ದೇಶಾದ್ಯಂತ ಟ್ರಕ್ ಚಾಲಕರ ಮುಷ್ಕರ: ಗೃಹ ಸಚಿವಾಲಯದಿಂದ ಸಭೆ
ನವದೆಹಲಿ, ಜನವರಿ 02: ಹೊಸದಾಗಿ ಜಾರಿಗೆ ಬಂದಿರುವ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಅಪಘಾತ ಹಿಟ್ ಮತ್ತು ರನ್ ಪ್ರಕರಣಗಳಲ್ಲಿ ಕಠಿಣ ಶಿಕ್ಷೆಯ ವಿರುದ್ಧ ಚಾಲಕರು ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ನಡುವೆ ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಪ್ರತಿಭಟನಾನಿರತ ಟ್ರಕ್ಕರ್ಗಳೊಂದಿಗೆ ಪ್ರಮುಖ ಸಭೆ ನಡೆಸಲಿದೆ.
ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ ಅವರು ಇಂದು ಸಂಜೆ ಸಾರಿಗೆ ಸಂಘದ ಸದಸ್ಯರನ್ನು ಭೇಟಿ ಮಾಡಿ ಸಮಸ್ಯೆಗೆ ಸೌಹಾರ್ದಯುತ ಪರಿಹಾರ ಸೂಚಿಸುವುದಾಗಿ ತಿಳಿಸಿದರು. ಹಿಟ್ ಅಂಡ್ ರನ್ ಪ್ರಕರಣಗಳ ಮೇಲಿನ ಹೊಸ ದಂಡ ಕಾನೂನಿನಲ್ಲಿನ ನಿಬಂಧನೆಯ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಟ್ರಕ್ ಡ್ರೈವರ್ಗಳ ಮುಷ್ಕರವು ಇಂಧನ ಖರೀದಿಯ ಭರಾಟೆಯನ್ನು ಉಂಟುಮಾಡಿದೆ. ಪೂರೈಕೆ ಕೊರತೆಯ ಭಯದಿಂದ ಜನರು ಇಂಧನ ಕೇಂದ್ರಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸರತಿ ಸಾಲಿನಲ್ಲಿ ನಿಂತಿದ್ದಾರೆ.

"ದೇಶದಲ್ಲಿ ಅಖಿಲ ಭಾರತ ಮೋಟಾರ್ ಟ್ರಾನ್ಸ್ಪೋರ್ಟ್ ಕಾಂಗ್ರೆಸ್ (ಎಐಎಂಟಿಸಿ) ಟ್ರಕ್ಕರ್ಗಳ ಸಂಸ್ಥೆಯಿಂದ ಯಾವುದೇ ರಾಷ್ಟ್ರವ್ಯಾಪಿ ಮುಷ್ಕರವನ್ನು ಕಟ್ಟುನಿಟ್ಟಾಗಿ ಕರೆಯಲಾಗಿಲ್ಲ. ಎಲ್ಲಾ ಸಮಸ್ಯೆಗಳನ್ನು ಸೌಹಾರ್ದಯುತವಾಗಿ ಪರಿಹರಿಸಲಾಗುವುದು. ಅವರು ಇಂದು ಸಂಜೆ ನಂತರ ಗೃಹ ಕಾರ್ಯದರ್ಶಿ (ಅಜಯ್ ಭಲ್ಲಾ) ಅವರನ್ನು ಭೇಟಿಯಾಗುತ್ತಿದ್ದಾರೆ ಎಂದು ಅಧಿಕೃತ ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಹೊಸ ನಿಬಂಧನೆಯನ್ನು ಹಿಂಪಡೆಯಲಿ:
ಹೊಸ ಕಾನೂನನ್ನು ಹಿಂಪಡೆಯುವ ಬೇಡಿಕೆಯನ್ನು ಬೆಂಬಲಿಸಿ ದೇಶಾದ್ಯಂತ ಟ್ರಕ್ಕರ್ಗಳ ಮಾತೃ ಸಂಸ್ಥೆಯಾದ ಎಐಎಂಟಿಸಿ ಇದುವರೆಗೆ ರಾಷ್ಟ್ರವ್ಯಾಪಿ ಚಾಲಕರಿಗೆ ಮುಷ್ಕರಕ್ಕೆ ಕರೆ ನೀಡದಿದ್ದರೂ, ಇದರ ಪದಾಧಿಕಾರಿಗಳು ಸರ್ಕಾರವು ಈ ನಿಬಂಧನೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ರಾಷ್ಟ್ರವ್ಯಾಪಿ ಟ್ರಕ್ಕರ್ಗಳ ಮಾತೃ ಸಂಸ್ಥೆಯಾಗಿರುವ ಎಐಎಂಟಿಸಿಯ ಪದಾಧಿಕಾರಿಗಳು, ಚಾಲಕರ ಹಿತಾಸಕ್ತಿಗೆ ವಿರುದ್ಧಚಾದ ನಿಬಂಧನೆಗಳನ್ನು ಸರ್ಕಾರ ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಎಐಎಂಟಿಸಿ ಅಧ್ಯಕ್ಷ ಅಮೃತಲಾಲ್ ಮದನ್ ಮಾತನಾಡಿ, ಟ್ರಕ್ಕರ್ಸ್ ಅಸೋಸಿಯೇಷನ್ ಸಭೆಯ ನಂತರ ಮುಂದಿನ ಕ್ರಮವನ್ನು ನಿರ್ಧರಿಸುತ್ತದೆ ಎಂದು ತಿಳಿಸಿದ್ದಾರೆ.
ಹೊಸ ಹಿಟ್ ಮತ್ತು ರನ್ ಕಾನೂನು:
ಹಿಂದೆ ಚಾಲ್ತಿಯಲ್ಲಿದ್ದ ಭಾರತೀಯ ದಂಡ ಸಂಹಿತೆಯನ್ನು (ಐಪಿಸಿ) ಬದಲಿಸಿದ ಭಾರತೀಯ ನ್ಯಾಯ ಸಂಹಿತಾ ಅಡಿಯಲ್ಲಿ ಚಾಲಕನು ನಿರ್ಲಕ್ಷ್ಯದ ಚಾಲನೆಯಿಂದ ಗಂಭೀರವಾದ ರಸ್ತೆ ಅಪಘಾತದ ಆರೋಪಿಯಾಗಿದ್ದರೆ ಮತ್ತು ಅವನು ಪೊಲೀಸರಿಗೆ ಅಥವಾ ಆಡಳಿತದ ಯಾವುದೇ ಅಧಿಕಾರಿಗೆ ತಿಳಿಸದೆ ಪಲಾಯನ ಮಾಡಿದರೆ 10 ವರ್ಷಗಳವರೆಗೆ ಅಥವಾ 7 ಲಕ್ಷ ರೂ. ದಂಡ ಇರುತ್ತದೆ. ಆದರೆ ಹಿಂದಿನ ಕಾನೂನಿನಲ್ಲಿ ಈ ಮಾದರಿ ಪ್ರಕರಣಗಳಲ್ಲಿ ಶಿಕ್ಷೆ 2 ವರ್ಷಗಳು ಶಿಕ್ಷೆಗೆ ಇತ್ತು.
ಹೊಸ ನಿಬಂಧನೆಗಳನ್ನು ವಿರೋಧಿಸಿ ಮಹಾರಾಷ್ಟ್ರ, ಪಂಜಾಬ್, ಮಧ್ಯಪ್ರದೇಶ, ಮತ್ತು ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರ ಸೇರಿದಂತೆ ಹಲವು ರಾಜ್ಯಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ಚಾಲಕರ ಪ್ರತಿಭಟನೆಗಳಿಂದ ಇಂಧನ ಪೂರೈಕೆ ಕೊರತೆಗೆ ಕಾರಣವಾಗಬಹುದು ಎಂಬ ಭಯದಿಂದ ಪೆಟ್ರೋಲ್ ಪಂಪ್ಗಳಲ್ಲಿ ಜನರು ಸರತಿ ಸಾಲಿನಲ್ಲಿ ನಿಲ್ಲುವಂತೆ ಮಾಡಿತು.
-
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು












Click it and Unblock the Notifications