ನಾಸಾ ಸೆರೆ ಹಿಡಿದ 'ವಿಕ್ರಮ್ ಲ್ಯಾಂಡರ್' ಅಪ್ಪಳಿಸಿದ ಸ್ಥಳದ ಚಿತ್ರ
Recommended Video
ನವದೆಹಲಿ, ಸೆಪ್ಟೆಂಬರ್ 27:ವಿಕ್ರಮ್ ಲ್ಯಾಂಡರ್ ಅಪ್ಪಳಿಸಿದೆ ಎನ್ನಲಾದ ಸ್ಥಳದ ಚಿತ್ರವನ್ನು ನಾಸಾದ ಲೂನಾರ್ ಆರ್ಬಿಟರ್ ಕಳುಹಿಸಿದೆ.
ಚಂದ್ರನ ದಕ್ಷಿಣ ಧ್ರುವದಲ್ಲಿ ಹಗುರವಾಗಿ ಇಳಿದು, ಅಧ್ಯಯನ ನಡೆಸಬೇಕಿದ್ದ ಚಂದ್ರಯಾನ 2 ಗಗನನೌಕೆಯ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲ್ಮೈಮೇಲೆ ಅಪ್ಪಳಿಸದೆ ಎನ್ನುವ ಮಾಹಿತಿ ಲಭ್ಯವಾಗಿತ್ತು.
ನಾಸಾದ ಲೂನಾರ್ ಆರ್ಬಿಟರ್ಗೆ ವಿಕ್ರಮ್ ಲ್ಯಾಂಡರ್ ಪತ್ತೆ ಯಾಕೆ ಸಾಧ್ಯವಾಗಿಲ್ಲ ಎಂಬುದಕ್ಕೆ ನಾಸಾ ಸ್ಪಷ್ಟನೆ ನೀಡಿದೆ.
ವಿಕ್ರಂ ಲ್ಯಾಂಡರ್ಗೆ ಕಠಿಣ ಲ್ಯಾಂಡಿಂಗ್ನಿಂದಲೇ ಸಮಸ್ಯೆಯಾಗಿದೆ. ವಿಕ್ರಮ್ ಲ್ಯಾಂಡರ್ ಇಳಿಯಬೇಕಾದ ನಿಗದಿತ ಸ್ಥಳದಲ್ಲಿ ಇಳಿದಿಲ್ಲ ಎಂದು ತಿಳಿಸಿದ್ದಾರೆ.
ನಾಸಾದಿಂದ ಲ್ಯಾಂಡರ್ ಇಳಿಯಬೇಕಿದ್ದ ಸ್ಥಳದ ಚಿತ್ರ ಬಿಡುಗಡೆ ಮಾಡಲಾಗಿದೆ. ಚಂದ್ರನ ದಕ್ಷಿಣ ಧ್ರುವದಲ್ಲಿ ನಿಗದಿತ ಸ್ಥಳದಲದಲ್ಲಿ ಲ್ಯಾಂಡರ್ ಇಳಿದಿಲ್ಲ. ನೆರಳು ಆವರಿಸಿಕೊಂಡಿರುವುದರಿಂದ ವಿಕ್ರಂ ಲ್ಯಾಂಡರ್ ಪತ್ತೆ ಸಾಧ್ಯವಾಗಿಲ್ಲ ಎಂದು ವಿಜ್ಞಾನಿಗಳು ತಿಳಿಸಿದ್ದಾರೆ.
ನಾಸಾದ ಲೂನಾರ್ ರೆಕಾನೈಸನ್ಸ್ ಆರ್ಬಿಟರ್ ಕ್ಯಾಮರಾದಲ್ಲಿ ಸೆರೆಯಾಗಿದೆ. ಸೆ.17ರಂದು ನಾಸಾ ಲೂನಾರ್ ಆರ್ಬಿಟರ್ ಚಿತ್ರವನ್ನು ಸೆರೆ ಹಿಡಿದು ರವಾನಿಸಿತ್ತು.
ವಿಕ್ರಮ್ ಲ್ಯಾಂಡರ್ ಪತ್ತೆಗೆ ಮತ್ತೆ ನಾಸಾ ವಿಜ್ಞಾನಿಗಳು ಪ್ರಯತ್ನ ಮುಂದುವರೆಸಿದ್ದಾರೆ.

ನೆರಳು ಸರಿದ ನಂತರ ಇನ್ನಷ್ಟು ಚಿತ್ರಗಳು ಲಭ್ಯ
ಹೆಚ್ಚು ನೆರಳು ಆವರಿಸಿಕೊಂಡಿರುವ ಕಾರಣ ವಿಕ್ರಮ್ ಲ್ಯಾಂಡರ್ ಪತ್ತೆ ಮಾಡಲು ನಾಸಾಗೆ ಸಾಧ್ಯವಾಗಿಲ್ಲ, ಆದರೆ ಅಕ್ಟೋಬರ್ನಲ್ಲಿ ನೆರಳು ಸರಿದ ಬಳಿಕ ಹೆಚ್ಚು ಚಿತ್ರಗಳನ್ನು ತೆಗೆದಯಲು ಸಾಧ್ಯವಾಗುವುದು ಎಂದು ನಾಸಾ ತಿಳಿಸಿದೆ.

ವಿಕ್ರಮ್ ಲ್ಯಾಂಡರ್ ಸೆ.6ರಂದು ಚಂದ್ರನ ದಕ್ಷಿಣ ಭಾಗದಲ್ಲಿ ಇಳಿಯಬೇಕಿತ್ತು
ವಿಕ್ರಮ್ ಲ್ಯಾಂಡರ್ ಸೆ.6 ರಂದು ಸಂಜೆ 4.24ಕ್ಕೆ ಚಂದ್ರನ ದಕ್ಷಿಣ ಭಾಗದಲ್ಲಿ ಇಳಿಯಬೇಕಿತ್ತು. ಆದರೆ ಕೊನೆಯ ಸಮಯದಲ್ಲಿ ವಿಕ್ರಮ್ ಲ್ಯಾಂಡ್ ಗೋಚರಿಸಲೇ ಇಲ್ಲ. ಬಳಿಕ ನಾಸಾವು ವಿಕ್ರಮ್ ಲ್ಯಾಂಡರ್ ಪತ್ತೆಗೆ ಲೂನಾರ್ ಆರ್ಬಿಟರ್ನ್ನು ಕಳುಹಿಸಿದೆ. ಅದು ಅಕ್ಟೋಬರ್ನಲ್ಲಿ ಇನ್ನಷ್ಟು ಮಾಹಿತಿಯನ್ನು ನೀಡಲಿದೆ.

ಏಳು ವರ್ಷಗಳ ಕಾಲ ಆರ್ಬಿಟರ್ ಕಾರ್ಯ ನಿರ್ವಹಿಸಲಿದೆ
ಆರ್ಬಿಟರ್ ಸುಮಾರು ಏಳು ವರ್ಷಗಳ ಕಾಲ ಕಾರ್ಯ ನಿರ್ವಹಿಸಲಿದ್ದು, ಪೇಲೋಡ್ ಆಪರೇಶನ್ ಗಳೂ ಯಶಸ್ವಿಯಾಗಿ ನಡೆಯುತ್ತಿವೆ. ಆದರೆ ಲ್ಯಾಂಡರ್ ಕಡೆಯಿಂದ ಯಾವುದೇ ಸಿಗ್ನಲ್ ಲಭ್ಯವಾಗಿಲ್ಲ. ಲ್ಯಾಂಡರ್ ಸಂಪರ್ಕ ಕಡಿತಕ್ಕೆ ಕಾರಣವೇನು ಎಂಬ ಬಗ್ಗೆ ಈ ಸಮಿತಿ ವರದಿ ನೀಡಲಿದೆ. ನಾವು ಈಗ ಇಸ್ರೋದ ಭವಿಷ್ಯದ ಬಾಹ್ಯಾಕಾಶ ಯೋಜನೆಗಳ ಬಗ್ಗೆ ತಯಾರಿ ನಡೆಸುತ್ತಿದ್ದೇವೆ ಎಂದು ಶಿವನ್ ತಿಳಿಸಿದ್ದಾರೆ.

ಚಂದ್ರಯಾನ ಶೇ.98ರಷ್ಟು ಯಶಸ್ವಿ
ಚಂದ್ರಯಾನ 2 ಬಹುಪಾಲು ಯಶಸ್ಇಯಾಗಿದೆ, ಅಂತ್ಯದಲ್ಲಿ ಲ್ಯಾಂಡರ್ ಸಂಪರ್ಕ ಕಳೆದುಕೊಂಡರೂ ಶೇ.98 ರಷ್ಟು ಯಶಸ್ವಿಯಾಗಿದೆ ಎಂದು ಇಸ್ರೋ ಹೇಳಿದೆ. ಆರ್ಬಿಟರ್ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಚಂದ್ರನ ದಕ್ಷಿಣ ಧ್ರುವದ ಕುರಿತು ಅದೇ ಅಗತ್ಯ ಮಾಹಿತಿಗಳನ್ನು ನೀಡಲಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications