ದೇಶಾದ್ಯಂತ ಟ್ರಕ್ ಚಾಲಕರ ಮುಷ್ಕರ: ಗೃಹ ಸಚಿವಾಲಯದಿಂದ ಸಭೆ
ನವದೆಹಲಿ, ಜನವರಿ 02: ಹೊಸದಾಗಿ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಅಪಘಾತ ಹಿಟ್ ಮತ್ತು ರನ್ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಯ ವಿರುದ್ಧ ಚಾಲಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಪ್ರತಿಭಟನಾನಿರತ ಟ್ರಕ್ಕರ್ಗಳೊಂದಿಗೆ ಪ್ರಮುಖ ಸಭೆ ನಡೆಸಲಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಇಂದು ಸಂಜೆ ಸಾರಿಗೆ ಸಂಘದ ಸದಸ್ಯರನ್ನು ಭೇಟಿ ಮಾಡಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಸೂಚಿಸುವುದಾಗಿ ತಿಳಿಸಿದರು. ಹಿಟ್ ಅಂಡ್ ರನ್ ಪ್ರಕರಣಗಳ ಮೇಲಿನ ಹೊಸ ದಂಡ ಕಾನೂನಿನಲ್ಲಿನ ನಿಬಂಧನೆಯ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಟ್ರಕ್ ಡ್ರೈವರ್ಗಳ ಮುಷ್ಕರವು ಇಂಧನ ಖರೀದಿಯ ಭರಾಟೆಯನ್ನು ಉಂಟುಮಾಡಿದೆ. ಪೂರೈಕೆ ಕೊರತೆಯ ಭಯದಿಂದ ಜನರು ಇಂಧನ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ.

"ದೇಶದಲ್ಲಿ ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ (ಎಐಎಂಟಿಸಿ) ಟ್ರಕ್ಕರ್ಗಳ ಸಂಸ್ಥೆಯಿಂದ ಯಾವುದೇ ರಾಷ್ಟ್ರವ್ಯಾಪಿ ಮುಷ್ಕರವನ್ನು ಕಟ್ಟುನಿಟ್ಟಾಗಿ ಕರೆಯಲಾಗಿಲ್ಲ. ಎಲ್ಲಾ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗುವುದು. ಅವರು ಇಂದು ಸಂಜೆ ನಂತರ ಗೃಹ ಕಾರ್ಯದರ್ಶಿ (ಅಜಯ್ ಭಲ್ಲಾ) ಅವರನ್ನು ಭೇಟಿಯಾಗುತ್ತಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಹೊಸ ನಿಬಂಧನೆಯನ್ನು ಹಿಂಪಡೆಯಲಿ:
ಹೊಸ ಕಾನೂನನ್ನು ಹಿಂಪಡೆಯುವ ಬೇಡಿಕೆಯನ್ನು ಬೆಂಬಲಿಸಿ ದೇಶಾದ್ಯಂತ ಟ್ರಕ್ಕರ್ಗಳ ಮಾತೃ ಸಂಸ್ಥೆಯಾದ ಎಐಎಂಟಿಸಿ ಇದುವರೆಗೆ ರಾಷ್ಟ್ರವ್ಯಾಪಿ ಚಾಲಕರಿಗೆ ಮುಷ್ಕರಕ್ಕೆ ಕರೆ ನೀಡದಿದ್ದರೂ, ಇದರ ಪದಾಧಿಕಾರಿಗಳು ಸರ್ಕಾರವು ಈ ನಿಬಂಧನೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ರಾಷ್ಟ್ರವ್ಯಾಪಿ ಟ್ರಕ್ಕರ್ಗಳ ಮಾತೃ ಸಂಸ್ಥೆಯಾಗಿರುವ ಎಐಎಂಟಿಸಿಯ ಪದಾಧಿಕಾರಿಗಳು, ಚಾಲಕರ ಹಿತಾಸಕ್ತಿಗೆ ವಿರುದ್ಧಚಾದ ನಿಬಂಧನೆಗಳನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಎಐಎಂಟಿಸಿ ಅಧ್ಯಕ್ಷ ಅಮೃತಲಾಲ್ ಮದನ್ ಮಾತನಾಡಿ, ಟ್ರಕ್ಕರ್ಸ್ ಅಸೋಸಿಯೇಷನ್ ಸಭೆಯ ನಂತರ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.
ಹೊಸ ಹಿಟ್ ಮತ್ತು ರನ್ ಕಾನೂನು:
ಹಿಂದೆ ಚಾಲ್ತಿಯಲ್ಲಿದ್ದ ಭಾರತೀಯ ದಂಡ ಸಂಹಿತೆಯನ್ನು (ಐಪಿಸಿ) ಬದಲಿಸಿದ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಚಾಲಕನು ನಿರ್ಲಕ್ಷ್ಯದ ಚಾಲನೆಯಿಂದ ಗಂಭೀರವಾದ ರಸ್ತೆ ಅಪಘಾತದ ಆರೋಪಿಯಾಗಿದ್ದರೆ ಮತ್ತು ಅವನು ಪೊಲೀಸರಿಗೆ ಅಥವಾ ಆಡಳಿತದ ಯಾವುದೇ ಅಧಿಕಾರಿಗೆ ತಿಳಿಸದೆ ಪಲಾಯನ ಮಾಡಿದರೆ 10 ವರ್ಷಗಳವರೆಗೆ ಅಥವಾ 7 ಲಕ್ಷ ರೂ. ದಂಡ ಇರುತ್ತದೆ. ಆದರೆ ಹಿಂದಿನ ಕಾನೂನಿನಲ್ಲಿ ಈ ಮಾದರಿ ಪ್ರಕರಣಗಳಲ್ಲಿ ಶಿಕ್ಷೆ 2 ವರ್ಷಗಳು ಶಿಕ್ಷೆಗೆ ಇತ್ತು.
ಹೊಸ ನಿಬಂಧನೆಗಳನ್ನು ವಿರೋಧಿಸಿ ಮಹಾರಾಷ್ಟ್ರ, ಪಂಜಾಬ್, ಮಧ್ಯಪ್ರದೇಶ, ಮತ್ತು ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಚಾಲಕರ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಕೊರತೆಗೆ ಕಾರಣವಾಗಬಹುದು ಎಂಬ ಭಯದಿಂದ ಪೆಟ್ರೋಲ್ ಪಂಪ್ಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿತು.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications