ನಾಸಿಕ್ ಕುಂಭಮೇಳಕ್ಕೆ ರಾಧೇ ಮಾಗೆ ಪ್ರವೇಶ ನಿಷೇಧ!
ಮುಂಬೈ, ಆಗಸ್ಟ್ 05: ಅಸಾರಾಮ್ ಬಾಪು ಸೇರಿದಂತೆ ಹಲವಾರು ಸ್ವಯಂ ಘೋಷಿತ ಬಾಬಾಗಳನ್ನು ಧಾರ್ಮಿಕ ಮೇಳಗಳಿಂದ ನಿಷೇಧಿಸಿರುವುದು ಎಲ್ಲರಿಗೂ ಗೊತ್ತೇ ಇದೆ. ಈಗ ಈ ಸಾಲಿಗೆ ಮತ್ತಿಬ್ಬರು ಸೇರ್ಪಡೆಯಾಗಿದ್ದಾರೆ.
ಭಾರತದಲ್ಲಿ ದೇವಮಾನವ ಸಂಖ್ಯೆಗೇನು ಕಡಿಮೆಯಿಲ್ಲ, ಇತ್ತೀಚೆಗೆ ದೇವಮಹಿಳೆಯರ ಸಂಖ್ಯೆಯೂ ಹೆಚ್ಚುತ್ತಿದೆ. ಭಕ್ತರ ಇಷ್ಟಾರ್ಥಗಳನ್ನು ದೇವರಿಗೆ ನೇರವಾಗಿ ತಲುಪಿಸುವ ಏಜೆಂಟ್ ಗಳಿಗೆ ಕಡಿವಾಣ ಹಾಕಿದರೂ ಋತು ಬದಲಾದಂತೆ ನಾಯಿಕೊಡೆಗಳಂತೆ ಮೇಲೇಳುತ್ತಿರುತ್ತಾರೆ. ಇಂಥವರಿಂದ ಪ್ರಾಮಾಣಿಕ ಸಂತ, ಸನ್ಯಾಸಿಗಳ ಮಾನವೂ ಹಾನಿಯಾಗುತ್ತಿರುವುದು ಸುಳ್ಳಲ್ಲ. ಇಷ್ಟೆಲ್ಲ ಪೀಠಿಕೆ ಹೇಳಲು ಕಾರಣ ರಾಧೇ ಮಾ. [ಚಿತ್ರಗಳಲ್ಲಿ: ಅಸಾರಮ್ ಬಾಪು 10 ವಿವಾದಗಳು]
ಸ್ವಯಂಘೋಷಿತ ದೇವ ಮಾನವರ ಸಾಲಿಗೆ ಸೇರ್ಪಡೆಗೊಂಡಿರುವ ರಾಧೇ ಮಾ ಹಾಗೂ ಬಿಲ್ಡರ್ ಬಾಬಾಗೆ ನಾಸಿಕ್ ಕುಂಭಮೇಳದಿಂದ ನಿಷೇಧ ಹೇರಲಾಗಿದೆ. ರಾಧೇ ಮಾ ಅವರ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್ ಬುಕ್ ಆಗಿದೆ. ಬಿಲ್ಡರ್ ಬಾಬಾ ಸಚ್ಚಿದಾನಂದ್ ಗಿರಿ ಅವರು ಮದ್ಯಮಾರಾಟ ಹಗರಣ ಹಾಗೂ ಕ್ರಿಮಿನಲ್ ಚಟುವಟಿಕೆಯಲ್ಲಿ ತೊಡಗಿದ ಆರೋಪ ಹೊತ್ತಿದ್ದಾರೆ.

ದೆಹಲಿ ಎನ್ ಸಿಆರ್ ಪ್ರದೇಶದಲ್ಲಿ ಬಿಯರ್ ಬಾರ್ ಹೊಂದಿದ್ದ ಸಚಿನ್ ದತ್ತಾ ಈಗ ಸಚ್ಚಿದಾನಂದ ಗಿರಿ ಎನಿಸಿಕೊಂಡಿದ್ದಾರೆ. ಪಂಜಾಬ್ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ಅವರ ವಿರುದ್ಧ ವಿವಿಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಫ್ ಐಆರ್ ದಾಖಲಾಗಿದೆ.
ಇನ್ನೊಂದೆಡೆ ರಾಧೇ ಮಾ ಅವರು ವರದಕ್ಷಿಣೆಗಾಗಿ ಸೊಸೆಯೊಬ್ಬರಿಗೆ ಕಿರುಕುಳ ನೀಡುತ್ತಿರುವ ಅತ್ತೆಗೆ ಸಹಾಯ ಮಾಡಿದ ಆರೋಪ ಹೊತ್ತಿದ್ದಾರೆ. ಇದಲ್ಲದೆ ಸತ್ಸಂಗದ ವೇಳೆ ಬಾಲಿವುಡ್ ಹಾಡುಗಳಿಗೆ ಅಶ್ಲೀಲವಾಗಿ ನೃತ್ಯ ಮಾಡಿದ ಅಪಕೀರ್ತಿಯೂ ರಾಧೇ ಮಾ ಮೇಲಿದೆ. [ವಿವಾದದಲ್ಲೇ ಮುಳುಗೆದ್ದ ಟಾಪ್ 10 'ದೇವಮಾನವರು']
ಇಷ್ಟೆಲ್ಲ ಆರೋಪವಿರುವ ಕಾರಣ ರಾಧೇ ಮಾ ಹಾಗೂ ಸಚ್ಚಿದಾನಂದ ಗಿರಿ ಅವರ ಮೇಲೆ ನಿಷೇಧ ಹೇರಲಾಗಿದೆ ಎಂದು ಅಖಿಲ ಭಾರತೀಯ ಅಖಾರ ಪರಿಷತ್ ಹೇಳಿದೆ.
ನಾಸಿಕ್ ತ್ರಯಂಬಕೇಶ್ವರ್ ನಲ್ಲಿ ಕುಂಭಮೇಳ ಮಾಘ ಮಾಸದಲ್ಲಿ ನಡೆಯಲಿದೆ. ಹರಿದ್ವಾರ, ಅಲಹಾಬಾದಿನ ಪ್ರಯಾಗ ಹಾಗೂ ಉಜ್ಜಯಿನಿಗಳಲ್ಲೂ ಕುಂಭಮೇಳ ಆಯೋಜನೆಗೊಂಡಿದೆ.
-
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ












Click it and Unblock the Notifications