ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯ
ಸುಪ್ರೀಂಕೋರ್ಟ್ ಆದೇಶದಂತೆ ಇನ್ಮುಂದೆ ಚಿತ್ರಮಂದಿರಗಳಲ್ಲಿ ಚಿತ್ರ ಆರಂಭಕ್ಕೂ ಮುನ್ನ ರಾಷ್ಟ್ರಧ್ವಜ ಪ್ರದರ್ಶಿಸಬೇಕು ಹಾಗೂ ರಾಷ್ಟ್ರಗೀತೆ ಮೊಳಗಿಸಿ ಗೌರವ ಸಲ್ಲಿಸಬೇಕಿದೆ,.
ನವದೆಹಲಿ, ನವೆಂಬರ್ 30: ದೇಶದ ಎಲ್ಲಾ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ, ರಾಷ್ಟ್ರಧ್ವಜ ಪ್ರದರ್ಶನ ಕಡ್ಡಾಯಗೊಳಿಸಿ ಸುಪ್ರೀಂಕೋರ್ಟ್ ಬುಧವಾರ(ನವೆಂಬರ್ 30) ಮಹತ್ವದ ಆದೇಶ ಹೊರಡಿಸಿದೆ.
ಸುಪ್ರೀಂಕೋರ್ಟ್ ಆದೇಶದಂತೆ ಇನ್ಮುಂದೆ ಚಿತ್ರಮಂದಿರಗಳಲ್ಲಿ ಚಿತ್ರ ಆರಂಭಕ್ಕೂ ಮುನ್ನ ರಾಷ್ಟ್ರಧ್ವಜ ಪ್ರದರ್ಶಿಸಬೇಕು ಹಾಗೂ ರಾಷ್ಟ್ರಗೀತೆ ಮೊಳಗಿಸಿ ಗೌರವ ಸಲ್ಲಿಸಬೇಕಿದೆ. [ರಾಷ್ಟ್ರಗೀತೆಯನ್ನು ಸುತ್ತಿಕೊಂಡಿರುವ ವಿವಾದಗಳು?]

ರಾಷ್ಟ್ರಗೀತೆ ಜನ ಗಣ ಮನ ಮೊಳಗುವ ಸಂದರ್ಭದಲ್ಲಿ ಚಿತ್ರಮಂದಿರದಲ್ಲಿರುವ ಎಲ್ಲರೂ ಎದ್ದು ನಿಂತು ಗೌರವ ಸಲ್ಲಿಸಬೇಕು. ಈ ಕುರಿತಂತೆ ಕೇಂದ್ರ ಸರ್ಕಾರ ಕೂಡಲೇ ಅಧಿಸೂಚನೆ ಹೊರಡಿಸುವಂತೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ.[ಮುಸ್ಲಿಂ ಕುಟುಂಬವನ್ನು ಪಿವಿಆರ್ ನಿಂದ ಹೊರ ಹಾಕಿದ್ದೇಕೆ?]
ಎಲ್ಲಾ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಈ ಬಗ್ಗೆ ಸೂಚನೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ. ಈ ಅಧಿಸೂಚನೆಯನ್ನು ಮುದ್ರಣ ಹಾಗೂ ಇಲೆಕ್ಟ್ರಾನಿಕ್ ಮಾಧ್ಯಮಗಳಲ್ಲಿ ಪ್ರಕಟಿಸತಕ್ಕದ್ದು ಎಂದು ಸುಪ್ರೀಂಕೋರ್ಟ್ ನ್ಯಾ. ದೀಪಕ್ ಮಿಶ್ರಾ ಅವರು ತಮ್ಮ ಆದೇಶದಲ್ಲಿ ಹೇಳಿದ್ದಾರೆ. [ರಾಷ್ಟ್ರಗೀತೆಯನ್ನು ಸುತ್ತಿಕೊಂಡಿರುವ ವಿವಾದ ಒಂದೆ ಎರಡೆ?]
ರಾಷ್ಟ್ರಗೀತೆಯನ್ನು ಮೊಟಕುಗೊಳಿಸುವಂತಿಲ್ಲ, ಪೂರ್ಣಗೀತೆಯನ್ನು ಹಾಕಬೇಕು ಹಾಗೂ ವಾಣಿಜ್ಯ ಉದ್ದೇಶಕ್ಕಾಗಿ ಬಳಕೆ ಮಾಡುವಂತಿಲ್ಲ. ಒಂದೇ ರಾಷ್ಟ್ರದಲ್ಲಿ ನೆಲೆಸಿದ್ದೇವೆ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯ ಎಂಬ ಭಾವನೆ ಜನರಲ್ಲಿ ಮೂಡಬೇಕಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. (ಒನ್ಇಂಡಿಯಾ ಸುದ್ದಿ)
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications