ಗೂಢಲಿಪಿ ಕಾಯ್ಡೆ ಕರಡು ಹಿಂಪಡೆದ ಮೋದಿ ಸರ್ಕಾರ
ನವದೆಹಲಿ, ಸೆ.22: ರಾಷ್ಟ್ರೀಯ ಗೂಢಲಿಪಿ ಕಾಯ್ದೆ(National Encryption Policy) ಕರಡನ್ನು ವಾಪಸ್ ಪಡೆಯಲು ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಮಂಗಳವಾರ ನಿರ್ಧರಿಸಲಾಗಿದೆ. ಸಾಮಾಜಿಕ ಜಾಲ ತಾಣಗಳಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸರ್ಕಾರ ಎಂದಿಗೂ ಅಡ್ಡಿ ಬರುವುದಿಲ್ಲ ಎಂದು ಕೇಂದ್ರ ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಹಲವಾರು ವಿವಾದಾತ್ಮಕ ಅಂಶಗಳನ್ನು ಒಳಗೊಂಡಿದ್ದ ರಾಷ್ಟ್ರೀಯ ಗೂಢಲಿಪಿ ಕಾಯ್ದೆಯ ಕರಡು ಪ್ರತಿಯನ್ನು ತಿದ್ದುಪಡಿ ಮಾಡಿಕೊಂಡು ಮತ್ತೊಂದು ಬಗೆಯಲ್ಲಿ ಜಾರಿಗೊಳಿಸುವ ಸುಳಿವು ಕೂಡಾ ಸಿಕ್ಕಿದೆ.
ಅದರೆ, ಯಾವುದೇ ಕಾರಣಕ್ಕೂ ಜನಪ್ರಿಯ ಸಾಮಾಜಿಕ ಜಾಲ ತಾಣಗಳಾದ ವಾಟ್ಸಪ್, ಜೀ ಮೇಲ್, ಫೇಸ್ ಬುಕ್, ಟ್ವಿಟ್ಟರ್, ವೀಚಾಟ್ ಮುಂತಾದವುಗಳನ್ನು ಬಳಸುವ ಸಾರ್ವಜನಿಕರ ಸ್ವಾತಂತ್ರ್ಯ ಹರಣವಾಗುವುದಿಲ್ಲ ಎಂಬ ಭರವಸೆಯಂತೂ ಸಿಕ್ಕಿದೆ. [ನಿಯಮ ಜಾರಿಗೊಂಡರೆ ಏನಾಗಲಿದೆ?]
ಎಲೆಕ್ಟ್ರಾನಿಕ್ಸ್ ಹಾಗೂ ಮಾಹಿತಿ ತಂತ್ರಜ್ಞಾನ ಇಲಾಖೆ ಸಲ್ಲಿಸಿರುವ ಪ್ರಸ್ತಾವನೆ ಆಧಾರದ ಮೇಲೆ ಹೊಸ ಗೂಢಲಿಪಿ ಕಾಯ್ದೆ (ನ್ಯಾಷನಲ್ ಎನ್ಕ್ರಿಪ್ಷನ್ ಪಾಲಿಸಿ) ಜಾರಿಗೆ ತರಲು ಮೋದಿ ಸರ್ಕಾರ ಮುಂದಾಗಿತ್ತು.

ಇತ್ತೀಚಿನ ದಿನಗಳಲ್ಲಿ ಆನ್ಲೈನ್ ವಹಿವಾಟು ಹೆಚ್ಚಾಗುತ್ತಿದೆ. ಜತೆಗೆ ಸೈಬರ್ ಅಪರಾಧಗಳು ಕೂಡ ಹೆಚ್ಚಾಗುತ್ತಿವೆ. ಈ ಕಾರಣದಿಂದಾಗಿ ಅವುಗಳನ್ನು ನಿಯಂತ್ರಿಸಲು ಒಂದು ಕಾಯ್ದೆ ರೂಪಿಸಲು ಸರ್ಕಾರ ಮುಂದಾಗಿತ್ತು. ಜೊತೆಗೆ ಗೂಢಲಿಪಿ ಬಳಸುವ ಎಲ್ಲಾ ಸಂದೇಶಗಳನ್ನು 90 ದಿನ ಕಾಯ್ದಿಟ್ಟುಕೊಳ್ಳುವುದು ಕಡ್ಡಾಯಗೊಳಿಸಲಾಗುತ್ತಿದೆ ಎಂದು ಕಾಯ್ದೆಯ ಕರಡು ಪ್ರತಿಯಲ್ಲಿ ತಿಳಿಸಲಾಗಿತ್ತು.
ಸಾರ್ವಜನಿಕರ ಖಾಸಗಿತನಕ್ಕೆ ಬೆಲೆ ನೀಡುತ್ತೇವೆ. ಸಾಮಾಜಿಕ ಜಾಲ ತಾಣಗಳ ಸದ್ಬಳಕೆ ಬಗ್ಗೆ ಪ್ರಧಾನಿ ಮೋದಿ ಅವರೇ ಮಾದರಿಯಾಗಿದ್ದಾರೆ.
ಪ್ರಸ್ತುತ ಕಾಯ್ದೆಯ ಕರಡಿನಲ್ಲಿರುವ ಹಲವಾರು ಅಂಶಗಳನ್ನು ತಪ್ಪಾಗಿ ಅರ್ಥೈಸಿಕೊಳ್ಳಲಾಗುತ್ತಿದೆ. ಈ ಕಾರಣದಿಂದಾಗಿ ಅದನ್ನು ವಾಪಸು ಪಡೆಯುವಂತೆ ಸಲಹೆ ನೀಡಿದೆ ಎಂದು ಸಚಿವ ರವಿಶಂಕರ್ ಪ್ರಸಾದ್ ಹೇಳಿದ್ದಾರೆ.
ಭಾರತದ ಹೊರಗಿನಿಂದ ಗೂಢಲಿಪಿ ಬಳಕೆ ಮಾಡಿ ಕಾರ್ಯನಿರ್ವಹಿಸುತ್ತಿರುವ ಸಂದೇಶವಾಹಕ ಸಂಸ್ಥೆಗಳೂ ಭಾರತದಲ್ಲಿ ಕಾರ್ಯಾಚರಣೆ ಪ್ರಾರಂಭಿಸುವ ಮುನ್ನ ನೋಂದಣಿ ಮಾಡಿಸಿಕೊಳ್ಳುವುದು ಕಡ್ಡಾಯವಾಗಿತ್ತು. ಆದರೆ, ಈ ನಿಯಮಕ್ಕೆ ಅನೇಕ ಸಂಸ್ಥೆಗಳು ಒಪ್ಪದ ಕಾರಣ ಕರಡು ಹಿಂಪಡೆಯುವುದು ಅನಿವಾರ್ಯ ಎಂದು ಸೈಬರ್ ಕಾನೂನು ತಜ್ಞ ಪವನ್ ದುಗ್ಗಾಲ್ ಅವರು ಅಭಿಪ್ರಾಯಪಟ್ಟಿದ್ದಾರೆ. (ಒನ್ ಇಂಡಿಯಾ ಸುದ್ದಿ)
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications