ನರೋಡಾ ಹತ್ಯಾಕಾಂಡ: ಮಾಯಾ ಪರ ಸಾಕ್ಷಿ ಹೇಳಿದ ಅಮಿತ್ ಶಾ!
ಅಹಮದಾಬಾದ್, ಸೆ. 18: ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ನರೋಡಾ ಹತ್ಯಾಕಾಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಎಸ್ಐಟಿ ವಿಶೇಷ ನ್ಯಾಯಾಲಯಕ್ಕೆ ಸೋಮವಾರ ಬೆಳಗ್ಗೆ ಹಾಜರಾಗಿದ್ದಾರೆ.
ಮೋದಿ ಆಪ್ತೆ ಮಾಯಾ ಕೊಡ್ನಾನಿ ಮತ್ತೆ ಬಚಾವ್!
Maya Kodnani was not present in Naroda Gam, she was inside the state assembly at 8.30 am: Amit Shah in court
— ANI (@ANI) September 18, 2017
ಗುಜರಾತಿನ ಮಾಜಿ ಸಚಿವೆ ಮಾಯಾ ಕೊಡ್ನಾನಿ ಪರ ಸಾಕ್ಷ್ಯ ಹೇಳಲು ಕೋರ್ಟಿಗೆ ಬಂದಿರುವ ಅಮಿತ್ ಅವರು, ಘಟನೆ ನಡೆದ ಸಂದರ್ಭ(ಫೆಬ್ರವರಿ 28, 2002)ದಲ್ಲಿ ಮಾಯಾ ಅವರು ಗುಜರಾತಿನ ವಿಧಾನಸಭೆ ಅಧಿವೇಶನಕ್ಕೆ ಹಾಜರಾಗಿದ್ದರು ಎಂದು ಸೆಷನ್ಸ್ ಕೋರ್ಟಿನಲ್ಲಿ ಹೇಳಿದ್ದಾರೆ.
ಗೋಧ್ರಾತ್ತರ ಹಿಂಸಾಚಾರ ಪ್ರಕರಣದಿಂದ ಬಚಾವಾಗಿರುವ ಬಿಜೆಪಿಯ ಹಾಲಿ ಅಧ್ಯಕ್ಷ ಅಮಿತ್ ಶಾ ಅವರಿಗೆ ದಿಂದ ಸಮನ್ಸ್ ಜಾರಿಯಾಗಿತ್ತು. ನರೋಡಾ ಗಾಮ್ ಹಿಂಸಾಚಾರ ಪ್ರಕರಣದ ಸಂಬಂಧ ಸಾಕ್ಷಿಯಾಗಿ ಕೋರ್ಟಿಗೆ ಹಾಜರಾಗುವಂತೆ ಸೂಚಿಸಲಾಗಿತ್ತು.
From 9:30 am to 9:45 am I was at the Civil Hospital & I met Maya Kodnani there: Amit Shah in Ahmedabad Court
— ANI (@ANI) September 18, 2017
ನರಮೇಧ: ಬಿಜೆಪಿ ಮಾಜಿ ಸಚಿವೆಗೆ 28 ವರ್ಷ ಶಿಕ್ಷೆ
ಗುಜರಾತಿನಲ್ಲಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಮಾಯಾ ಅವರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆಯಾಗಿದ್ದರು. ವೃತ್ತಿಯಿಂದ ಸ್ತ್ರೀರೋಗ ತಜ್ಞೆಯಾಗಿರುವ ಮಾಯಾ ಅವರು ಘಟನೆ ನಡೆದ ದಿನದಂದು ಅಹ್ಮದಾಬಾದ್ ನಗರದ ಅಸರ್ವ ಪ್ರದೇಶದಲ್ಲಿ ನರ್ಸಿಂಗ್ ಹೋಂನಲ್ಲಿದ್ದರು ಎಂದು ವಾದಿಸಲಾಗಿದ್ದು, ಇದಕ್ಕೆ ಅಮಿತ್ ಹಾಗೂ ಇತರೆ 13 ಮಂದಿಗೆ ಸಮನ್ಸ್ ನೀಡುವಂತೆ ಮಾಯಾ ಕೋರಿದ್ದರು.
Was surrounded by ppl when I left hospital. Maya Kodnani&I were taken to our respective cars in Police jeep; was 11-11:15 am that time: Shah
— ANI (@ANI) September 18, 2017
ನರೋಡಾ ಪಾಟಿಯಾ ಹತ್ಯಾಕಾಂಡ: ಈ ದುರ್ಘಟನೆಯಲ್ಲಿ 11 ಮುಸ್ಲಿಮರ ಹತ್ಯೆಯಾಗಿತ್ತು. ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಇತರರ ಗುಂಪೇ ಹೊಣೆಯೆಂದು ಆರೋಪಿಸಲಾಗಿತ್ತು. ನರೋಡಾ ಪಾಟಿಯಾದ ಶಾಸಕಿ ಮಾಯಾ ಕೊಡ್ನಾನಿ, ವಿಹಿಂಪದ ಮಾಜಿ ಮುಖಂಡ ಬಾಬು ಬಜರಂಗಿ, ಸ್ಥಳೀಯ ಬಿಜೆಪಿ ನಾಯಕರಾದ ಬಿಪಿನ್ ಪಂಚಾಲ್, ಕಿಶನ್ ಕೊರಾನಿ, ಅಶೋಕ್ ಸಿಂಧಿ ಮತ್ತು ರಾಜು ಚುಮಾಲ್ ಸೇರಿದಂತೆ 62 ಮಂದಿ ಇಲ್ಲಿ ಆರೋಪಿಗಳಾಗಿದ್ದಾರೆ.