Get Updates
Get notified of breaking news, exclusive insights, and must-see stories!

Bandh: ಇದೇ ಮಾರ್ಚ್‌ 24ರಿಂದ ಎರಡು ದಿನ ಬಂದ್‌ ಘೋಷಣೆ

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಇದೇ ಮಾರ್ಚ್ 24 ಮತ್ತು 25ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಬಂದ್‌ ಘೋಷಿಸಲಾಗಿದೆ. ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ರಾಷ್ಟ್ರವ್ಯಾಪಿ ಮುಷ್ಕರವನ್ನು ನಿಗದಿಪಡಿಸಿದಂತೆ ಆಚರಿಸಲಾಗುವುದು ಎಂದು ಸ್ಪಷ್ಟಪಡಿಸಿದೆ. ಈ ಎರಡೂ ದಿನ ದೇಶವ್ಯಾಪಿ ಬ್ಯಾಂಕಿಂಗ್‌ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ತಮ್ಮ ಬೇಡಿಕೆಗಳ ಕುರಿತು ಭಾರತೀಯ ಬ್ಯಾಂಕುಗಳ ಸಂಘದ (ಐಬಿಎ) ಜೊತೆ ನಡೆದ ಚರ್ಚೆಗಳು ಯಶಸ್ವಿಯಾಗದ ಕಾರಣ ಮುಷ್ಕರ ನಡೆಸಲು ಬ್ಯಾಂಕ್‌ ಸಿಬ್ಬಂದಿ ಮುಂದಾಗಿದ್ದಾರೆ.

ಐಬಿಎ ಜೊತೆಗಿನ ಸಭೆಯಲ್ಲಿ ಎಲ್ಲಾ ಯುಎಫ್‌ಬಿಯು ಘಟಕಗಳು ನೇಮಕಾತಿ ಮತ್ತು ವಾರದಲ್ಲಿ ಐದು ದಿನಗಳ ಮಾತ್ರ ಕೆಲಸ ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟವು. ಆದರೂ ಇನ್ನೂ ಪ್ರಮುಖ ಸಮಸ್ಯೆಗಳು ಬಗೆಹರಿಯದೆ ಹಾಗೆಯೇ ಉಳಿದಿವೆ ಎಂದು ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟದ (ಎನ್‌ಸಿಬಿಇ) ಪ್ರಧಾನ ಕಾರ್ಯದರ್ಶಿ ಎಲ್.ಚಂದ್ರಶೇಖರ್ ಹೇಳಿದ್ದಾರೆ.

Nationwide Bank Strike On March 24 And 25 By United Forum Of Bank Unions

ಸುಮಾರು ಒಂಬತ್ತು ಬ್ಯಾಂಕ್ ನೌಕರರ ಸಂಘಗಳ ಒಕ್ಕೂಟವಾದ ಯುಎಫ್‌ಬಿಯು, ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಕಾರ್ಮಿಕರು ಮತ್ತು ಅಧಿಕಾರಿ ನಿರ್ದೇಶಕ ಹುದ್ದೆಗಳನ್ನು ಭರ್ತಿ ಮಾಡುವುದೂ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಒತ್ತಾಯಿಸಲು ಈ ಹಿಂದೆಯೇ ಬಂದ್‌ ಘೋಷಿಸಿತ್ತು. ಈ ಹಿಂದೆ ಹಣಕಾಸು ಸೇವೆಗಳ ಇಲಾಖೆ (ಡಿಎಫ್‌ಎಸ್‌) ಇತ್ತೀಚೆಗೆ ಹೊರಡಿಸಿದ ನಿರ್ದೇಶನಗಳನ್ನು ಕೂಡ ಹಿಂಪಡೆಯುವಂತೆ ಒಕ್ಕೂಟಗಳು ಒತ್ತಾಯಿಸಿವೆ. ಇವು ಉದ್ಯೋಗ ಭದ್ರತೆಗೆ ಮತ್ತು ಉದ್ಯೋಗಿಗಳ ಸೃಷ್ಟಿಗೆ ಅಪಾಯವನ್ನುಂಟುಮಾಡುತ್ತವೆ ಎಂದು ಅವು ದೂರಿವೆ.

ಸಾರ್ವಜನಿಕ ವಲಯದ ಬ್ಯಾಂಕುಗಳ ಸೂಕ್ಷ್ಮ ನಿರ್ವಹಣೆಯಂತಹ ಹೆಸರಿನಲ್ಲಿ ಹಸ್ತಕ್ಷೇಪಗಳು ಬ್ಯಾಂಕ್ ಮಂಡಳಿಗಳ ಸ್ವಾಯತ್ತತೆಯನ್ನು ಹಾಳುಮಾಡುತ್ತದೆ ಎಂದು ವಾದಿಸಿದೆ. ಇತರ ಬೇಡಿಕೆಗಳಲ್ಲಿ ಐಬಿಎ ಜೊತೆ ಉಳಿದಿರುವ ಸಮಸ್ಯೆಗಳನ್ನು ಪರಿಹರಿಸುವುದು, ಗ್ರಾಚ್ಯುಟಿ ಕಾಯ್ದೆಯನ್ನು ತಿದ್ದುಪಡಿ ಮಾಡಿ ಗರಿಷ್ಠ ಮಿತಿಯನ್ನು ₹25 ಲಕ್ಷಕ್ಕೆ ಹೆಚ್ಚಿಸುವುದು, ಸರ್ಕಾರಿ ನೌಕರರ ಯೋಜನೆಯೊಂದಿಗೆ ಅದನ್ನು ಸಂಯೋಜಿಸುವುದು, ಆದಾಯ ತೆರಿಗೆಯಿಂದ ವಿನಾಯಿತಿ ಪಡೆಯುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಮುಂದಿಟ್ಟಿದೆ.

Nationwide Bank Strike On March 24 And 25 By United Forum Of Bank Unions

ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್, ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಒಕ್ಕೂಟ, ರಾಷ್ಟ್ರೀಯ ಬ್ಯಾಂಕ್ ನೌಕರರ ಒಕ್ಕೂಟ ಮತ್ತು ಅಖಿಲ ಭಾರತ ಬ್ಯಾಂಕ್ ಅಧಿಕಾರಿಗಳ ಸಂಘ ಸೇರಿದಂತೆ ಪ್ರಮುಖ ಬ್ಯಾಂಕ್ ಒಕ್ಕೂಟಗಳು ಈ ಬಂದ್‌ಗೆ ಬೆಂಬಲ ಸೂಚಿಸಿವೆ. ಹಾಗಾಗಿ ಅಂದು ಕರ್ನಾಟಕ ಸೇರಿದಂತೆ ದೇಶದೆಲ್ಲೆಡೆ ಮುಷ್ಕರ ನಡೆಸಲು ಬ್ಯಾಂಕ್‌ ಸಿಬ್ಬಂದಿ ನಿರ್ಧರಿಸಿದ್ದಾರೆ.

ಭಾರತದಾದ್ಯಂತ ಬ್ಯಾಂಕ್ ನೌಕರರು ಪ್ರತಿಭಟನೆ ನಡೆಸಿ, ಸಿಬ್ಬಂದಿ ಕೊರತೆಯನ್ನು ನೀಗಿಸಲು ವಾರದಲ್ಲಿ 5 ದಿನಗಳ ಕೆಲಸ ಮತ್ತು ಖಾಯಂ ನೇಮಕಾತಿಗೆ ಒತ್ತಾಯಿಸುತ್ತಿದ್ದಾರೆ. ಬ್ಯಾಂಕಿಂಗ್ ವಲಯದಲ್ಲಿ ಖಾಸಗೀಕರಣ, ಅನ್ಯಾಯದ ಕಾರ್ಮಿಕ ಪದ್ಧತಿಗಳನ್ನು ವಿರೋಧಿಸಿದ್ದಾರೆ. ಈಗಾಗಲೇ ನಡೆಸಿರುವ ಪ್ರತಿಭಟನೆಗಳು ದೊಡ್ಡ ಚಳುವಳಿಯ ಭಾಗವಾಗಿದ್ದು, ಇದೇ ಮಾರ್ಚ್ 24 ಮತ್ತು 25ರಂದು ಯೋಜಿಸಿರುವ ರಾಷ್ಟ್ರವ್ಯಾಪಿ ಮುಷ್ಕರ ತೀವ್ರಗೊಳ್ಳಲಿದೆ. ತಮ್ಮ ಬೇಡಿಕೆಗಳು ಈಡೇರದಿದ್ದರೆ ಪ್ರತಿಭಟನೆ ಸ್ವರೂಪ ಮತ್ತಷ್ಟು ಪರಿಣಾಮಕಾರಿಯಾಗಿರಲಿದೆ ಎಂದು ಎಚ್ಚರಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+