ಹಿಂದೂ ಮಹಾಸಭಾದಿಂದ ನಾಥೂರಾಂ ಗೋಡ್ಸೆ ವೆಬ್ಸೈಟ್ ಅನಾವರಣ
ಮೀರಠ್, ನಾಗ್ಪುರ, ನ 16: ರಾಷ್ಟ್ರಪಿತ ಮಹಾತ್ಮ ಗಾಂಧಿಯನ್ನು ಗುಂಡಿಟ್ಟು ಹತ್ಯೆಗೈದಿದ್ದ ನಾಥೂರಾಮ್ ಗೋಡ್ಸೆಯನ್ನು ಗಲ್ಲಿಗೇರಿಸಿದ ದಿನದಂದು ಗೋಡ್ಸೆ ಹೆಸರಿನಲ್ಲಿ ವೆಬ್ಸೈಟ್ ಬಿಡುಗಡೆ ಮಾಡುವ ಮೂಲಕ ಅಖಿಲ ಭಾರತ ಹಿಂದೂ ಮಹಾಸಭಾ ಕೆಲವರ ಕೆಂಗಣ್ಣಿಗೆ ಗುರಿಯಾಗಿದೆ.
ಗೋಡ್ಸೆಯನ್ನು ಗಲ್ಲಿಗೇರಿಸಿದ ದಿನವಾದ ಭಾನುವಾರ ನವೆಂಬರ್ 15ರ ದಿನವನ್ನು ಹಿಂದೂ ಮಹಾಸಭಾ ಬಲಿದಾನ ದಿವಸವನ್ನಾಗಿ ಆಚರಣೆಮಾಡಿದೆ. ಮತ್ತು ನಾಥೂರಾಮ್ ಗೋಡ್ಸೆ ಹೆಸರಿನಲ್ಲಿ ವೆಬ್ ಸೈಟ್ವೊಂದನ್ನು (www.nathuramgodse.in) ಸಹ ಬಿಡುಗಡೆ ಮಾಡಿದೆ.
ನಾಥೂರಾಮ್ ಗೋಡ್ಸೆ ಸಮಾಜದಲ್ಲಿ ಮಾಡಿರುವ ಉತ್ತಮ ಕೆಲಸಗಳನ್ನು ಸಾರ್ವಜನಿಕರಿಗೆ ತಲುಪಿಸುವ ಸಲುವಾಗಿ "ನಾಥೂರಾಮ್ ಗೋಡ್ಸೆ- ದ ರಿಯಲ್ ಫರ್ಗಾಟನ್ ಹೀರೋ ಆಫ್ ಭಾರತ್ " ಎಂಬ ಹೆಸರಿನಲ್ಲಿ ವೆಬ್ ಸೈಟ್ ಆರಂಭಿಸಲಾಗಿದೆ. (ಕರ್ನಾಟಕ ಸೇರಿ ದೇಶದೆಲ್ಲೆಡೆ ಗೋಡ್ಸೆ ಪ್ರತಿಮೆ ಸ್ಥಾಪನೆ)

ಇದಕ್ಕಾಗಿ ಆರು ಸದಸ್ಯರ ಐಟಿ ತಂಡ ಕೆಲಸ ಮಾಡಲಿದೆ. ಬಲಿದಾನ ದಿನಾಚರಣೆಯ ಅಂಗವಾಗಿ ಸದಸ್ಯರು ದೇಶದ ವಿವಿದೆಡೆ ಇರುವ 120 ಕಚೇರಿಗಳಲ್ಲಿ ಕಾರ್ಯಕ್ರಮವನ್ನ ನಡೆಸಿದ್ದಾರೆಂದು ಮಹಾಸಭಾ ಸಮಿತಿಯು ತಿಳಿಸಿದೆ.
ಗೋಡ್ಸೆ ಒಬ್ಬ ನರಹಂತಕ, ಸಮಾಜ ಘಾತುಕ ಆತನನ್ನು ಗೌರವಿಸುವುದು, ಸನ್ಮಾನಿಸುವುದು, ಗೋಡ್ಸೆ ಶೌರ್ಯ ದಿನವನ್ನಾಗಿ ಆಚರಿಸುವುದಕ್ಕೆ ನಮ್ಮ ವಿರೋಧವಿದೆ ಎಂದು RSSನ ಹಿರಿಯ ನಾಯಕ ಎಂ ಜಿ ವೈದ್ಯ ಹೇಳಿದ್ದಾರೆ.
ಗೋಡ್ಸೆಯನ್ನು ಗೌರವಿಸುವುದು, ಗಾಂಧಿಯನ್ನು ಕೊಂದಾತನಿಗೆ ಮರ್ಯಾದೆ ಕೊಡುವುದಕ್ಕೆ ನಮ್ಮ ಸಮ್ಮತವಿಲ್ಲ. ಕೊಲ್ಲುವ ಅಧಿಕಾರ ಯಾರಿಗೂ ಇಲ್ಲ, ಹಾಗಾಗಿ ಗೋಡ್ಸೆ ಕೃತ್ಯ ಸರಿಯಾದುದಲ್ಲ ಎಂದು ವೈದ್ಯ ಸ್ಪಷ್ಟ ಪಡಿಸಿದ್ದಾರೆ.
ಗೋಡ್ಸೆ ವೆಬ್ಸೈಟ್ ವಿಳಾಸಕ್ಕೆ ಇಲ್ಲಿ ಕ್ಲಿಕ್ಕಿಸಿ
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications