ಕಾಂಗ್ರೆಸ್ ರಕ್ತದಲ್ಲಿ ಕೃಷಿ ಮಾಡುತ್ತಿದೆ: ಕೃಷಿ ಸಚಿವರ ಆರೋಪ
ನವದೆಹಲಿ, ಫೆಬ್ರವರಿ 5: ಪ್ರತಿಭಟನೆ ನಡೆಸುತ್ತಿರುವ ರೈತರ ಅಹವಾಲುಗಳನ್ನು ಕೇಳಲು ಕೇಂದ್ರ ಸರ್ಕಾರ ಸಿದ್ಧವಿದೆ. ಆದರೆ ಅದು ಮೂರು ಕಾಯ್ದೆಗಳಲ್ಲಿ ಸಮಸ್ಯೆ ಇದೆ ಎಂದು ಅರ್ಥವಲ್ಲ ಎಂಬುದಾಗಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಶುಕ್ರವಾರ ರಾಜ್ಯಸಭೆಯಲ್ಲಿ ಹೇಳಿದರು.
ರಾಜ್ಯಸಭೆಯಲ್ಲಿ ವಿರೋಧಪಕ್ಷಗಳ ವಿರುದ್ಧ ಕಿಡಿಕಾರಿದ ತೋಮರ್, ಮೂರು ಕೃಷಿ ಕಾಯ್ದೆಗಳಲ್ಲಿ ಒಂದೇ ಒಂದು ಲೋಪ ಇರುವುದನ್ನು ತೋರಿಸಲು ವಿರೋಧಪಕ್ಷಗಳು ಮತ್ತು ರೈತ ಒಕ್ಕೂಟಗಳಿಗೆ ಸಾಧ್ಯವಾಗಿಲ್ಲ ಎಂದರು.
'ಕೃಷಿ ಮಾಡಲು ನೀರು ಅಗತ್ಯ ಎನ್ನುವುದು ಎಲ್ಲರಿಗೂ ತಿಳಿದಿದೆ. ಆದರೆ ಕಾಂಗ್ರೆಸ್ ಮಾತ್ರ ರಕ್ತದಲ್ಲಿ ಕೃಷಿ ಮಾಡುತ್ತಿದೆ. ಬಿಜೆಪಿ ಎಂದಿಗೂ ಹಾಗೆ ಮಾಡುವುದಿಲ್ಲ. ಮೋದಿ ಸರ್ಕಾರವು ರೈತರ ಕಲ್ಯಾಣಕ್ಕಾಗಿ ಬದ್ಧವಾಗಿದೆ. ನಾವು ನಮ್ಮ ಪ್ರತಿಷ್ಠೆಯ ಮೇಲೆ ನಿಂತಿಲ್ಲ. ಈ ಕಾನೂನಿನಲ್ಲಿ ಕರಾಳ ಎನ್ನುವುದು ಯಾವುದು ಇದೆ ಎಂದು ಕೇಳುತ್ತಿದ್ದೇವೆ. ಅದನ್ನು ಯಾರೂ ತೋರಿಸಲು ಮುಂದೆ ಬರುತ್ತಿಲ್ಲ' ಎಂದು ಅವರು ಹೇಳಿದರು. ಮುಂದೆ ಓದಿ.

ಒಂದು ರಾಜ್ಯಕ್ಕೆ ಪ್ರತಿಭಟನೆ ಸೀಮಿತ
ಸರ್ಕಾರವು ತಿದ್ದುಪಡಿಗಳನ್ನು ಮಾಡಲು ಸಿದ್ಧವಿದೆ ಎಂದರೆ ಕೃಷಿ ಕಾಯ್ದೆಗಳಲ್ಲಿ ಯಾವುದೇ ಸಮಸ್ಯೆ ಇದೆ ಎಂದು ಅರ್ಥವಲ್ಲ. ನಿರ್ದಿಷ್ಟ ರಾಜ್ಯವೊಂದರ ಜನರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಕೃಷಿ ಕಾಯ್ದೆ ವಿರುದ್ಧದ ಪ್ರತಿಭಟನೆ ಒಂದೇ ಒಂದು ರಾಜ್ಯಕ್ಕೆ ಸೀಮಿತವಾಗಿದೆ ಎಂದರು.

ಅಂತಹ ನಿಯಮ ಇದ್ದರೆ ತೋರಿಸಿ
'ಈ ಕಾನೂನುಗಳು ಜಾರಿಯಾದರೆ ಬೇರೆಯವರು ತಮ್ಮ ಭೂಮಿಗಳನ್ನು ಆಕ್ರಮಿಸಿಕೊಳ್ಳಬಹುದು ಎಂದು ಹೇಳುವ ಮೂಲಕ ರೈತರನ್ನು ದಿಕ್ಕುತಪ್ಪಿಸಲಾಗುತ್ತಿದೆ. ಯಾವುದೇ ರೈತರ ಭೂಮಿಯನ್ನು ಯಾವುದೇ ವ್ಯಾಪಾರಿಯು ಕಿತ್ತುಕೊಳ್ಳಲು ಅನುಕೂಲ ಮಾಡಿಕೊಡುವಂತಹ ಒಂದೇ ಒಂದು ನಿಯಮ ಒಪ್ಪಂದ ಕೃಷಿ ಕಾಯ್ದೆಯಲ್ಲಿ ಇದ್ದರೆ ತಿಳಿಸಿ' ಎಂದು ಸವಾಲು ಹಾಕಿದರು.

ರೈತರ ಕಲ್ಯಾಣಕ್ಕೆ ಬದ್ಧ
ಆತ್ಮನಿರ್ಭರ ಪ್ಯಾಕೇಜ್ ಅಡಿ ಒಂದು ಲಕ್ಷ ಕೋಟಿ ರೂಪಾಯಿ ಕೃಷಿ ಮೂಲ ಸೌಕರ್ಯ ನಿಧಿಯನ್ನು ಒದಗಿಸಲಾಗಿದೆ. ಕೃಷಿ ವಲಯಕ್ಕೆ ಅಗತ್ಯ ಪ್ರಮಾಣದ ಹೂಡಿಕೆ ತಲುಪುವಂತೆ ಮಾಡಲು ಕೇಂದ್ರ ಸರ್ಕಾರ ಪ್ರಯತ್ನಿಸುತ್ತಿದೆ. ಹೊಸ ಕೃಷಿ ಕಾಯ್ದೆಗಳು ರೈತರ ಆದಾಯವನ್ನು ವೃದ್ಧಿಸಲು ಅನುಕೂಲಕರವಾಗಿವೆ. ರೈತರ ಕಲ್ಯಾಣಕ್ಕೆ ಮೋದಿ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದರು.

ರೈತರ ಬದುಕಲ್ಲಿ ಸಕಾರಾತ್ಮಕ ಬದಲಾವಣೆ
ರೈತರ ಜೀವನದಲ್ಲಿ ಸಕಾರಾತ್ಮಕ ಬದಲಾವಣೆಗಳನ್ನು ತರುವುದರತ್ತ ನಾವು ಗಮನ ಹರಿಸಿದ್ದೇವೆ. ತರಕಾರಿ ಮತ್ತು ಹಣ್ಣುಗಳನ್ನು ರೈಲಿನಲ್ಲಿ ಸಾಗಣೆ ಮಾಡಲಾಗುತ್ತದೆ ಎಂದು ಯಾರು ಯೋಚಿಸಿದ್ದರು? ಮೊಬೈಲ್ ಕೋಲ್ಡ್ ಸ್ಟೋರೇಜ್ ಉಳ್ಳ 100ಕಿಸಾನ್ ರೈಲುಗಳನ್ನು ಶುರುಮಾಡಲಾಗಿದೆ. ಇವು ರೈತರು ತಮ್ಮ ಉತ್ಪನ್ನಕ್ಕೆ ಸೂಕ್ತ ಬೆಲೆ ಪಡೆಯಲು ಸಹಾಯಕವಾಗಿವೆ ಎಂದು ತಿಳಿಸಿದರು.
-
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ -
April 13 Horoscope: 12 ರಾಶಿಗಳಿಗೆ ಇಂದು ಪ್ರೇಮ, ಹಣಕಾಸು, ಉದ್ಯೋಗದಲ್ಲಿ ಏನು ಹೇಳುತ್ತದೆ ನಿಮ್ಮ ರಾಶಿ? -
Bengaluru power cut: ಬೆಂಗಳೂರಿನ ಹಲವೆಡೆ ಹೆಚ್ಚಾಯ್ತು ದಿಢೀರ್ ಪವರ್ ಕಟ್, ಹೈರಾಣಾದ ಜನ: ಬೆಸ್ಕಾಂ ಕೊಟ್ಟ ಉತ್ತರ ಇಲ್ಲಿದೆ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
PUC ವಿದ್ಯಾರ್ಥಿಗಳಿಗೆ ಗುಡ್ನ್ಯೂಸ್: ಇದೇ ವರ್ಷದಿಂದಲೇ ಸಿಗಲಿವೆ ಉಚಿತ ಪಠ್ಯ ಪುಸ್ತಕ -
Hardik vs Krunal: ತಮ್ಮ ಹಾರ್ದಿಕ್ ವಿಕೆಟ್ ಕಿತ್ತ ಬೌಲರ್ಗಿಂತ ಹೆಚ್ಚಾಗಿ ಸಂಭ್ರಮಿಸಿದ ಕೃನಾಲ್ ಪಾಂಡ್ಯ, ಭಾರಿ ವೈರಲ್












Click it and Unblock the Notifications