ನರೇಂದ್ರ ಮೋದಿ 66ನೇ ಹುಟ್ಟುಹಬ್ಬ ಗಿನ್ನಿಸ್ ದಾಖಲೆಗಳ ಪಟ್ಟಿಗೆ!
ನವದೆಹಲಿ, ಸೆ. 16 : ಪ್ರಧಾನಿ ನರೇಂದ್ರ ಮೋದಿ ತಮ್ಮ 66ನೇ ಹುಟ್ಟುಹಬ್ಬವನ್ನು ಗುಜರಾತ್ ನಲ್ಲಿ ಅಂಗವಿಕಲ ಮಕ್ಕಳೊಂದಿಗೆ ಆಚರಿಸಿಕೊಳ್ಳಲು ತೀರ್ಮಾನಿಸಿದ್ದಾರೆ. ಇವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಲು ಇವರ ಅಭಿಮಾನಿಗಳು ಗುಜರಾತ್ ನಲ್ಲಿ ಎಲ್ಲಾ ರೀತಿ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ.
ಸೆ.17 ರಂದು ಗುಜರಾತ್ ನ ಗಾಂಧಿನಗರಕ್ಕೆ ತೆರಳಿ ಮೊದಲು ತಾಯಿ ಹೀರಾಬೆನ್ ಅವರ ಆಶೀರ್ವಾದ ಪಡೆದು ಕುಟುಂಬದವರನ್ನು ಭೇಟಿಯಾಗಲಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿ ಜನ್ಮದಿನ ನಿಮಿತ್ತ ದೆಹಲಿ ಸೇರಿದಂತೆ ವಿವಿಧೆಡೆ ಅವರ ಜನ್ಮದಿನವನ್ನು ವಿಭಿನ್ನವಾಗಿ ಅಚರಿಸಲು ಸಿದ್ಧತೆಗಳು ನಡೆಯುತ್ತಿವೆ. ಅಷ್ಟೇ ಅಲ್ಲದೆ ಪ್ರಧಾನಿ ಮೋದಿ ಜನ್ಮದಿನದಂದು ನಾಲ್ಕು ಗಿನ್ನಿಸ್ ವಿಶ್ವದಾಖಲೆಗಳನ್ನು ಸೃಷ್ಟಿಸಲು ವೇದಿಕೆ ಸಹ ಸಜ್ಜಾಗಿದೆ.

ಲಾಂಛನವನ್ನು ರೂಪಿಸಿ ಗಿನ್ನಿಸ್ ದಾಖಲೆ
ಗುಜರಾತ್ ನ ನವಸಾರಿ ಜಿಲ್ಲೆಯಲ್ಲಿ 11,000 ವಿಕಲಚೇತನರಿಗೆ ವಿಶೇಷವಾಗಿ ವಿನ್ಯಾಸ ಪಡಿಸಿದ ಕಿಟ್ ಗಳನ್ನು ಮೋದಿ ವಿತರಿಸಲಿದ್ದಾರೆ. ಗಾಲಿಕುರ್ಚಿಯಲ್ಲಿ ಗರಿಷ್ಠ ಸಂಖ್ಯೆಯ ಸುಮಾರು 1,000 ಜನರು ಒಂದೆಡೆ ಸೇರಿ ಒಂದು ಚಿತ್ರ ಅಥವಾ ಲಾಂಛನವನ್ನು ರೂಪಿಸಿ ಗಿನ್ನಿಸ್ ದಾಖಲೆ ಮಾಡಲು ಹೊರಟಿದ್ದಾರೆ.

1,000 ಕಿವುಡರಿಗೆ ಮಶಿನ್ ವಿತರಣೆ
1,000 ಶ್ರವಣ ಸಾಧನಗಳನ್ನು ನೀಡಿ ಆಸ್ಟ್ರೇಲಿಯಾದ ದಾಖಲೆಯನ್ನು ಮುರಿಯಲಿದ್ದಾರೆ. ಹಾಗೆಯೇ ಫಲಾನುಭವಿಗಳಿಗೆ ಗಾಲಿಕುರ್ಚಿಗಳು, ಟ್ರೈಸೈಕಲ್ ಗಳು, ಸೆರೆಬ್ರಲ್ ಪಾಸ್ಲಿ ರೋಗಿಗಳಿಗೆ ವಿಶೇಷ ಕುರ್ಚಿಗಳು ಹಾಗೂ ಶೈಕ್ಷಣಿಕ ಕಿಟ್ ಗಳನ್ನು ನೀಡಲಾಗುವುದು.

1000 ವಿಕಲಚೇತನರು ದೀಪಾ ಹಚ್ಚಲಿದ್ದಾರೆ.
ಈ ಹಿಂದೆ ಅಮೆರಿಕದಲ್ಲಿ 346 ಜನರು ದೀಪಾ ಬೆಳಗಿದ ದಾಖಲೆಯಾಗಿತ್ತು. ಈ ದಾಖಲೆಯನ್ನು ಮೋದಿ ಅವರ ಹುಟ್ಟುಹಬ್ಬದ ದಿನದಂದು ಒಂದೇ ಸ್ಥಳದಲ್ಲಿ 1000 ದೀಪಗಳನ್ನು ಬೆಳಗಿಸಿ ವಿಶ್ವ ದಾಖಲೆ ನಿರ್ಮಿಸಲಾಗುವುದು ಎಂದು ಸಂಘಟಕರು ತಿಳಿಸಿದ್ದಾರೆ.

1 ಟನ್ ಎತ್ತರದ ಪಿರಮಿಡ್ ಕೇಕ್.
ಇಷ್ಟು ಮಾತ್ರವಲ್ಲದೇ ಹುಟ್ಟುಹಬ್ಬಕ್ಕೆ ಸುಮಾರು 1 ಟನ್ ತೂಕವಿರುವ ವಿಶ್ವದಲ್ಲಿಯೇ ಅತ್ತೀ ಎತ್ತರ ಪಿರಮಿಡ್ ಆಕೃತಿಯ ಕೇಕ್ ಗೆ ಸೂರತ್ ನಲ್ಲಿ ಮೋದಿ ಅವರಿಂದ ಕತ್ತರಿ ಬೀಳಿದೆ. ಇದು ಸಹ ಗಿನ್ನಿಸ್ ದಾಖಲೆಗಳ ಪಟ್ಟಿಗೆ ಸೇರಲಿದೆ.

ಬುಕ್ ಆಫ್ ರೆಕಾರ್ಡ್ ನ ಅಧಿಕಾರಿಗಳು ಭಾಗಿ
ಇವರ ಜನ್ಮದಿನ ಕಾರ್ಯಕ್ರಮಗಳಲ್ಲಿ ಬ್ರಿಟನ್ನಿನ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ನ ಅಧಿಕಾರಿಗಳು ಭಾಗವಹಿಸಿ ಮೋದಿ ಅವರ ಮಹತ್ತರ ಕಾರ್ಯಕ್ರಮಗಳನ್ನು ಕಣ್ತುಂಬಿಕೊಳಲ್ಲಿದ್ದಾರೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications