Get Updates
Get notified of breaking news, exclusive insights, and must-see stories!

ಹೆಚ್ಚು ಪ್ರಕೃತಿ ವಿಕೋಪ:ಕರ್ನಾಟಕಕ್ಕೆ ಆರನೇ ಸ್ಥಾನ

ಬೆಂಗಳೂರು, ಜೂನ್ 11: ನೈಸರ್ಗಿಕ ವಿಕೋಪಗಳು ಸಂಭವಿಸುವುದು ಸರ್ವೇ ಸಾಮಾನ್ಯ ಆದರೆ ಅದರಿಂದ ಹೆಚ್ಚು ಹಾನಿಗೊಳಗಾಗುವ ರಾಜ್ಯಗಳು ಯಾವುದು ಎಂದು ನಾವು ನೋಡಬೇಕಿದೆ. ಅತಿ ಹೆಚ್ಚಿನ ಪ್ರಾಣ ಹಾನಿ, ಆಸ್ತಿ ಹಾನಿಗಳಾಗುವ ರಾಜ್ಯಗಳ ಪೈಕಿ ಕರ್ನಾಟಕವು 6 ನೇ ಸ್ಥಾನದಲ್ಲಿದೆ.

ಯುನೈಟೆಡ್ ನೇಷನ್ಸ್‌ ಡೆವಲಪ್‌ಮೆಂಟ್ ಪ್ರೋಗ್ರಾಂ ಸಹಯೋಗದಲ್ಲಿ ಕೇಂದ್ರ ಗೃಹ ಸಚಿವಾಲಯ ಸಿದ್ಧಪಡಿಸುತ್ತಿರುವ ವರದಿಯ ಕರಡು ಪ್ರತಿಯಲ್ಲಿ ಈ ಅಂಶಗಳನ್ನು ಉಲ್ಲೇಖಿಸಲಾಗಿದೆ. ದೇಶದ 640 ಜಿಲ್ಲೆಗಳ ಪೈಕಿ ವಿಕೋಪಕ್ಕೆ ತುತ್ತಾಗಿ ಹಾನಿ ಅನುಭವಿಸುವ ಅತಿ ಹೆಚ್ಚಿನ ಜಿಲ್ಲೆಗಳು ಮಹಾರಾಷ್ಟ್ರದಲ್ಲಿದದು, ಪಶ್ಚಿಮ ಬಂಗಾಳ 2 ನೇ ಸ್ಥಾನದಲ್ಲಿದೆ.

ಹೆಚ್ಚು ಭೂಕಂಪನ, ಭೂಕುಸಿತ ಮತ್ತು ಪ್ರವಾಹಕ್ಕೆ ತುತ್ತಾಗುವ ಉತ್ತರಾಖಂಡ, ಹಿಮಾಚಲ ಪ್ರದೇಶ ಸೇರಿ ಈಶಾನ್ಯ ರಾಜ್ಯಗಳು ಪಟ್ಟಿಯಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಹಾನಿ ಕಡಿಮೆ ಮಾಡಲು ತೆಗೆದುಕೊಂಡ ನಿರ್ಧಾರ, ಕ್ರಮಗಳನ್ನು ಪರಿಗಣಿಸಿ ಆದಂತಹ ಕೃಷಿ ಹಾನಿ, ಜನರ ಮತ್ತು ಜಾನುವಾರುಗಳ ಪ್ರಾಣಹಾನಿ ಒಟ್ಟುಗೂಡಿಸಿ ವರದಿ ತಯಾರಿಸಲಾಗಿದೆ.

Natural disasters: Karnataka listed in most affected states

ಮೊದಲನೇ ಸ್ಥಾನದಲ್ಲಿ ಮಹಾರಾಷ್ಟ್ರ, 2 ನೇ ಸ್ಥಾನದಲ್ಲಿ ಪಶ್ಚಿಮ ಬಂಗಾಳ, 3 ನೇ ಸ್ಥಾನದಲ್ಲಿ ಉತ್ತರ ಪ್ರದೇಶ ಹಾಗೂ ಮಧ್ಯಪ್ರದೇಶ, ರಾಜಸ್ಥಾನ, ಕರ್ನಾಟಕ, ಅಸ್ಸಾಂ, ಆಂಧ್ರಪ್ರದೇಶ, ಗುಜರಾತ್ ಮತ್ತು ಬಿಹಾರ ಕ್ರಮವಾಗಿ 10 ನೇ ಸ್ಥಾನದಲ್ಲಿದೆ. ಗುಜರಾತ್, ತಮಿಳುನಾಡು,, ಅಸ್ಸಾಂ, ತ್ರಿಪುರ ಮತ್ತು ಹಿಮಾಚಲ ಪ್ರದೇಶದಂತಹ ರಾಜ್ಯಗಳು ವಿಕೋಪ ತಡೆಗಟ್ಟಲು ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+