ಚಿತ್ರಗಳಲ್ಲಿ ಸಂಸತ್ ದಾಳಿ ಹುತಾತ್ಮರಿಗೆ ನಮನ
ನವದೆಹಲಿ, ಡಿ.13 : 2001 ರಲ್ಲಿ ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದವರಿಗೆ ಶನಿವಾರ ಪಕ್ಷಭೇದ ಮರೆತು ವಿವಿಧ ಪಕ್ಷಗಳ ನಾಯಕರು ಗೌರವ ಸಲ್ಲಿಸಿದರು. ಪ್ರಜಾಪ್ರಭುತ್ವದ ದೇಗುಲದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರರಿಗೆ ನನ್ನದೊಂದು ಸೆಲ್ಯೂಟ್ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮಾಡಿದ್ದಾರೆ.
ದೆಹಲಿಯ ಸಂಸತ್ ಭವನದಲ್ಲಿ ಶನಿವಾರ ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸ್ಪೀಕರ್ ಸುಮಿತ್ರಾ ಮಹಾಜನ್, ಮಾಜಿ ಪ್ರಧಾನಿ ಮನಮೋಹನ್ಸಿಂಗ್, ಬಿಜೆಪಿ ಹಿರಿಯ ನಾಯಕ ಎಲ್.ಕೆ .ಅಡ್ವಾಣಿ ಸೇರಿದಂತೆ ಹಲವು ನಾಯಕರು ಹುತಾತ್ಮರಿಗೆ ಪುಷ್ಟ ನಮನ ಸಲ್ಲಿಸಿದರು. [ಡಿ.13ರ ಸಂಸತ್ ದಾಳಿಯನ್ನು ಮರೆಯಲು ಸಾಧ್ಯವೇ?]
2001ರ ಡಿಸೆಂಬರ್ 13 ರಂದು ಐವರು ಉಗ್ರರು ಸಂಸತ್ ಆವರಣ ಪ್ರವೇಶಿಸಿ ಗುಂಡಿನ ದಾಳಿ ನಡೆಸಿದ್ದರು. ಐವರು ದೆಹಲಿ ಪೊಲೀಸರು, ಮೂವರು ಪಾರ್ಲಿಮೆಂಟ್ ಸಿಬ್ಬಂದಿ ಸೇರಿದಂತೆ ಒಟ್ಟು ಒಂಭತ್ತು ಮಂದಿ ಉಗ್ರರ ಗುಂಡಿಗೆ ಬಲಿಯಾಗಿದ್ದರು. ಚಿತ್ರಗಳಲ್ಲಿ ಹುತಾತ್ಮರಿಗೆ ನಮನ [ಪಿಟಿಐ ಚಿತ್ರಗಳು]

ಹುತಾತ್ಮರಿಗೆ ಪ್ರಧಾನಿ ಮೋದಿ ನಮನ
2001 ರಲ್ಲಿ ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದವರಿಗೆ ಪ್ರಧಾನಿ ನರೇಂದ್ರ ಮೋದಿ ನಮನ ಸಲ್ಲಿಸಿದರು.

ಯೋಧರಿಗೆ ನಮನ ಸಲ್ಲಿಸಿದ ಸ್ಪೀಕರ್
ಸಂಸತ್ ದಾಳಿಗೆ ಇಂದು 13 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ವೀರ ಯೋಧರಿಗೆ ಸರ್ಕಾರಿ ಗೌರವ ಸಲ್ಲಿಸಲಾಯಿತು. ಲೋಕಸಭೆ ಸ್ಪೀಕರ್ ಸುಮಿತ್ರಾ ಮಹಾಜನ್ ಯೋಧರಿಗೆ ನಮನ ಸಲ್ಲಿಸಿದರು.

ಮಾಜಿ ಪ್ರಧಾನಿ ಸಿಂಗ್ರಿಂದ ನಮನ
2001 ರಲ್ಲಿ ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದವರಿಗೆ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಮನ ಸಲ್ಲಿಸಿದರು.

ಸೋನಿಯಾ ಗಾಂಧಿ ಅವರಿಂದ ನಮನ
ಪ್ರಜಾಪ್ರಭುತ್ವದ ದೇಗುಲದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರರಿಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ನಮನ ಸಲ್ಲಿಸಿದರು.

ಯೋಧರಿಗೆ ಪೊಲೀಸ್ ಸಿಬ್ಬಂದಿ
2001ರ ಡಿಸೆಂಬರ್ 13 ರಂದು ಐವರು ಉಗ್ರರು ಸಂಸತ್ ಆವರಣ ಪ್ರವೇಶಿಸಿ ಗುಂಡಿನ ದಾಳಿ ನಡೆಸಿದ್ದರು. ಐವರು ದೆಹಲಿ ಪೊಲೀಸರು, ಮೂವರು ಪಾರ್ಲಿಮೆಂಟ್ ಸಿಬ್ಬಂದಿ ಸೇರಿದಂತೆ ಒಟ್ಟು ಒಂಭತ್ತು ಮಂದಿ ಉಗ್ರರ ಗುಂಡಿಗೆ ಬಲಿಯಾಗಿದ್ದರು. ಹುತಾತ್ಮರಾಧ ಯೋಧರಿಗೆ ಇಂದು ಪೊಲೀಸರು ನಮನ ಸಲ್ಲಿಸಿದರು.

ಯೋಧನಿಗೆ ಕುಟುಂಬದವರ ನಮನ
2001ರ ಸಂಸತ್ ದಾಳಿಯಲ್ಲಿ ಮೃತಪಟ್ಟ ಯೋಧ ಜೆ.ಪಿ.ಯಾದವ್ ಅವರಿಗೆ ಅವರ ಕುಟುಂಬದವರು ಶನಿವಾರ ನಮನ ಸಲ್ಲಿಸಿದರು.

ಯೋಧರಿಗೆ ನಮನ ಸಲ್ಲಿಸಲು ಬಂದ ಗಣ್ಯರು
ಪ್ರಜಾಪ್ರಭುತ್ವದ ದೇಗುಲದ ರಕ್ಷಣೆಗಾಗಿ ಪ್ರಾಣ ತ್ಯಾಗ ಮಾಡಿದ ವೀರರಿಗೆ ನಮನ ಸಲ್ಲಿಸಲು ಆಗಮಿಸಿದ ಉಪರಾಷ್ಟ್ರಪತಿ, ಪ್ರಧಾನಿ, ಸ್ಪೀಕರ್ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್.

ಅಡ್ವಾಣಿ ಅವರಿಂದ ನಮನ ಸಲ್ಲಿಕೆ
2001 ರಲ್ಲಿ ಸಂಸತ್ ಭವನದ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದವರಿಗೆ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ನಮನ ಸಲ್ಲಿಸಿದರು.
-
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ












Click it and Unblock the Notifications