'ಡಿವೈಡರ್ ಇನ್ ಚೀಫ್' ಎಂದು ಜರಿದ ಪತ್ರಕರ್ತನ ವಿಶ್ವಾಸಾರ್ಹತೆ ಪ್ರಶ್ನಿಸಿದ ಮೋದಿ
ನವದೆಹಲಿ, ಮೇ 18: ಅಂತಾರಾಷ್ಟ್ರೀಯ ಪ್ರತಿಷ್ಠಿತ ನಿಯತಕಾಲಿಕೆ 'ಟೈಮ್'ನಲ್ಲಿ ತಮ್ಮನ್ನು 'ಡಿವೈಡರ್-ಇನ್-ಚೀಫ್' ಎಂದು ಟೀಕಿಸಿದ್ದ ಪತ್ರಕರ್ತ ಆತಿಶ್ ತಸೀರ್ ಅವರ ವಿಶ್ವಾಸಾರ್ಹತೆಯನ್ನು ಪ್ರಧಾನಿ ನರೇಂದ್ರ ಮೋದಿ ಪ್ರಶ್ನಿಸಿದ್ದಾರೆ.
ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಈ ವಿವಾದಾತ್ಮಕ ಲೇಖನ ಪ್ರಕಟವಾಗಿ ಒಂದು ವಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಪ್ರತಿಕ್ರಿಯೆ ನೀಡಿದ್ದಾರೆ.
'ಟೈಮ್ ಮ್ಯಾಗಜೀನ್ ವಿದೇಶದ್ದು. ಅದರ ಬರಹಗಾರ ತಾನು ಪಾಕಿಸ್ತಾನದ ರಾಜಕೀಯ ಕುಟುಂಬದಿಂದ ಬಂದಿರುವುದಾಗಿ ಸ್ವತಃ ಹೇಳಿಕೊಂಡಿದ್ದಾನೆ. ಆತನ ವಿಶ್ವಾಸಾರ್ಹತೆಗೆ ಇಷ್ಟೇ ಸಾಕು' ಎಂದು ಮೋದಿ ಹೇಳಿದ್ದಾರೆ.

ಕಾದಂಬರಿಕಾರ, ಪತ್ರಕರ್ತ ಆತಿಶ್ ತಸೀರ್ ಬರೆದ ಮುಖಪುಟದ ಲೇಖನದಲ್ಲಿ, 'ಜಗತ್ತಿನ ಅತಿ ದೊಡ್ಡ ಪ್ರಜಾಪ್ರಭುತ್ವ ಹಿಂದೆಂದಿಗಿಂತಲೂ ವಿಭಜನೆಯಾಗಿದೆ. ಮೋದಿ ನೇತೃತ್ವದ ಭಾರತೀಯ ಜನತಾ ಪಕ್ಷವು ಉದ್ದೇಶಪೂರ್ವಕವಾಗಿ ಹಿಂದೂ ಮತ್ತು ಮುಸ್ಲಿಮರನ್ನು ವಿಭಜನೆ ಮಾಡುತ್ತಿದೆ. ಮೋದಿಯ ವಿಜಯವು ಅಪನಂಬಿಕೆಯ ಭಾವಾಭಿವ್ಯಕ್ತಿ. ನೆಹರೂ ಅವರ ಜಾತ್ಯತೀತತೆ, ಸಮಾಜವಾದದ ಮೇಲೆ ದಾಳಿ ನಡೆಸಲಾಗಿದೆ. ಮೋದಿ "ಕಾಂಗ್ರೆಸ್ ಮುಕ್ತ" ಭಾರತದ ಬಗ್ಗೆ ಮಾತನಾಡುತ್ತಾರೆ. ಹಿಂದೂ-ಮುಸ್ಲಿಮರ ಮಧ್ಯೆ ಸೋದರತ್ವ ಬೆಳೆಸುವ ಯಾವ ಇಚ್ಛೆಯನ್ನು ಅವರು ವ್ಯಕ್ತಪಡಿಸಿಲ್ಲ ಎಂದು ಟೀಕಿಸಲಾಗಿತ್ತು.
ಈ ಲೇಖನಕ್ಕೆ ಮೋದಿ ಅವರನ್ನು ಧರ್ಮಗಳ ವಿಭಜನೆಯ ನೇತೃತ್ವ ವಹಿಸುವವರು ಎಂಬ ಅರ್ಥ ಬರುವಂತೆ 'ಡಿವೈಡರ್ ಇನ್ ಚೀಫ್' ಎಂಬ ಶೀರ್ಷಿಕೆ ನೀಡಲಾಗಿತ್ತು.
ಗುಂಪು ಹತ್ಯೆಗಳು, ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥ್ ಅವರನ್ನು ನೇಮಿಸಿದ್ದು, ಮಾಲೆಗಾಂವ್ ಬಾಂಬ್ ಸ್ಫೋಟ ಆರೋಪಿ ಸಾಧ್ವಿ ಪ್ರಗ್ಯಾ ಸಿಂಗ್ ಠಾಕೂರ್ ಅವರಿಗೆ ಟಿಕೆಟ್ ನೀಡಿದ್ದು, ಮುಂತಾದ ಅಂಶಗಳನ್ನು ಅವರು ಪ್ರಸ್ತಾಪಿಸಿದ್ದರು.
ಈ ಲೇಖನವನ್ನು ಬಿಜೆಪಿ ಖಂಡಿಸಿತ್ತು. ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸಿಗೆ ಕಳಂಕ ತರುವ ಪ್ರಯತ್ನ ಇದು ಎಂದಿದ್ದ ಬಿಜೆಪಿ, ಪತ್ರಕರ್ತ ತವ್ಲೀನ್ ಸಿಂಗ್ ಮತ್ತು ಪಾಕಿಸ್ತಾನಿ ರಾಜಕಾರಣಿ, ಉದ್ಯಮಿ ಸಲ್ಮಾನ್ ತಸೀರ್ ಅವರ ಮಗನಾಗಿರುವ ಆತಿಶ್ ತಸೀರ್ ಪಾಕಿಸ್ತಾನದ ಅಜೆಂಡಾವನ್ನು ಬಿಂಬಿಸಿದ್ದಾರೆ ಎಂದು ಆರೋಪಿಸಿತ್ತು.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications