20 ವರ್ಷಗಳ ಹಿಂದೆ ಅಂದು ಮತ್ತು ಇಂದು...
ಬೆಂಗಳೂರು, ಜುಲೈ 20 : ಭಾರತದ 14ನೇ ರಾಷ್ಟ್ರಪತಿಯಾಗಿ 71 ವರ್ಷದ ರಾಮ್ ನಾಥ್ ಕೋವಿಂದ್ ಅವರು ಆಯ್ಕೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಅಪರೂಪದ ಚಿತ್ರಗಳೆರಡನ್ನು ಟ್ವಿಟ್ಟರಿನಲ್ಲಿ ಹಾಕಿದ್ದಾರೆ.
20 ವರ್ಷಗಳ ಹಿಂದೆ ರಾಮ್ ನಾಥ್ ಕೋವಿಂದ್ ಅವರ ಮಗ ಪ್ರಶಾಂತ್ ಕುಮಾರ್ ಅವರ ಮದುವೆಯಲ್ಲಿ ಭಾಗಿಯಾಗಿದ್ದಾಗ ಮತ್ತು ಇಂದು ತೆಗೆಸಿಕೊಳ್ಳಲಾಗ ಚಿತ್ರಗಳೆರಡನ್ನು ನರೇಂದ್ರ ಮೋದಿಯವರು ಪ್ರಕಟಿಸಿದ್ದು, "20 ವರ್ಷಗಳ ಹಿಂದೆ ಮತ್ತು ಇಂದು... ನಿಮ್ಮ ಬಗ್ಗೆ ತಿಳಿದಿರುವುದು ನನ್ನ ಸೌಭಾಗ್ಯ" ಎಂದು ಅವರು ಬರೆದುಕೊಂಡಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ, ಕೊನೆಯ ಕ್ಷಣದವರೆಗೆ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಅಭ್ಯರ್ಥಿ ಎಂಬ ಸಂಗತಿಯನ್ನು ಬಿಜೆಪಿ ಬಿಟ್ಟುಕೊಟ್ಟಿರಲಿಲ್ಲ. ಅವರ ಬದಲಾಗಿ, ರಜನಿಕಾಂತ್, ನಂದನ್ ನಿಲೇಕಣಿ, ಅಮಿತಾಭ್ ಬಚ್ಚನ್ ಸೇರಿದಂತೆ ಹಲವಾರು ಹೆಸರುಗಳು ಹರಿದಾಡುತ್ತಿದ್ದವು. ಕೊನೆಗೆ ದಲಿತ ನಾಯಕನನ್ನು ರಾಷ್ಟ್ರಪತಿ ಅಭ್ಯರ್ಥಿಯನ್ನಾಗಿ ಘೋಷಿಸಿ ಅಚ್ಚರಿ ಮೋದಿ ಮೂಡಿಸಿದ್ದರು.
ಉತ್ತರಪ್ರದೇಶದವರಾದ ರಾಮ್ ನಾಥ್ ಕೋವಿಂದ್ ಅವರಿಗೆ ಕಾಂಗ್ರೆಸ್ ಮತ್ತಿತರ ವಿರೋಧ ಪಕ್ಷಗಳ ಬೆಂಬಲವಿದ್ದ ಮೀರಾ ಕುಮಾರ್ ಅವರು ತುರುಸಿನ ಸ್ಪರ್ಧೆಯನ್ನು ನೀಡಿದ್ದರು. ಅಂತಿಮವಾಗಿ, ರಾಮ್ ನಾಥ್ ಕೋವಿಂದ್ ಅವರು ಶೇ.65.6 ಮತಗಳನ್ನು ಪಡೆದರೆ, ಮೀರಾ ಅವರು ಶೇ.34.4 ಮತಗಳನ್ನು ಪಡೆದು ವೀರೋಚಿತ ಸೋಲು ಅನುಭವಿಸಿದರು.

ದಲಿತ ನಾಯಕರಾಗಿರುವ ರಾಮ್ ನಾಥ್ ಕೋವಿಂದ್ ಅವರನ್ನು ಸ್ಪರ್ಧೆಗೆ ಎನ್ಡಿಎ ಇಳಿಸುತ್ತಿದ್ದಂತೆ, ಈ ಚುನಾವಣೆಯನ್ನು ಪ್ರತಿಷ್ಠೆಯ ಕಣವನ್ನಾಗಿ ಮಾಡಿದ್ದ ಕಾಂಗ್ರೆಸ್ ಮತ್ತಿತರ ಪಕ್ಷಗಳು ಮತ್ತೊಬ್ಬ ದಲಿತ ನಾಯಕಿ ಮೀರಾ ಕುಮಾರ್ ಅವರನ್ನು ಕಣಕ್ಕಿಳಿಸಿತ್ತು. ಈಗ ಜಯದ ಮಾಲೆ ಕೋವಿಂದ್ ಅವರ ಕೊರಳಿಗೆ ಬಿದ್ದಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications