ಬನ್ನಿ ಒಟ್ಟಿಗೆ ಕೆಲಸ ಮಾಡೋಣ: ಮೋದಿ ಪತ್ರ
ನವದೆಹಲಿ, ಮೇ.26: ಪ್ರಧಾನಿಯಾಗಿ ಅಧಿಕಾರವಹಿಸಿಕೊಂಡು ಒಂದು ವರ್ಷವಾದ ಹಿನ್ನೆಲೆಯಲ್ಲಿ ದೇಶದ ನಾಗರಿಕರನ್ನು ಉದ್ದೇಶಿಸಿ ನರೇಂದ್ರ ಮೋದಿ ಅವರು ಬಹಿರಂಗ ಪತ್ರ ಬರೆದಿದ್ದಾರೆ. ಅಂತ್ಯೋದಯ ನಮ್ಮ ಮೂಲ ಮಂತ್ರವಾಗಿದೆ ಎಂದಿರುವ ಮೋದಿ ಅವರು ಎನ್ ಡಿಎ ಸರ್ಕಾರದ ಜನಪರ ಯೋಜನೆಗಳ ವಿವರ ನೀಡಿ, ಬನ್ನಿ ಒಟ್ಟಿಗೆ ಕಾರ್ಯ ನಿರ್ವಹಿಸೋಣ ಎಂದು ಕರೆ ನೀಡಿದ್ದಾರೆ.
ಜನಧನ, ಪ್ರಧಾನಮಂತ್ರಿ ಜೀವನಜ್ಯೋತಿ ವಿಮಾ ಯೋಜನೆ, ಪ್ರಧಾನಮಂತ್ರಿ ಸುರಕ್ಷಾ ಯೋಜನೆ, ಅಟಲ್ ಪಿಂಚಣಿ ಯೋಜನೆ ಬಗ್ಗೆ ಉಲ್ಲೇಖಿಸಿದ್ದಾರೆ. ಅಂತ್ಯೋದಯ, ಅನ್ನದಾತ ಸುಖೀ ಭವ ನಮ್ಮ ಮೂಲ ಮಂತ್ರ. ಆಹಾರ ಭದ್ರತೆ, ಕೃಷಿ ಸಿಂಚನಾ ಯೋಜನೆ, ಮಣ್ಣಿನ ಫಲವತ್ತತೆ ಕಾರ್ಡ್, ಯೂರಿಯಾ ಯೋಜನೆ ಇದಕ್ಕೆ ಪೂರಕ ಎಂದಿದ್ದಾರೆ.
ಭ್ರಷ್ಟಾಚಾರ ಮುಕ್ತ ಹಾಗೂ ಪಾರದರ್ಶಕ ಆಡಳಿತ, ಕಲ್ಲಿದ್ದಲು, ತರಂಗಾಂತರಗಳ ಹಂಚಿಕೆ ಅವ್ಯವಹಾರ ಸರಿಪಡಿಸುವುದು ನಮ್ಮ ಉದ್ದೇಶ.

ಮೇಕ್ ಇನ್ ಇಂಡಿಯಾ, ಸ್ಕಿಲ್ ಇಂಡಿಯಾ ಯುವ ಜನತೆಗೆ ಅಪಾರ ಅವಕಾಶಗಳ ಹೆಬ್ಬಾಗಿಲು ತೆರೆಯಲಿದೆ. ಸಣ್ಣ ಉದ್ಯಮಿಗಳಿಗೆ 10 ಸಾವಿರದಿಂದ 10 ಲಕ್ಷ ರು ತನಕ ಸಾಲ ನೀಡುವ ಸೌಲಭ್ಯ ದೊರೆಯುವಂತೆ ಮಾಡಲಾಗಿದೆ.
ಗ್ರಾಮೀಣ ಭಾಗದಲ್ಲಿ ಮಹಿಳೆ ಮತ್ತು ಮಕ್ಕಳ ಆರೋಗ್ಯ ಪಾಲನೆ, ಶೌಚಾಲಯ ನಿರ್ಮಾಣ, ಸ್ವಚ್ಛಭಾರತ ಅಭಿಯಾನ ಜಾರಿಯಲ್ಲಿದೆ. ಬೇಟಿ ಬಚಾವೋ-ಬೇಟಿ ಪಢಾವೋ ಆಂದೋಲನ ತೀವ್ರಗೊಳ್ಳುತ್ತಿದೆ.
ನಮಾಮಿ ಗಂಗೆ ಯೋಜನೆ ಮೂಲಕ ಗಂಗಾ ನದಿ ಸ್ವಚ್ಛತಾ ಕಾರ್ಯ ಕೈಗೊಳ್ಳಲಾಗಿದೆ. ಡಿಜಿಟಲ್ ಇಂಡಿಯಾ ಮೂಲಕ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳನ್ನು ಒಗ್ಗೂಡಿಸಿ ಅಂತರ ಕಡಿಮೆ ಮಾಡಲಾಗಿದೆ. ಈಗ ನಾಗರಿಕರೇ ನಿಮ್ಮ ಸರದಿ, ನಮ್ಮೊಟ್ಟಿಗೆ ಕೈಜೋಡಿಸಿ ನಿಮ್ಮ ಬದುಕು ಹಸನಾಗಿಸಿಕೊಳ್ಳಿ ಎಂದು ಮೋದಿ ತಮ್ಮ ಪತ್ರದಲ್ಲಿ ಹೇಳಿದ್ದಾರೆ. [ಪತ್ರದ ಪೂರ್ಣ ಪಾಠ ಇಲ್ಲಿದೆ]
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications