ಒಡಿಶಾ: ಅತ್ತ ಪುರುಷರ ಹಾಕಿ ವಿಶ್ವಕಪ್, ಇತ್ತ ರಾಜಕೀಯ ಆಟವಾಡುವತ್ತ ಮುಖ್ಯಮಂತ್ರಿ ನವೀನ್ ಪಟ್ನಾಯಕ್ !
ಭುವನೇಶ್ವರ, ಡಿ. 27: ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಮತ್ತು ಕಾಂಗ್ರೆಸ್ ನಡುವಿನ ರಾಜಕೀಯ ಅಂತರವು ಜನವರಿಯಲ್ಲಿ ನಡೆಯಲಿರುವ ಪುರುಷರ ಎಫ್ಐಎಚ್ ಹಾಕಿ ವಿಶ್ವಕಪ್ನಲ್ಲಿ ತಾತ್ಕಾಲಿಕವಾಗಿ ಕುಗ್ಗುವ ಸಾಧ್ಯತೆಯಿದೆ.
ಹೌದು, ಬಿಜು ಜನತಾ ದಳದ ಅಧ್ಯಕ್ಷ, ಸಿಎಂ ನವೀನ್ ಪಟ್ನಾಯಕ್, ರೂರ್ಕೆಲಾದಲ್ಲಿ ನಡೆಯಲಿರುವ ಪುರುಷರ ಹಾಕಿ ವಿಶ್ವಕಪ್ ಉದ್ಘಾಟನಾ ಕಾರ್ಯಕ್ರಮಕ್ಕೆ ಎಲ್ಲಾ ವಿರೋಧ ಪಕ್ಷದ ಮುಖ್ಯಮಂತ್ರಿಗಳನ್ನು ಆಹ್ವಾನಿಸಿದ್ದಾರೆ.
ಮೂರು ಕಾಂಗ್ರೆಸ್ ಮುಖ್ಯಮಂತ್ರಿಗಳಾದ ರಾಜಸ್ಥಾನದ ಅಶೋಕ್ ಗೆಹ್ಲೋಟ್, ಛತ್ತೀಸ್ಗಢದ ಭೂಪೇಶ್ ಬಾಘೇಲ್ ಮತ್ತು ಹಿಮಾಚಲ ಪ್ರದೇಶದ ಸುಖವಿಂದರ್ ಸಿಂಗ್ ಸುಖು ಅವರು ಈ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.

"ಮೂವರು ಮುಖ್ಯಮಂತ್ರಿಗಳು ನವೀನ್ ಪಟ್ನಾಯಕ್ ಅವರಿಂದ ಆಹ್ವಾನವನ್ನು ಸ್ವೀಕರಿಸಿದ್ದಾರೆ. ಮೂವರು ಕಾರ್ಯಕ್ರಮಕ್ಕೆ ಹಾಜರಾಗುವುದಾಗಿ ಖಚಿತಪಡಿಸಿದ್ದಾರೆ" ಎಂದು ಕಾಂಗ್ರೆಸ್ ಕಾರ್ಯಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸತತವಾಗಿ ಎರಡನೇ ಬಾರಿಗೆ 2023 ರ ಹಾಕಿ ಪುರುಷರ ವಿಶ್ವಕಪ್ ಅನ್ನು ಆಯೋಜಿಸುವ ಈ ಅವಕಾಶ ರಾಜ್ಯಕ್ಕೆ ಹೆಮ್ಮೆಯ ಕ್ಷಣ ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ಮೂವರು ಬಿಜೆಪಿಯೇತರ ಮುಖ್ಯಮಂತ್ರಿಗಳನ್ನು ಕಾರ್ಯಕರಮಕ್ಕೆ ಕರೆದಿರುವ ಈ ಸಂದರ್ಭ ಪುರುಷರ ಹಾಕಿ ವಿಶ್ವಕಪ್ ಆಗಿದ್ದರೂ, ಕಾಂಗ್ರೆಸ್ ಮುಖ್ಯಮಂತ್ರಿಗಳು ಪಟ್ನಾಯಕ್ ಅವರ ಆಹ್ವಾನವನ್ನು ಸ್ವೀಕರಿಸುತ್ತಿರುವುದು ಅದರ ಮೂಲ ರಾಜಕೀಯ ಆಟ ಎಂಬುದನ್ನು ತೋರಿಸುತ್ತದೆ.

ನವೀನ್ ಪಟ್ನಾಯಕ್ ಅವರ ಬಿಜೆಡಿ ಕಾಂಗ್ರೆಸ್ ವಿರೋಧಿ ಸಂಘಟನೆಯಾಗಿದೆ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರ ಸರ್ಕಾರದಲ್ಲಿ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿಕೂಟದ ಮಿತ್ರ ಪಕ್ಷವಾಗಿದೆ. ಪಕ್ಷವು ಆಗಾಗ್ಗೆ ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತದೆ. ಪ್ರಮುಖ ಸರ್ಕಾರದ ಮಸೂದೆಗಳನ್ನು ಬೆಂಬಲಿಸಿದೆ. ಇತ್ತಿಚೀನ ರಾಷ್ಟ್ರಪತಿ ಮತ್ತು ಉಪರಾಷ್ಟ್ರಪತಿ ಚುನಾವಣೆಗಳಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳನ್ನು ಬಿಜು ಜನತಾ ದಳ ಬೆಂಬಲಿಸಿದೆ.
"ನಾವು ನವೀನ್ ಪಟ್ನಾಯಕ್ ಅವರನ್ನು ಭೇಟಿಯಾಗುವ ಯಾವುದೇ ಅವಕಾಶವನ್ನು ಕಳೆದುಕೊಳ್ಳುವುದಿಲ್ಲ. ಸಾಧ್ಯವಿರುವ ಎಲ್ಲ ಬಿಜೆಪಿಯೇತರ ಶಕ್ತಿಗಳನ್ನು ಒಗ್ಗೂಡಿಸುವ ಪ್ರಯತ್ನ ನಮ್ಮದಾಗಿದೆ" ಎಂದು ಕಾಂಗ್ರೆಸ್ ಕಾರ್ಯಕಾರಿ ಹೇಳಿದ್ದಾರೆ.
ಒಂದು ಕಾಲದಲ್ಲಿ ಬಿಜೆಪಿಯ ಅತ್ಯಂತ ಹಳೆಯ ಮಿತ್ರ ಪಕ್ಷವಾಗಿದ್ದ ಶಿವಸೇನೆಯು 2019 ರಲ್ಲಿ ಕಾಂಗ್ರೆಸ್ನೊಂದಿಗೆ ಮಹಾರಾಷ್ಟ್ರದಲ್ಲಿ ಸಮ್ಮಿಶ್ರ ಸರ್ಕಾರವನ್ನು ರಚಿಸಿತ್ತು. ಹೀಗಾಗಿ, ಬಿಜೆಡಿಯೊಂದಿಗೆ ರಾಜಕೀಯವಾಗಿಯೂ ಕಾಂಗ್ರೆಸ್ ಈ ಬೇಟಿಯನ್ನು ನೋಡುತ್ತಿದೆ.
ಇನ್ನು, ಉದ್ಘಾಟನಾ ಸಮಾರಂಭದಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಮತ್ತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಕೂಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ.
ಒಡಿಶಾದ ಕ್ರೀಡಾ ಮತ್ತು ಯುವ ವ್ಯವಹಾರಗಳ ಸಚಿವ ತುಷಾರಕಾಂತಿ ಬೆಹೆರಾ ಮತ್ತು ಹಾಕಿ ಇಂಡಿಯಾ ಅಧ್ಯಕ್ಷ, ಬಿಜೆಡಿ ಮಾಜಿ ಸಂಸದ ದಿಲೀಪ್ ಟಿರ್ಕೆ ಅವರು ಕೇಂದ್ರ ಸಚಿವರಾದ ಅನುರಾಗ್ ಠಾಕೂರ್, ಅಶ್ವಿನ್ ವೈಷ್ಣವ್, ಕಿರಣ್ ರಿಜಿಜು ಮತ್ತು ಧರ್ಮೇಂದ್ರ ಪ್ರಧಾನ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿದ್ದಾರೆ ಎಂದು ಬಿಜೆಪಿ ನಾಯಕರೊಬ್ಬರು ತಿಳಿಸಿದ್ದಾರೆ.
-
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಈ ನಿರ್ಧಾರ ಎಲ್ಲರಿಗೂ ಮೇಲ್ಪಂಕ್ತಿಯಾಗಲಿ: ಪ್ರತಾಪ್ ಸಿಂಹ












Click it and Unblock the Notifications