ಮೋದಿ ಮನದ ಮಾತು: ಬರಗಾಲ, ಅರಣ್ಯ ರಕ್ಷಣೆಗೆ ಅದ್ಯತೆ
ನವದೆಹಲಿ, ಮೇ 22: ಪ್ರಧಾನಿ ನರೇಂದ್ರ ಮೋದಿ ಅವರು ಇರಾನ್ ಪ್ರವಾಸಕ್ಕೆ ತೆರಳುವ ಮುನ್ನ ಆಕಾಶವಾಣಿಯಲ್ಲಿ ತಮ್ಮ ಮನದ ಮಾತುಗಳನ್ನು ಬಿತ್ತರಿಸಿದ್ದಾರೆ. 20ನೇ 'ಮನ್ ಕಿ ಬಾತ್' ಕಾರ್ಯಕ್ರಮದಲ್ಲಿ ಭಾನುವಾರದಂದು ಬರಗಾಲ, ಅರಣ್ಯ ಸಂರಕ್ಷಣೆ, ಒಲಿಂಪಿಕ್ಸ್ಮ್, ಯೋಗ, ಪರೀಕ್ಷೆ ಫಲಿತಾಂಶ ಮುಂತಾದ ವಿಷಯಗಳ ಬಗ್ಗೆ ಭಾಷಣ ಮಾಡಿದರು. ಮೋದಿ ಅವರ ಮನದ ಮಾತಿನ ಮುಖ್ಯಾಂಶ ಇಲ್ಲಿದೆ:
* ಆಕಾಶವಾಣಿ ಮೂಲಕ ನಾನು ದೇಶದ ವಿವಿಧ ಕಡೆ ಇರುವ ಜನರನ್ನು ತಲುಪಲು ಸಾಧ್ಯವಾಗುತ್ತಿದೆ. ಜನರು ತಮ್ಮ ಸಮಸ್ಯೆಗಳನ್ನು ನನಗೆ ಪತ್ರ, ಇಮೇಲ್, mygov ವೆಬ್ ಸೈಟ್, ನರೇಂದ್ರ ಮೋದಿ ಅಪ್ಲಿಕೇಷನ್ ಮೂಲಕ ತಲುಪಿಸುತ್ತಿದ್ದಾರೆ.[ಮುಂಗಾರು ಪ್ರವೇಶ ಒಂದು ವಾರ ವಿಳಂಬ]
* ಅರಣ್ಯ ನಾಶದಿಂದ ನಗರ ಪ್ರದೇಶಗಳಲ್ಲಿ ತಾಪಮಾನ ಹೆಚ್ಚಳವಾಗಿದೆ. ಈ ಬಾರಿ ಮುಂಗಾರು ಮಳೆ ಕೂಡಾ ವಿಳಂಬವಾಗಲಿದೆ ಎಂಬ ಸುದ್ದಿ ಮಾಧ್ಯಮಗಳ ಮೂಲಕ ತಿಳಿದು ಆತಂಕ ಹೆಚ್ಚಿದೆ.

* ಇತ್ತೀಚೆಗೆ ಬರಗಾಲ ಪೀಡಿತ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಸಿ ಈ ಬಗ್ಗೆ ಚರ್ಚಿಸಲಾಯಿತು.
* ಈ ಬಗ್ಗೆ ಇನ್ನಷ್ಟು ಸಭೆ ನಡೆಸಿ ಪ್ರತಿ ರಾಜ್ಯದ ಮುಖ್ಯಮಂತ್ರಿ ಜೊತೆಗೆ ಪ್ರತ್ಯೇಕ ಸಭೆ ನಡೆಸಲು ಉದ್ದೇಶಿಸಿದ್ದೇನೆ.
* ಅನೇಕ ರಾಜ್ಯಗಳಲ್ಲಿ ಬರಗಾಲದ ವಿರುದ್ಧ ಪಕ್ಷಾತೀತವಾಗಿ ಹೋರಾಟ ನಡೆಸಿರುವುದು ಕಂಡು ಬಂದಿದೆ. ಸೂಕ್ತ ಕ್ರಮಗಳನ್ನು ತೆಗೆದುಕೊಂಡಿದ್ದಾರೆ.[ಉತ್ತರಾಖಂಡ ಒಂದೇ ಅಲ್ಲ ಉತ್ತರ ಕನ್ನಡವು ಸುಡ್ತಿದೆ!]
* ಈ ನಿಟ್ಟಿನಲ್ಲಿ ಗುಜರಾತ್ ಹಾಗೂ ಆಂಧ್ರಪ್ರದೇಶ ಸರ್ಕಾರಗಳು, ಜಲ ಸಂರಕ್ಷಣೆ ಹಾಗೂ ಅರಣ್ಯ ರಕ್ಷಣೆ ಮಾಡಲು ತಂತ್ರಜ್ಞಾನ ಬಳಕೆ ಮಾಡಿ ಮೆಚ್ಚುಗೆ ಕಾರ್ಯವನ್ನು ಮಾಡಿವೆ.
* ಉತ್ತರಾಖಂಡ್, ಹಿಮಾಚಲ ಪ್ರದೇಶ, ಜಮ್ಮು ಮತ್ತು ಕಾಶ್ಮೀರ, ಹಿಮಾಲಯದ ಅನೇಕ ಕಡೆ ಕಾಡ್ಗಿಚ್ಚಿಗೆ ಅಪಾರವಾದ ವನ್ಯಸಂಪತ್ತು ನಾಶವಾಗಿದೆ. ['ಸುಡುತ್ತಿರುವ ಪಶ್ಚಿಮ ಘಟ್ಟ ಮೊದಲು ಉಳಿಸಿಕೊಳ್ಳಿ']
* ಮುಂಗಾರು ಪ್ರವೇಶದ ನಂತರ ಜೂನ್, ಜುಲೈ, ಆಗಸ್ಟ್ ಹಾಗೂ ಸೆಪ್ಟೆಂಬರ್ ತಿಂಗಳಿನಲ್ಲಿ ಜಲ ಸಂರಕ್ಷಣೆಗೆ ಹೆಚ್ಚಿನ ಮಹತ್ವ ನೀಡಬೇಕಿದೆ.
ಮೋದಿ ಅವರ 'ಮನ್ ಕಿ ಬಾತ್' ಕೇಳಿಸಿಕೊಳ್ಳಿ:
More From
-
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications