ಯೋಧರೊಂದಿಗೆ ಸಿಯಾಚಿನ್ ನಲ್ಲಿ ಮೋದಿ ದೀಪಾವಳಿ
ಶ್ರೀನಗರ, ಅ. 23: ಪ್ರವಾಹ ಸಂತ್ರಸ್ತರು ಮತ್ತು ಸೈನಿಕರೊಂದಿಗೆ ನರೇಂದ್ರ ಮೋದಿ ಈ ಬಾರಿ ದೀಪಾವಳಿ ಆಚರಿಸಲಿದ್ದಾರೆ. ಪ್ರಾಣದ ಹಂಗು ತೊರೆದು ಹಗಲಿರುಳು ದೇಶವನ್ನು ಕಾಯುತ್ತಿರುವ ಸೈನಿಕರ ಜತೆ ಹಬ್ಬ ಆಚರಿಸುತ್ತೇನೆ. ಹಾಗಾಗಿ ಜಮ್ಮು ಕಾಶ್ಮೀರದ ಸಿಯಾಚಿನ್ ಗೆ ಭೇಟಿ ನೀಡಿ ಯೋಧರೊಂದಿಗೆ ಸಮಯ ಕಳೆಯಲಿದ್ದೇನೆ ಎಂದು ನರೇಂದ್ರ ಮೋದಿ ಟ್ಟಿಟ್ಟರ್ ನಲ್ಲಿ ತಿಳಿಸಿದ್ದಾರೆ.
ದೇಶದ ಜನತೆ ಯೋಧರ ಜತೆ ಸದಾ ಇರುತ್ತದೆ. ಇಂಥ ವಿಶೇಷ ದಿನದಂದು ವೀರ ಯೊಧರೊಂದಿಗೆ ಹಬ್ಬ ಆಚರಿಸುತ್ತಿರುವುದು ಹೆಮ್ಮೆ ತಂದಿದೆ. ಭೀಕರ ಪ್ರವಾಹದಿಂದ ಸಂತ್ರಸ್ತರಾದ ಕಾಶ್ಮೀರದ ಜನರ ನೋವನ್ನು ಹತ್ತಿರದಿಂದ ಆಲಿಸುತ್ತೇನೆ ಎಂದು ಮೋದಿ ಹೇಳಿದ್ದಾರೆ.[ಸಲ್ಮಾನ್ ಖಾನ್ ರನ್ನು ಹಾಡಿ ಹೊಗಳಿದ ಮೋದಿ]

ಬಿಸಿಲಿರಲಿ, ಚಳಿಯಿರಲಿ ಮನೆಮಂದಿಯನ್ನೆಲ್ಲ ದೂರ ಇಟ್ಟು ದೇಶ ಕಾಯುತ್ತಿರುವ ಯೋಧರೊಂದಿಗೆ ಸಮಯ ಕಳೆಯುವುದು ಸಂತಸ ತಂದಿದೆ. ರಾಷ್ಟ್ರದ ಜನರ ಒಕ್ಕೊರಲ ಅಭಿಪ್ರಾಯವನ್ನು ಸೈನಿಕರಿಗೆ ತಿಳಿಸುತ್ತೇನೆ ಎಂದು ಹೇಳಿದ್ದಾರೆ. ಸಿಯಾಚಿನ್ ಗೆ ಭೇಟಿ ನೀಡಿದ ನಂತರ ನರೇಂದ್ರ ಮೋದಿ ಶ್ರೀನಗರಕ್ಕೆ ಆಗಮಿಸಿ ಪ್ರವಾಹ ಸಂತ್ರಸ್ತರೊಂದಿಗೆ ದಿನ ಕಳೆಯಲಿದ್ದಾರೆ.
ಸಿಯಾಚಿನ್ ಎಲ್ಲಿದೆ?
ಜಮ್ಮು ಮತ್ತು ಕಾಶ್ಮೀರದ ಗಡಿಭಾಗದಲ್ಲಿರುವ ಸಿಯಾಚಿನ್ ಯಾವಾಗಲೂ ಹಿಮಚ್ಛಾದಿತಯವಾಗಿರುತ್ತದೆ. ಭಾರತ ಮತ್ತು ಪಾಕಿಸ್ತಾನದ ಗಡಿ ಯಲ್ಲಿರುವ ಸಿಯಾಚಿನ್ ಸಮುದ್ರ ಮಟ್ಟದಿಂದ 18,875ಅಡಿ ಎತ್ತರದಲ್ಲಿದೆ.
ಕೊಂಚ ಅತ್ತ ಇತ್ತ ಸುಳಿದರೆ ಪಾಕಿಸ್ತಾನ, ಚೀನಾದ ಸರಹದ್ದುಗಳು. ಹಿಮಾಲಯದ ಕಾರಕೋರಂ ಪರ್ವತ ಶ್ರೇಣಿಗಳಲ್ಲಿ ಇರುವ ಸಿಯಾಚಿನ್ ಹಿಮನದಿ ಪ್ರದೇಶಕ್ಕೆ ತೆರಳಲು ಎಷ್ಟು ಧೈರ್ಯವಿದ್ದರೂ ಸಾಲದು ಆದರೆ ನಮ್ಮ ಯೋಧರು ಅಲ್ಲಿ ಗಡಿ ಕಾಯುತ್ತಿದ್ದಾರೆ. ಮೈನಸ್ 50 ಡಿಗ್ರಿ ಉಷ್ಣಾಂಶದಲ್ಲಿ ರಾಷ್ಟ್ರಕ್ಕೆ ರಕ್ಷಾಕವಚವಾಗಿ ನಿಂತಿದ್ದಾರೆ.
Friends, I am leaving for Siachen Glacier. Its my good fortune that I will be able to spend time with our brave soldiers on this special day
— Narendra Modi (@narendramodi) October 23, 2014 Everyone is aware of the extreme conditions at Siachen. Overcoming every challenge our soldiers stand firm, protecting our Motherland.
— Narendra Modi (@narendramodi) October 23, 2014 After the Siachen visit I will continue with my scheduled visit to Srinagar to spend time with those affected due to the recent floods.
— Narendra Modi (@narendramodi) October 23, 2014 -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications