ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಲ್‌.ಕೆ.ಅಡ್ವಾಣಿ ಬ್ಲಾಗ್ ಬಗ್ಗೆ ಟ್ವೀಟ್ ಮಾಡಿದ ನರೇಂದ್ರ ಮೋದಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 04 : 'ನನಗೆ ದೇಶ ಮೊದಲು, ನಂತರ ಪಕ್ಷ, ಕೊನೆಯಲ್ಲಿ ನಾನು. ಇದು ನನ್ನ ಸಿದ್ಧಾಂತ. ಇಷ್ಟು ವರ್ಷಗಳ ಕಾಲವೂ ಇದನ್ನೇ ಪಾಲಿಸಿಕೊಂಡು ಬಂದಿದ್ದೇನೆ' ಎಂದು ಬಿಜೆಪಿ ಹಿರಿಯ ನಾಯಕ ಎಲ್‌.ಕೆ.ಅಡ್ವಾಣಿ ಬ್ಲಾಗ್‌ನಲ್ಲಿ ಬರೆದಿದ್ದಾರೆ.

ಗುರುವಾರ ಸಂಜೆ ಎಲ್‌.ಕೆ.ಅಡ್ವಾಣಿ ಅವರು ತಮ್ಮ ಬ್ಲಾಗ್‌ನಲ್ಲಿ ಹಲವಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಏಪ್ರಿಲ್ 6ರಂದು ಬಿಜೆಪಿಯ ಸಂಸ್ಥಾಪನಾ ದಿನಾಚರಣೆ. ಈ ಹಿನ್ನಲೆಯಲ್ಲಿಯೇ ಅವರು ಬ್ಲಾಗ್ ಬರೆದಿದ್ದಾರೆ.

ರಾಜಕೀಯ ವಿರೋಧಿಗಳು ದೇಶದ್ರೋಹಿಗಳಲ್ಲ: ಮೌನ ಮುರಿದ ಅಡ್ವಾಣಿರಾಜಕೀಯ ವಿರೋಧಿಗಳು ದೇಶದ್ರೋಹಿಗಳಲ್ಲ: ಮೌನ ಮುರಿದ ಅಡ್ವಾಣಿ

ದೇಶಾದ್ಯಂತ ಎಲ್.ಕೆ.ಅಡ್ವಾಣಿ ಅವರ ಬ್ಲಾಗ್ ಬಗ್ಗೆ ಚರ್ಚೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಹ ಅಡ್ವಾಣಿ ಅವರ ಬ್ಲಾಗ್‌ ಬಗ್ಗೆ ಟ್ವೀಟ್ ಮಾಡಿ ಪ್ರತಿಕ್ರಿಯೆ ನೀಡಿದ್ದಾರೆ. 'ಬಿಜೆಪಿ ಕಾರ್ಯಕರ್ತ ಆಗಿರುವುದಕ್ಕೆ ಹೆಮ್ಮೆ ಇದೆ' ಎಂದು ಹೇಳಿದ್ದಾರೆ.

ಅಡ್ವಾಣಿ ಜಾಗದಲ್ಲಿ ಅಮಿತ್ ಶಾ, ನಿರ್ಧಾರದಲ್ಲಿ ತಪ್ಪಿಲ್ಲ ಎಂದ ಬಿಜೆಪಿಅಡ್ವಾಣಿ ಜಾಗದಲ್ಲಿ ಅಮಿತ್ ಶಾ, ನಿರ್ಧಾರದಲ್ಲಿ ತಪ್ಪಿಲ್ಲ ಎಂದ ಬಿಜೆಪಿ

Narendra Modi

'ಅಡ್ವಾಣಿ ಅವರು ಬಿಜೆಪಿಯ ಆಶಯವನ್ನು ಉತ್ತಮವಾಗಿ ನಿರೂಪಿಸಿದ್ದಾರೆ. ದೇಶ ಮೊದಲು, ಪಕ್ಷ ಆಮೇಲೆ, ನಂತರ ನಾನು ಎನ್ನುವುದು ನಮ್ಮ ಮಂತ್ರವಾಗಿದೆ' ಎಂದು ಮೋದಿ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಲೋಕಸಭಾ ಚುನಾವಣಾ ಪುಟ

'ಬಿಜೆಪಿ ಕಾರ್ಯಕರ್ತ ಆಗಿರುವುದಕ್ಕೆ ಹೆಮ್ಮೆ ಇದೆ. ಎಲ್‌.ಕೆ.ಅಡ್ವಾಣಿ ಅಂತಹ ನಾಯಕರು ಪಕ್ಷವನ್ನು ಕಟ್ಟಿರುವುದಕ್ಕೆ ಹೆಮ್ಮೆ ಇದೆ' ಎಂದು ಮೋದಿ ಟ್ವೀಟ್ ಮಾಡಿದ್ದಾರೆ.

English summary
Proud to be a BJP Karyakarta and proud that greats like L.K.Advani Ji have strengthened it Narendra Modi tweet about party senior leader L.K.Advani blog.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X