ಬಿಹಾರ ನೆಲದಲ್ಲಿ ನಿತೀಶ್ ಗೆ ಕುಟುಕಿದ ಮೋದಿ!
ಪಾಟ್ನಾ, ಮಾ.3 : "ಮಾನವೀಯತೆಗೆ ಭಯೋತ್ಪಾದನೆ ಮುಳುವಾಗಿದೆ. ಓಟ್ ಬ್ಯಾಂಕ್ ರಾಜಕಾರಣ ಮಾಡುತ್ತಿರುವ ನಿತೀಶ್ ಕುಮಾರ್ ಸರ್ಕಾರದ ನಿರ್ಣಯಗಳಿಂದಾಗಿ ಭಯೋತ್ಪಾದಕರಿಗೆ ಬಿಹಾರ ಸ್ವರ್ಗವಾಗಿದೆ" ಎಂದು ಬಿಜೆಪಿ ಪ್ರಧಾನಿ ಅಭ್ಯರ್ಥಿ ನರೇಂದ್ರ ಮೋದಿ ತಮ್ಮ ರಾಜಕೀಯ ಕಡು ವಿರೋಧಿಯನ್ನು ಅವರ ನೆಲದಲ್ಲಿಯೇ ಕುಟುಕಿದ್ದಾರೆ.
ಸೋಮವಾರ ನರೇಂದ್ರ ಮೋದಿ ಬಿಹಾರದ ಮುಜಫರ್ ಪುರ್ ನಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದರು. ಇತ್ತೀಚೆಗೆ ಎನ್ ಡಿಎ ಮೈತ್ರಿಕೂಟ ಸೇರಿದ ಎಲ್ ಜೆಪಿ ನಾಯಕ ರಾಮ್ ವಿಲಾಸ್ ಪಾಸ್ವಾನ್ ಮೊದಲ ಬಾರಿಗೆ ನರೇಂದ್ರ ಮೋದಿ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.

ತಮ್ಮ ಭಾಷಣದಲ್ಲಿ ಅ.27ರಂದು ಪಾಟ್ನಾದ ಹೂಂಕಾರ್ ಸಮಾವೇಶದ ಸಂದರ್ಭದಲ್ಲಿ ನಡೆದ ಬಾಂಬ್ ಸ್ಫೋಟವನ್ನು ನೆನಪು ಮಾಡಿಕೊಂಡ ಮೋದಿ, ಮಾನವೀಯತೆ ಭಯೋತ್ಪಾದನೆ ಬೆದರಿಕೆ ಒಡ್ಡುತ್ತಿದೆ. ಬಿಹಾರ ಸಿಎಂ ನಿತೀಶ್ ಕುಮಾರ್ ಅವರ ವೋಟ್ ಬ್ಯಾಂಕ್ ರಾಜಕಾರಣದಿಂದಾಗಿ, ಬಿಹಾರ ಭಯೋತ್ಪಾದಕರಿಗೆ ಸ್ವರ್ಗವಾಗಿದೆ ಎಂದು ಆರೋಪಿಸಿದರು. [ಮೋದಿ ಹುಬ್ಬಳ್ಳಿಯಲ್ಲಿ ಹೇಳಿದ್ದೇನು?]
ಮೋದಿ ಭಾಷಣದ ಮುಖ್ಯಾಂಶಗಳು
* ನನ್ನ ಗುರಿ ದೇಶದ ವಿಕಾಸ, ಕಾಂಗ್ರೆಸ್ ಗುರಿ ಮೋದಿ ವಿನಾಶ. ಇವರಲ್ಲಿ ಯಾರು ಗೆಲುವು ಸಾಧಿಸಬೇಕು ಎಂದು ಜನರು ತೀರ್ಮಾನಿಸುತ್ತಾರೆ ಎಂದು ಮೋದಿ ಕಾಂಗ್ರೆಸ್ ವಿರುದ್ಧ ಗುಡುಗಿದರು.
* ನಾವು ಭ್ರಷ್ಟಾಚಾರ ತಡೆಯಿರಿ ಎಂದರೆ, ಕಾಂಗ್ರೆಸ್ ಮೋದಿಯನ್ನು ತಡೆಯಿರಿ ಎನ್ನುತ್ತದೆ. ಭ್ರಷ್ಟಾಚಾರವನ್ನು ನಿಲ್ಲಿಸಿ ಎಂದರೆ ಮೋದಿ ನಿಲ್ಲಿಸಿ ಎನ್ನುತ್ತಾರೆ. ಕಾಂಗ್ರೆಸ್ ಪಕ್ಷದ ಅಭಿವೃದ್ಧಿ ವಿಚಾರವನ್ನು ಬಿಟ್ಟು ಉಳಿದ ವಿಷಯವನ್ನು ಮಾತನಾಡುತ್ತದೆ ಎಂದು ನರೇಂದ್ರ ಮೋದಿ ಆರೋಪಿಸಿದರು. [ಮೋದಿ ಗುಲ್ಬರ್ಗದಲ್ಲಿ ಹೇಳಿದ್ದೇನು?]
* ಭಯೋತ್ಪಾದನೆ ಮಾನವೀಯತೆ ಬೆದರಿಕೆ ಒಡ್ಡುತ್ತಿದೆ. ಬಿಹಾರ ಸರ್ಕಾರದ ವೋಟ್ ಬ್ಯಾಂಕ್ ರಾಜಕೀಯದ ಪರಿಣಾಮದಿಂದಾಗಿ ಬಿಹಾರ ಇಂದು ಭಯೋತ್ಪಾದಕರಿಗೆ ಸ್ವರ್ಗವಾಗುತ್ತಿದೆ ಎಂದು ತಮ್ಮ ರಾಜಕೀಯ ಕಡುವಿರೋಧಿ ನಿತೀಶ್ ಕುಮಾರ್ ಅವರಿಗೆ ಮೋದಿ ಅವರ ನೆಲದಲ್ಲಿಯೇ ಕುಟುಕಿದರು.
* ಬಿಹಾರ ರಾಜ್ಯದ ಜನರಿಗೆ 24 ಗಂಟೆಯೂ ವಿದ್ಯುತ್ ಸೌಲಭ್ಯ ಬೇಕು, ರಾಜ್ಯದ ಬಹುತೇಕ ಮನೆಗಳಲ್ಲಿ ಶೌಚಾಲಯದ ಸೌಲಭ್ಯವಿಲ್ಲ. ದೇಶದ ಪ್ರತಿಯೊಂದು ಮನೆಗೂ ಅಗತ್ಯ ಮೂಲಭೂತ ಸೌಲಭ್ಯ ಕಲ್ಪಿಸಲು ನಾವು ಪ್ರಯತ್ನಿಸುತ್ತೇವೆ. ನಮ್ಮನ್ನು ಲೋಕಸಭೆ ಚುನಾವಣೆಯಲ್ಲಿ ಬೆಂಬಲಿಸಿ ಎಂದರು.
Terrorism is a threat to humanity. Sadly, Bihar has become a heaven for terrorists due to Government's votebank politics: Narendra Modi
— narendramodi_in (@narendramodi_in) March 3, 2014 * ದೇಶದಲ್ಲಿ ಯುವಶಕ್ತಿ ಹೆಚ್ಚಿದೆ. ಯುವಕರು ಎದುರಿಸುತ್ತಿರುವ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸಿ ಎಂದು ಹೇಳಿದರೆ, ಕೇಂದ್ರ ಯುಪಿಎ ಸರ್ಕಾರ ಜಾತ್ಯಾತೀತತೆ ಅವನತಿಯಾಗುತ್ತಿದೆ ಎಂದು ಮಾತನಾಡುತ್ತದೆ ಎಂದು ಮೋದಿ ವಾಗ್ದಾಳಿ ನಡೆಸಿದರು.
* ಸಿಬಿಐ ಭಯದಿಂದಾಗಿ ಹಲವು ಪಕ್ಷಗಳು ಸೇರಿಕೊಂಡು ತೃತೀಯ ರಂಗವನ್ನು ರಚಿಸಿಕೊಂಡಿವೆ. ಚುನಾವಣೆ ಸಮಯದಲ್ಲಿ ಮಾತ್ರ ತೃತೀಯ ರಂಗ ಹುಟ್ಟಿಕೊಳ್ಳುತ್ತದೆ. ತೃತೀಯ ರಂಗ ಕಾಂಗ್ರೆಸ್ ರಕ್ಷಿಸಲು ಕೆಲಸಮ ಮಾಡುತ್ತದೆ. ಇದರ ಬೂಟಾಟಿಕೆ ಬಗ್ಗೆ ಜನರಿಗೆ ತಿಳಿದಿದೆ ಎಂದು ಮೋದಿ ತೃತೀಯ ರಂಗವನ್ನು ತರಾಟೆಗೆ ತೆಗೆದುಕೊಂಡರು.
It has become a fashion- you say youth wants job, they say secularism is under threat, same answer if you say prices are rising: Modi ji
— narendramodi_in (@narendramodi_in) March 3, 2014 We want an India where every family has a home, a home with water and sanitation facilities, where there is power connection: Narendra Modi
— narendramodi_in (@narendramodi_in) March 3, 2014 -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications