ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆ: ರೆಡ್ ಅಲರ್ಟ್ ಘೋಷಣೆ, ಕೊಚ್ಚಿ ಹೋದ ರಾಷ್ಟ್ರೀಯ ಹೆದ್ದಾರಿ
ನವದೆಹಲಿ, ಜುಲೈ. 09: ದೆಹಲಿ, ಹರಿಯಾಣ, ಚಂಡೀಗಢ, ಪಂಜಾಬ್, ರಾಜಸ್ಥಾನ ಮತ್ತು ಉತ್ತರ ಪ್ರದೇಶ ಸೇರಿದಂತೆ ದೇಶದ ಹಲವು ಭಾಗಗಳಲ್ಲಿ ಜುಲೈ 9 ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಿಮಾಚಲ ಪ್ರದೇಶದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆಯಾಗಿದೆ.
ಮಳೆಯಿಂದಾಗಿ ಭೂಕುಸಿತ ಮತ್ತು ಹಠಾತ್ ಪ್ರವಾಹಗಳಿಂದ ಶಿಮ್ಲಾ, ಸಿರ್ಮೌರ್, ಲಾಹೌಲ್ ಮತ್ತು ಸ್ಪಿತಿ, ಚಂಬಾ ಮತ್ತು ಸೋಲನ್ನಲ್ಲಿ ಹಲವಾರು ರಸ್ತೆಗಳು ಬಂದ್ ಆಗಿವೆ. ಹಿಮಾಚಲ ಪ್ರದೇಶದ ಏಳು ಜಿಲ್ಲೆಗಳಿಗೆ ರೆಡ್ ಅಲರ್ಟ್ ನೀಡಿದೆ. ಕಂಗ್ರಾ, ಚಂಬಾ, ಶಿಮ್ಲಾ, ಮಂಡಿ, ಕುಲು, ಸಿರ್ಮೌರ್, ಸೋಲನ್ ಮತ್ತು ಉನಾ ಜಿಲ್ಲೆಗಳ ಜಲಮೂಲಗಳಲ್ಲಿ ಹಠಾತ್ ಪ್ರವಾಹದ ಸಾಧ್ಯತೆಯ ಬಗ್ಗೆ ಮತ್ತು ತಗ್ಗು ಮತ್ತು ಮಧ್ಯದ ಬೆಟ್ಟಗಳಲ್ಲಿ ನೀರು, ವಿದ್ಯುತ್ ಮತ್ತು ಸಂಪರ್ಕ ಸೌಲಭ್ಯಗಳ ಅಡಚಣೆಯ ಬಗ್ಗೆ ಹವಾಮಾನ ಕಚೇರಿ ಎಚ್ಚರಿಕೆ ನೀಡಿದೆ.

ಅತ್ಯಂತ ಭಾರೀ ಮಳೆಯ 'ಕೆಂಪು' ಎಚ್ಚರಿಕೆಯು ಒಂದು ದಿನದಲ್ಲಿ 204 ಮಿಲಿಮೀಟರ್ಗಿಂತಲೂ ಹೆಚ್ಚು ಮಳೆಯಾಗುವ ಸಾಧ್ಯತೆಯನ್ನು ಸೂಚಿಸುತ್ತದೆ. ಜುಲೈ 8 ಮತ್ತು 9 ಕ್ಕೆ ಶಿಮ್ಲಾ, ಸಿರ್ಮೌರ್, ಸೋಲನ್ ಮತ್ತು ಲಾಹೌಲ್ ಮತ್ತು ಸ್ಪಿತಿಯಲ್ಲಿ ಭಾರೀ ಮಳೆಯಿಂದ ಅತಿ ಹೆಚ್ಚು ಮಳೆಯಾಗುವ 'ಆರೆಂಜ್' ಎಚ್ಚರಿಕೆಯನ್ನು ಸಹ ನೀಡಲಾಗಿದೆ. ಜುಲೈ 13 ರವರೆಗೆ ರಾಜ್ಯದಲ್ಲಿ ಮಳೆಯಾಗುವ ಹವಾಮಾನ ಮುನ್ಸೂಚನೆ ನೀಡಿದೆ.
ಶಿಮ್ಲಾ ಜಿಲ್ಲೆಯ ಕೋಟ್ಗಢ್ ಪ್ರದೇಶದಲ್ಲಿ ಮಳೆಯಿಂದಾಗಿ ಭೂಕುಸಿತದ ನಂತರ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಮೃತರನ್ನು ಅನಿಲ್, ಅವರ ಪತ್ನಿ ಕಿರಣ್ ಮತ್ತು ಪುತ್ರ ಸ್ವಪ್ನಿಲ್ ಎಂದು ಗುರುತಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಭೂಕುಸಿತದಿಂದ ಕುಲು ಪಟ್ಟಣದ ಸಮೀಪ ತಾತ್ಕಾಲಿಕ ಮನೆಗೂ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
ಮತ್ತೊಂದು ಘಟನೆಯಲ್ಲಿ, ಚಂಬಾದ ಕಟಿಯಾನ್ ತೆಹ್ಸಿಲ್ನಲ್ಲಿ ರಾತ್ರಿ ಭೂಕುಸಿತದ ನಂತರ ವ್ಯಕ್ತಿಯೊಬ್ಬರು ಜೀವಂತ ಸಮಾಧಿಯಾಗಿದ್ದಾರೆ. ರಾಜ್ಯ ತುರ್ತು ಕಾರ್ಯಾಚರಣೆ ಕೇಂದ್ರದ ಪ್ರಕಾರ, ಕಳೆದ 36 ಗಂಟೆಗಳಲ್ಲಿ ರಾಜ್ಯದಲ್ಲಿ 13 ಭೂಕುಸಿತಗಳು ಮತ್ತು ಒಂಬತ್ತು ಹಠಾತ್ ಪ್ರವಾಹಗಳು ವರದಿಯಾಗಿವೆ. ಭಾನುವಾರ ಬೆಳಗ್ಗೆ 1,743 ಟ್ರಾನ್ಸ್ಫಾರ್ಮರ್ಗಳು ಮತ್ತು 138 ನೀರು ಸರಬರಾಜು ಯೋಜನೆಗಳು ಹಾನಿಗೊಳಗಾಗಿದ್ದು, 736 ರಸ್ತೆಗಳನ್ನು ಸಂಚಾರಕ್ಕೆ ಮುಚ್ಚಲಾಗಿದೆ.

ಜಮ್ಮುವಿನ ಎರಡು ಜಿಲ್ಲೆಗಳಿಗೆ ಪ್ರವಾಹದ ಎಚ್ಚರಿಕೆ
ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ಸಾಂಬಾ ಜಿಲ್ಲೆಗಳಿಗೆ ಪ್ರವಾಹದ ಎಚ್ಚರಿಕೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕಥುವಾ ಮತ್ತು ಸಾಂಬಾ ಜಿಲ್ಲೆಗಳು ಮತ್ತು ಕಡಿಮೆ ಜಲಾನಯನ ಪ್ರದೇಶಗಳಿಗೆ ಭಾನುವಾರ ಸತತ ಮೂರನೇ ದಿನವೂ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
ಇಂದು ಬೆಳಗ್ಗೆ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟ ಅಪಾಯದ ಗಡಿ ದಾಟುತ್ತಿರುವ ಬಗ್ಗೆ ವಿವಿಧ ಪ್ರದೇಶಗಳಿಂದ ವರದಿಗಳು ಬಂದಿದ್ದರಿಂದ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಮುಂದಿನ 24 ಗಂಟೆಗಳಲ್ಲಿ ಎಲ್ಲರು ಎಚ್ಚರದಿಂದ ಇರುವಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
21 ವರ್ಷಗಳಲ್ಲೇ ದೆಹಲಿಯಲ್ಲಿ ಜುಲೈನಲ್ಲಿ ಅತಿ ಹೆಚ್ಚು ಮಳೆ
ದೆಹಲಿಯು 1982 ರಿಂದ ಜುಲೈನಲ್ಲಿ ಅತಿ ಹೆಚ್ಚು ಏಕದಿನ ಮಳೆಯನ್ನು ದಾಖಲಿಸಿದೆ. ಭಾನುವಾರದಂದು 8:30 ಕ್ಕೆ ಕೊನೆಗೊಂಡ 24 ಗಂಟೆಗಳಲ್ಲಿ ದೆಹಲಿಯಲ್ಲಿ 153 ಮಿಮೀ ಮಳೆ ದಾಖಲಾಗಿದೆ. ಇದು 1982 ರಿಂದ ಜುಲೈನಲ್ಲಿ ಒಂದೇ ದಿನದಲ್ಲಿ ಅತಿ ಹೆಚ್ಚು ಎಂದು ಐಎಂಡಿ ತಿಳಿಸಿದೆ. ಮಾನ್ಸೂನ್ ಮಾರುತಗಳ ನಡುವಿನ ಪರಸ್ಪರ ಕ್ರಿಯೆಯಿಂದಾಗಿ ದೆಹಲಿ ಸೇರಿದಂತೆ ವಾಯುವ್ಯ ಭಾರತದ ಮೇಲೆ ತೀವ್ರವಾದ ಮಳೆಯಾಗಲಿದೆ.
ರಾಜಸ್ಥಾನದಲ್ಲಿ ಭಾರೀ ಮಳೆ
ಐಎಂಡಿ ವರದಿಯಂತೆ ವಾಯುವ್ಯ ಭಾರತದ ಹಲವಾರು ಭಾಗಗಳಲ್ಲಿ ಶನಿವಾರ ತೀವ್ರ ಮಳೆಯಾಗಿದೆ. ರಾಜಸ್ಥಾನದ ಹಲವು ಜಿಲ್ಲೆಗಳಲ್ಲಿ ಮಳೆ ಸುರಿದಿದ್ದು, 24 ಗಂಟೆಗಳ ಅವಧಿಯಲ್ಲಿ ಪ್ರತ್ಯೇಕ ಘಟನೆಗಳಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ತೋರ್ಗಢದಲ್ಲಿ ಸಿಡಿಲು ಬಡಿದು ಮಹಿಳೆ ಮತ್ತು ಪುರುಷ ಮೃತಪಟ್ಟರೆ, ಸವಾಯಿ ಮಾಧೋಪುರದಲ್ಲಿ ಇಬ್ಬರು ವ್ಯಕ್ತಿಗಳು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಪೂರ್ವ ಭಾಗದಲ್ಲಿ ಭಾರೀ ಮಳೆಯಾಗಲಿದ್ದು, ಪಶ್ಚಿಮ ಭಾಗದಲ್ಲಿ ಸಾಧಾರಣದಿಂದ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ. ಪಂಜಾಬ್ ಮತ್ತು ಹರಿಯಾಣದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಹರಿಯಾಣದ ಪಂಚಕುಲ, ಯಮುನಾನಗರ, ಅಂಬಾಲಾ, ಕರ್ನಾಲ್, ಕುರುಕ್ಷೇತ್ರ, ಸೋನಿಪತ್ ಸೇರಿದಂತೆ ಇತರೆಡೆ ಸತತ ಎರಡನೇ ದಿನವೂ ಮಳೆ ಸುರಿದಿದ್ದು, ಪಂಜಾಬ್ನ ಫತೇಘರ್ ಸಾಹಿಬ್, ಮೊಹಾಲಿ, ರೂಪನಗರ ಮತ್ತು ಪಟಿಯಾಲದಲ್ಲಿಯೂ ಭಾರಿ ಮಳೆಯಾಗಿದೆ ಎಂದು ಇಲ್ಲಿನ ಹವಾಮಾನ ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
-
ಬೆಂಗಳೂರು vs ದೆಹಲಿ ಮೆಟ್ರೋ: ಲಗೇಜ್ ಶುಲ್ಕದ ವ್ಯತ್ಯಾಸಗಳ ಚರ್ಚೆ, ನೆಟ್ಟಿಗರ ಮಿಶ್ರ ಪ್ರತಿಕ್ರಿಯೆ -
Karnataka Rains: ರಾಜ್ಯಾದ್ಯಂತ ಏಪ್ರಿಲ್ 20ರ ತನಕ ಮಳೆ, 6 ಜಿಲ್ಲೆಗಳಿಗೆ ಉಷ್ಣ ಅಲೆ ಮುನ್ಸೂಚನೆ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications