Sunita Williams: ಸುನಿತಾ ವಿಲಿಯಮ್ಸ್ ಭೂಮಿಗೆ ವಾಪಸ್ ಬರುವ ಬಗ್ಗೆ ಬಿಗ್ ಅಪ್ಡೇಟ್!
ನಾಸಾ ಬಾಹ್ಯಾಕಾಶ ವಿಜ್ಞಾನಿ ಸುನಿತಾ ವಿಲಿಯಮ್ಸ್ ಅವರು ಆಕಾಶದಲ್ಲಿ ಸಿಲುಕಿ ಒದ್ದಾಡಿ ಹೋಗಿದ್ದಾರೆ. ಅತಿಹೆಚ್ಚು ಸಮಯ ಬಾಹ್ಯಾಕಾಶ ನಿಲ್ದಾಣದಲ್ಲಿ ವಾಸ ಮಾಡಿರುವ ಸಾಧನೆ ಸೇರಿ ಹತ್ತಾರು ದಾಖಲೆಗಳು ಭಾರತ ಮೂಲದ ನಂಟು ಇರುವ ಸುನಿತಾ ವಿಲಿಯಮ್ಸ್ ಹೆಸರಲ್ಲಿ ಇದೆ. ಈ ಮೂಲಕ ಇದೀಗ ಬದುಕಿರುವ ವಿಜ್ಞಾನಿಗಳ ಪೈಕಿ ಅತಿಹೆಚ್ಚು ಅನುಭವ ಹೊಂದಿದ ಕಾರಣಕ್ಕೆ ಪದೇ ಪದೇ ನಾಸಾ ಸಂಸ್ಥೆ ಸುನಿತಾ ವಿಲಿಯಮ್ಸ್ ಅವರನ್ನೇ ಬಾಹ್ಯಾಕಾಶ ಅಧ್ಯಯನ ನಡೆಸಲು ಕಳುಹಿಸುತ್ತಿದೆ. ಆದರೆ ಇದೇ ಸಾಧನೆ ಸುನಿತಾ ವಿಲಿಯಮ್ಸ್ಗೆ ಸಂಕಷ್ಟ ತಂದಿದೆ!
ಹೌದು, ಸುನಿತಾ ವಿಲಿಯಮ್ಸ್ ನಾಸಾ ಸಂಸ್ಥೆಯ ಅತ್ಯಂತ ಹೆಚ್ಚು ಅನುಭವ ಹೊಂದಿರುವ ವಿಜ್ಞಾನಿಗಳ ಪೈಕಿ ಒಬ್ಬರು. ನಾಸಾ ಸಂಸ್ಥೆ ಕೂಡ ಅದೆಷ್ಟೋ ಯೋಜನೆಗಳಲ್ಲಿ ಗೆಲುವನ್ನು ಕಾಣಲು ಇದೇ ಸುನಿತಾ ವಿಲಿಯಮ್ಸ್ ಅವರ ಶ್ರಮ ಕಾರಣವಾಗಿತ್ತು. ಹೀಗಿದ್ದಾಗ ಮತ್ತೊಮ್ಮೆ ಮಹತ್ವದ ಯೋಜನೆಗೆ ಅಂತಾ ಸುನಿತಾ ವಿಲಿಯಮ್ಸ್ ಅವರು ತಮ್ಮ ಸಹೋದ್ಯೋಗಿ ಜೊತೆ ಬಾಹ್ಯಾಕಾಶಕ್ಕೆ ಹಾರಿದ್ದರು. ಕೆಲವೇ ದಿನಗಳಲ್ಲಿ ವಾಪಸ್ ಬರಬೇಕಿದ್ದ ಸುನಿತಾ ವಿಲಿಯಮ್ಸ್ ಅವರಿಗೆ ಇಲ್ಲೇ ನೋಡಿ ಸಂಕಷ್ಟ ಎದುರಾಗಿದ್ದು.

8 ದಿನಕ್ಕೆ ಅಂತಾ ಹೋಗಿದ್ದರು!
ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಒಟ್ಟಾಗಿ 2024ರ ಜೂನ್ 5 ರಂದು ಬೋಯಿಂಗ್ ಸ್ಟಾರ್ಲೈನರ್ ಬಾಹ್ಯಾಕಾಶ ನೌಕೆಯಲ್ಲಿ ಗಗನಕ್ಕೆ ಹಾರಿದ್ದರು. ಕೇವಲ 8 ದಿನಗಳ ಕಾಲ ಅಲ್ಲಿ ಉಳಿದು, ಕಾರ್ಯಾಚರೆಣೆ ನಡೆಸಲು ಪ್ಲಾನ್ ಮಾಡಲಾಗಿತ್ತು. ಆದರೆ ದಿಢಿರ್ ಅಂತಾ ತಾಂತ್ರಿಕ ಸಮಸ್ಯೆ ಎದುರಾಗಿ ಗಗನಯಾತ್ರಿಗಳನ್ನ ಬಾಹ್ಯಾಕಾಶದಲ್ಲಿಯೇ ಬಿಟ್ಟು ಸ್ಟಾರ್ಲೈನರ್ ಭೂಮಿಗೆ ಮರಳಿ ಬಂದಿತ್ತು. ಹೀಗಾಗಿ ಕಳೆದ 9 ತಿಂಗಳಿಂದ ಅಲ್ಲಿಯೇ ಸಿಲುಕಿ ಒದ್ದಾಡಿದ್ದರು ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಅವರು. ಇದೀಗ ಅವರನ್ನು ವಾಪಸ್ ಭೂಮಿಗೆ ಕರೆತರಲು ಅಂತಿಮ ಹಂತದ ಸಿದ್ಧತೆ ಸಾಗಿದೆ.
ಮಾರ್ಚ್ 19ಕ್ಕೆ ಭೂಮಿಗೆ ವಾಪಸ್
'ನಾಸಾ' ಸೇರಿ ಜಗತ್ತಿನ ದೊಡ್ಡ ದೊಡ್ಡ ಬಾಹ್ಯಾಕಾಶ ಸಂಸ್ಥೆಗಳ ವಿಜ್ಞಾನಿಗಳು ಸಮಸ್ಯೆ ಸರಿ ಮಾಡಲು ಪ್ರಯತ್ನಿಸಿದ್ದರು. ಇದೆಲ್ಲಾ ವರ್ಕೌಟ್ ಆಗದೇ ಕೊನೆಗೆ 'ಸ್ಪೇಸ್ ಎಕ್ಸ್' ನೌಕೆ ಇದೀಗ ಆಕಾಶಕ್ಕೆ ಹಾರಿದೆ. ಸ್ಪೇಸ್ ಎಕ್ಸ್ ಬಾಹ್ಯಾಕಾಶ ಸಂಸ್ಥೆಯ ಡ್ಯ್ರಾಗನ್ ನೌಕೆ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ಯಶಸ್ವಿಯಾಗಿ ತಲುಪಿದ್ದು, ಹಲವು ತಿಂಗಳಿಂದ ಕಾರ್ಯಾಚರಣೆಯನ್ನ ನಡೆಸಿದೆ. ಇದರ ಫಲವಾಗಿ ಮಾರ್ಚ್ 19 ರಂದು ಸುನಿತಾ ವಿಲಿಯಮ್ಸ್ & ಬುಚ್ ವಿಲ್ಮೋರ್ ಒಟ್ಟಾಗಿ ಭೂಮಿಗೆ ಬಂದು ಇಳಿಯಲಿದ್ದಾರೆ. ಈ ಮೂಲಕ ಬಾಹ್ಯಾಕಾಶ ಲೋಕದ ಹೊಸ ಕಗ್ಗಂಟು ಕೊನೆಯಾಗುವ ನಿರೀಕ್ಷೆ ಮೂಡಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ












Click it and Unblock the Notifications