ಬಿಗ್ ಬಿ ಅಮಿತಾಬ್ ಮುಂದಿನ ರಾಷ್ಟ್ರಪತಿ?
ನವದೆಹಲಿ, ಮಾರ್ಚ್ 30: ಬಾಲಿವುಡ್ಡಿನ ಮೆಗಾ ಸ್ಟಾರ್ ಅಮಿತಾಬ್ ಬಚ್ಚನ್ ಅವರು ಸಿನಿಮಾರಂಗದಿಂದ ನಿವೃತ್ತಿ ಘೋಷಿಸಲು ಮುಂದಾಗಿದ್ದಾರಾ? ಗೊತ್ತಿಲ್ಲ. ಬಿಗ್ ಬಿ ಹೆಸರು ಈಗ ಮುಂದಿನ ರಾಷ್ಟ್ರಪತಿಯಾಗುವ ಅಭ್ಯರ್ಥಿಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂಬ ಸುದ್ದಿ ಲೀಕ್ ಆಗಿದೆ.
ಅಮಿತಾಬ್ ಅವರ ಗೆಳೆಯ ರಾಜಕಾರಣಿ ಅಮರ್ ಸಿಂಗ್ ಅವರು ಇಂಥದ್ದೊಂದು ಹುಬ್ಬೇರಿಸುವ ವಿಷಯವನ್ನು ಹೊರಹಾಕಿದ್ದಾರೆ. ಏಪ್ರಿಲ್ 1 ಮೂರ್ಖರ ದಿನಕ್ಕೂ ಮುನ್ನ ಅಮರ್ ಸಿಂಗ್ ಏನಾದರೂ ಕಾಮಿಡಿ ಮಾಡುತ್ತಿದ್ದಾರಾ? ಎಂದು ಫ್ಯಾನ್ಸಿಗೂ ಅನುಮಾನ ಕಾಡುತ್ತಿದೆ. [ಮಾತು ಉಳಿಸಿಕೊಂಡ ಬಿಗ್ ಬಿ, ಆಫರ್ ರಿಜೆಕ್ಟ್ ಮಾಡಿದ ಗೇಲ್!]

ಆದರೆ, ಅಮರ್ ಸಿಂಗ್ ಅವರಿಗೆ ಈ ಸುದ್ದಿ ಗೊತ್ತಾಗಿದೆಯಂತೆ ಅದನ್ನು ಎಲ್ಲರಿಗೂ ಹಂಚಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೇ ಇತ್ತೀಚೆಗೆ ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ ಎಂದು ಜೀ ನ್ಯೂಸ್ ವರದಿ ಮಾಡಿದೆ.[ವಿವಾದದಲ್ಲಿ ಬಾಲಿವುಡ್ ಸ್ಟಾರ್ ಬಿಗ್ ಬಿ!]
ಮೋದಿಗೆ ಬಿಗ್ ಬಿ ಪರಿಚಯಿಸಿದ್ದು ನಾನೇ: ಗುಜರಾತ್ ರಾಜ್ಯದ ರಾಯಭಾರಿಯಾಗಿ ಅಮಿತಾಬ್ ಬಚ್ಚನ್ ಅವರನ್ನು ನೇಮಿಸಲು ಹಾಗೂ ಮೋದಿ ಅವರಿಗೆ ಪರಿಚಯಿಸಿದ್ದು ನಾನೇ ಎಂದು ಜೀನ್ಯೂಸ್ ಇಂಡಿಯಾ 24X7 ಹೊಸ ಚಾನೆಲ್ ಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಹೇಳಿದ್ದಾರೆ.
ಪ್ರಣಬ್ ಮುಖರ್ಜಿ ಅವರು ಜುಲೈ 25, 2012ರಲ್ಲಿ ದೇಶದ 13ನೇ ರಾಷ್ಟ್ರಪತಿಯಾಗಿ ಅಧಿಕಾರ ಸ್ವೀಕರಿಸಿದ್ದನ್ನು ಇಲ್ಲಿ ಸ್ಮರಿಸಬಹುದು.
ಅಮರ್ ಸಿಂಗ್ ಅವರ ಹೇಳಿಕೆಗೂ ಮುನ್ನ ಬಿಜೆಪಿ ಸಂಸದ ಶತ್ರುಘ್ನ ಸಿನ್ಹಾ ಅವರು ಅಮಿತಾಬ್ ಹೆಸರನ್ನು ಮುಂದಿನ ರಾಷ್ಟ್ರಪತಿ ಅಭ್ಯರ್ಥಿಯಾಗಿ ಸೂಚಿಸಿದ್ದರು.
-
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD











Click it and Unblock the Notifications