150ನೇ ಗಾಂಧಿ ಜಯಂತಿ, ರಾಷ್ಟ್ರ ನಾಯಕರಿಂದ 'ಸತ್ಯಮೂರ್ತಿ'ಗೆ ಗೌರವ
ನವದೆಹಲಿ, ಅಕ್ಟೋಬರ್ 02: ಜಗತ್ತಿಗೆ ಶಾಂತಿ, ಸತ್ಯ ಅಹಿಂಸೆಯ ಮಂತ್ರ ಹೇಳಿಕೊಟ್ಟ ರಾಷ್ಟ್ರಪಿತ ಮಹಾತ್ಮಾ ಗಾಂಧಿ ಅವರ 150ನೇ ಜನ್ಮದಿನವಾದ ಇಂದು ದೇಶದ ಗಣ್ಯರು ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು.
ಮುಂಜಾನೆಯೇ ಗಾಂಧಿ ಅವರ ಸ್ಮಾರಕ ಸ್ಥಳವಾದ ರಾಜ್ಘಾಟ್ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಹೂಗುಚ್ಛ ಇರಿಸಿ ಗಾಂಧಿ ಅವರಿಗೆ ಶಿರಬಾಗಿ ನಮಿಸಿದರು. ರಾಷ್ಟ್ರಪತಿ ರಮಾನಾಥ ಕೋವಿಂದ್ ಸಹ ಗಾಂಧಿ ಅವರ ಸ್ಮಾರಕಕ್ಕೆ ನಮಿಸಿದರು.

ಎಐಸಿಸಿ ಮಾಜಿ ಅಧ್ಯಕ್ಷೆ ಸೊನಿಯಾ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸಹ ರಾಜ್ಘಾಟ್ಗೆ ಭೇಟಿ ನೀಡಿ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.

ಹಲವು ರಾಜ್ಯಗಳಲ್ಲಿ ರಾಜ್ಯಗಳ ಪ್ರಮುಖ ಮಹಾತ್ಮಾ ಗಾಂಧಿ ಅವರ 150ನೇ ಜಯಂತ್ಯುತ್ಸವವನ್ನು ಆಚರಿಸಿದರು. ಉತ್ತರ ಪ್ರದೇಶದ ಸಿಎಂ ಯೋಗಿ ಅವರು ಭಜನೆಯಲ್ಲಿ ಪಾಲ್ಗೊಂಡು ಗಾಂಧಿ ಅವರನ್ನು ಸ್ಮರಿಸಿಕೊಂಡರು. ಮಹಾರಾಷ್ಟ್ರ ಸಿಎಂ ದೇವೇಂದ್ರ ಪಡ್ಣವೀಸ್ ಅವರು ಸಹ ಭಜನೆ ಮಾಡಿ ರಾಷ್ಟ್ರಪಿತರನ್ನು ಸ್ಮರಿಸಿದರು.

ಕುಮಾರಸ್ವಾಮಿ ಅವರು ಕೂಡ ರಾಷ್ಟ್ರಪಿತರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿದರು. ಗಾಂಧಿ ಅವರ ನೆನಪಲ್ಲಿ ಸರ್ಕಾರ ಹಾಗೂ ಖಾಸಗಿ ಸಂಸ್ಥೆಗಳು ಆಯೋಜಿಸಿರುವ ಹಲವು ಕಾರ್ಯಕ್ರಮಗಳಲ್ಲಿ ಕುಮಾರಸ್ವಾಮಿ ಅವರು ಇಂದು ಭಾಗವಹಿಸಲಿದ್ದಾರೆ.

ಮಹಾತ್ಮಾ ಗಾಂಧಿ ಅವರ ಜೊತೆಗೆ ದೇಶದ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯೂ ಇಂದು ಹೌದು. ಅವರಿಗೂ ರಾಷ್ಟ್ರದ ನಾಯಕರು ಗೌರವ ಸಮರ್ಪಿಸಿದರು.












Click it and Unblock the Notifications