಗಾಂಧಿ ಕುಟುಂಬಕ್ಕೆ ಇರುವ ನಂಟಿಗೂ ಸಂಬಂಧವಿದೆ ಎಂದು ಬಿಜೆಪಿ ಈಗಾಗಲೆ ಆರೋಪಿಸಿದೆ. ಅಗಸ್ಟಾ ವೆಸ್ಟ್ ಲ್ಯಾಂಡ್ ಹಗರಣದಲ್ಲಿ ಕೇಳಿಬರುತ್ತಿರುವ ಭ್ರಷ್ಟಾಚಾರದ ಆರೋಪವನ್ನು ಮುಚ್ಚಿಡಲೆಂದೇ ರಫೇಲ್ ಡೀಲ್ ನಲ್ಲಿ ಬಿಜೆಪಿ ಭ್ರಷ್ಟಾಚಾರ ನಡೆಸಿದೆ ಎಂದು ಸುಳ್ಳು ಹೇಳುತ್ತಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಡೆದ ಅಗಸ್ಟಾ ವೆಸ್ಟ್ ಲ್ಯಾಂಡ್ ವಿವಿಐಪಿ ಹೆಲಿಕಾಪ್ಟರ್ ಖರೀದಿ ಹಗರಣದಲ್ಲಿ, ಭಾರತೀಯ ರಾಜಕಾರಣಿಗಳಿಗೆ ಮತ್ತು ಅಧಿಕಾರಿಗಳಿಗೆ ಲಂಚ ನೀಡಲೆಂದು ಮೈಕಲ್ ಅಗಸ್ಟಾ ಕಂಪನಿಯಿಂದ ಹಣ ಪಡೆದಿದ್ದ ಎಂದು ಆರೋಪಿಸಲಾಗಿದೆ.

ಚೌಕಿದಾರನನ್ನು ಬೆಂಬಲಿಸುತ್ತೀರಲ್ಲವೆ?
ಈ ಕ್ರಿಶ್ಚಿಯನ್ ಮೈಕಲ್ ನ ಸೌದೆಬಾಜಿ (ಡೀಲಿಂಗ್) ನಿಂದಾಗಿಯೇ, ಹಿಂದಿನ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ನಡೆಸಿದ್ದ 126 ರಫೇಲ್ ಯುದ್ಧ ವಿಮಾನಗಳ ಖರೀದಿ ಒಪ್ಪಂದ ಕೂಡ ಮುರಿದುಬಿದ್ದಿತ್ತು ಎಂದು ನರೇಂದ್ರ ಮೋದಿ ತಮ್ಮ ಭಾಷಣದಲ್ಲಿ ಕಾಂಗ್ರೆಸ್ಸನ್ನು ಕಟುಕಿದರು. ಇಂಥವರ ವಿರುದ್ಧ ಸೆಣಸುತ್ತಿರುವ ಚೌಕಿದಾರನ್ನು ನೀವು ಬೆಂಬಲಿಸುತ್ತೀರಲ್ಲ ಎಂದು ನರೇಂದ್ರ ಮೋದಿಯವರು ಬೃಹತ್ ಸಮಾವೇಶದಲ್ಲಿ ನೆರೆದಿದ್ದ ಜನರನ್ನು ಕೇಳಿದರು. ಜನರು ಒಕ್ಕೊರಲಿನಿಂದ ಹೌದು ಎಂದು ಕೂಗಿದರು.

ಮೋದಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ
ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ 58 ಸಾವಿರ ಕೋಟಿಯಷ್ಟು ಭಾರೀ ಭ್ರಷ್ಟಾಚಾರ ನಡೆದಿದ್ದು, ಅದರಲ್ಲಿ ದಿವಾಳಿ ಅಂಚಿನಲ್ಲಿದ್ದ ರಿಲಯನ್ಸ್ ಡಿಫೆನ್ಸ್ ಕಂಪನಿಯ ಮಾಲಿಕ ಅನಿಲ್ ಅಂಬಾನಿಯನ್ನು ಮೇಲೆತ್ತಲು 30 ಸಾವಿರ ಕೋಟಿಯಷ್ಟು ಹಣವನ್ನು ನೀಡಲಾಗಿದೆ. ಈ ಹಗರಣದಲ್ಲಿ, ಅನಿಲ್ ಅಂಬಾನಿಗೆ ಆಫ್ ಸೆಟ್ ಕಾಂಟ್ರಾಕ್ಟ್ ದೊರಕಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ನೇರವಾಗಿ ಭಾಗಿಯಾಗಿದ್ದಾರೆ. ಚೌಕಿದಾರ್ ಚೋರ್ ಹೈ ಎಂದು ಪ್ರತಿ ಭಾಷಣದಲ್ಲಿ ರಾಹುಲ್ ಗಾಂಧಿ ಅವರು ಹೇಳುತ್ತಲೇ ಇದ್ದಾರೆ. ಈ ರಫೇಲ್ ಹಗರಣದಿಂದ ಪ್ರಧಾನಿ ಮೋದಿ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ ಎಂದು ರಾಹುಲ್ ಗಾಂಧಿ ಕಿಡಿ ಕಾರುತ್ತಲೇ ಬಂದಿದ್ದಾರೆ.

ದಮನಿತರ ಹಕ್ಕುಗಳಿಗೆ ಚ್ಯುತಿ ಇಲ್ಲ
ಇದೇ ಭಾಷಣದಲ್ಲಿ ಬಡತನದಲ್ಲಿರುವ ಮೇಲ್ಜಾತಿಯವರಿಗೆ ಉದ್ಯೋಗ ಮತ್ತು ಶಿಕ್ಷಣದಲ್ಲಿ ಶೇ.10ರಷ್ಟು ರಿಯಾಯಿತಿ ದೊರಕಿಸುವ ಮಸೂದೆಯನ್ನು ಲೋಕಸಭೆಯಲ್ಲಿ ಯಶಸ್ವಿಯಾಗಿ ಮಂಡಿಸಿರುವುದು ಭಾರತೀಯ ಜನತಾ ಪಕ್ಷದ ಬಗ್ಗೆ ಸಲ್ಲದ ಸುಳ್ಳು ಹೇಳುತ್ತಿರುವ ಪಕ್ಷಕ್ಕೆ ತಕ್ಕ ಉತ್ತರ ನೀಡಿದೆ. ಈ ಮಸೂದೆಯಿಂದಾಗಿ ದಲಿತರು ಮತ್ತು ದಮನಿತರ ಹಕ್ಕುಗಳಿಗೆ ಯಾವುದೇ ಧಕ್ಕೆಯಾಗುವುದಿಲ್ಲ. ದಮನಿತ ವರ್ಗವನ್ನು ಮೇಲೆತ್ತುವಲ್ಲಿ ಸಹಾಯ ಮಾಡಲಿರುವ ಈ ಮಸೂದೆಯ ಮಂಡನೆ ಐತಿಹಾಸಿಕವಾದದ್ದು ಎಂದು ಅವರು ಬಣ್ಣಿಸಿದರು.

ಈಶಾನ್ಯ ರಾಜ್ಯದ ಜನತೆಗೆ ಮೋದಿ ಅಭಯ
ಇದೇ ರೀತಿ ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫಘಾನಿಸ್ತಾನ ಬಂದು ಇಲ್ಲಿ ನೆಲೆಸಿರುವ ಮುಸ್ಲಿಮೇತರ ನಾಗರಿಕರಿಗೆ ಭಾರತೀಯ ನಾಗರಿಕತ್ವ ದೊರಕಿಸಿಕೊಡುವ ಸಿಟಿಜನ್ ಶಿಪ್ ಮಸೂದೆಯಿಂದಾಗಿ ಅಸ್ಸಾಂ ಮತ್ತು ಈಶಾನ್ಯ ರಾಜ್ಯಗಳಲ್ಲಿ ನೆಲೆಸಿರುವ ಜನರ ಹಕ್ಕುಗಳಿಗೆ ಕೂಡ ಯಾವುದೇ ಧಕ್ಕೆ ಆಗುವುದಿಲ್ಲ ಎಂದು ಮೋದಿಯವರು ವಾಗ್ದಾನ ಮತ್ತು ಅಭಯ ನೀಡಿದರು. ಆದರೆ, ಈಶಾನ್ಯ ರಾಜ್ಯಗಳಲ್ಲಿ ಈ ಮಸೂದೆಯ ವಿರುದ್ಧ ಪ್ರತಿಭಟನೆಗಳು ಆರಂಭವಾಗಿವೆ.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications